
ನವದೆಹಲಿ(ಜು.20): ಕೊರೋನಾ ವೈರಸ್ ವಕ್ಕರಿಸಿದ ಬಳಿಕ ಸರ್ಕಾರ ಹಲವು ಅಂಕಿ ಅಂಶಗಳನ್ನು ಬಿಡುಗಡೆ ಮಾಡುತ್ತಿದೆ. ಕೊರೋನಾ ಸೋಂಕಿತರ ಸಂಖ್ಯೆ, ಗುಣಮುಖರ ಸಂಖ್ಯೆ, ಸಾವಿನ ಸಂಖ್ಯೆ ಮಾಹಿತಿಗಳು ಲಭ್ಯವಿದೆ. ಇದೀಗ ಸೆರೋ ಸಮೀಕ್ಷೆಯಲ್ಲಿ ಮತ್ತೊಂದು ಮಾಹಿತಿ ಬಯಲಾಗಿದೆ. ಭಾರತದಲ್ಲಿ ಬರೋಬ್ಬರಿ 40 ಕೋಟಿ ಮಂದಿ ಕೊರೋನಾ ಅಪಾಯದಲ್ಲಿದ್ದಾರೆ ಎಂದಿದೆ.
ಈ ಸಮೀಕ್ಷಾ ವರದಿ ಪ್ರಕಾರ ಭಾರತದಲ್ಲಿ ಇನ್ನೂ 40 ಕೋಟಿ ಜಜನ ಕೊರೋನಾ ಸೋಂಕಿನ ಅಪಾಯದಲ್ಲಿದ್ದಾರೆ ಎಂದಿದೆ. ಇದೇ ಅಧ್ಯಯನ ವರದಿ ಮತ್ತೊಂದು ಮಾಹಿತಿಯನ್ನು ಬಹಿರಂಗ ಪಡಿಸಿದೆ. ಭಾರತ ಶೇಕಡಾ 67.6% ಮಂದಿಯಲ್ಲಿ ಕೊರೋನಾ ವಿರುದ್ಧ ಹೋರಾಡಬಲ್ಲ ಪ್ರತಿಕಾಯಗಳು ಅಭಿವೃದ್ಧಿಯಾಗಿದೆ ಎಂದಿದೆ.
ಈ ವರದಿ ಕುರಿತು ಪ್ರತಿಕ್ರಿಯೆ ನೀಡಿರುವ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್) ಮುಖ್ಯಸ್ಥ ಡಾ. ಬಲರಾಮ್ ಭಾರ್ಗವ ಎಚ್ಚರಿಕೆ ಮರೆತರೆ ಅಪಾಯ ಕಟ್ಟಿಟ್ಟ ಬುತ್ತಿ. 2ನೇ ಅಲೆ ತಗ್ಗಿದರೂ ಅಪಾಯ ಕಡಿಮೆಯಾಗಿಲ್ಲ ಎಂದಿದ್ದಾರೆ.
sero ಸಮೀಕ್ಷೆ ಜೂನ್ ಹಾಗೂ ಜುಲೈ ತಿಂಗಳಲ್ಲಿ ನಡೆಸಲಾಗಿದೆ. 21 ರಾಜ್ಯಗಳ 70 ಜಿಲ್ಲೆಗಳಲ್ಲಿ ಈ ಸಮೀಕ್ಷೆ ನಡೆಸಲಾಗಿದೆ. 7,252 ಆರೋಗ್ಯ ಕಾರ್ಯಕರ್ತರು ಸೇರಿದಂತೆ 36,227 ಜನರ ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದಾರೆ. ಆರು ವರ್ಷಕ್ಕಿಂತ ಮೇಲ್ಪಟ್ಟ 67.6 ರಷ್ಟು ಭಾರತೀಯರು ಕೊರೋನಾ ಪ್ರತಿಕಾಯಗಳನ್ನು ಹೊಂದಿದ್ದಾರೆಂದು ವರದಿ ಹೇಳಿದೆ.
6 ರಿಂದ 17 ವರ್ಷದೊಳಗಿನ ಮಕ್ಕಳ ಪೈಕಿ ಶೇಕಡಾ 50ಕ್ಕಿಂತ ಹೆಚ್ಚಿನ ಮಕ್ಕಳ ದೇಹದಲ್ಲಿ ಕೋವಿಡ್ ವಿರುದ್ಧ ಹೋರಾಡಬಲ್ಲ ಪ್ರತಿಕಾಯಗಳನ್ನು ಹೊಂದಿದ್ದಾರೆ. ಆರೋಗ್ಯ ಕಾರ್ಯಕರ್ತರಲ್ಲಿ ಕೊರೋನಾ ವಿರುದ್ದ ಹೋರಾಡಬಲ್ಲ ಆ್ಯಂಟಿ ಬಾಡಿ ಶೇಕಡಾ 85ರಷ್ಟಿದೆ ಎಂದು ವರದಿ ಹೇಳುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ