
ಪಂಜಾಬ್(ಸೆ.19): ಕೇಂದ್ರ ಸರ್ಕಾರದ ಕೃಷಿ ಮಸೂದೆಗೆ ಭಾರಿ ಸಂಚಲನ ಸೃಷ್ಟಿಸಿದೆ. ಮಸೂದೆ ವಿರೋಧಿಸಿ ಹರ್ಸಿಮ್ರತ್ ಕೌರ್ ಬಾದಲ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇತ್ತ ರೈತರು ದೇಶದ ಹಲೆವಡೆ ಪ್ರತಿಭಟನೆ ನಡೆಸುತ್ತಿದ್ದಾರೆ. ಹೀಗೆ ಪಂಜಾಬ್ನ ಮುಕ್ತಸರ್ ಜಿಲ್ಲೆಯಲ್ಲಿ ಪ್ರತಿಭಟೆನೆ ಕಾವು ಹೆಚ್ಚಾಗಿದೆ. ಪ್ರತಿಭಟನೆ ವೇಳೆ ವಿಷ ಸೇವಿಸಿದ್ದ ರೈತನೋರ್ವ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.
'ರೈತರೇ ಬೆಲೆ ನಿಗದಿಪಡಿಸುವ ವ್ಯವಸ್ಥೆ ಬರಲಿ
ಮುಕ್ತಸರ್ ಜಿಲ್ಲೆಯ ಬಾದಲ್ ಗ್ರಾಮದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಭಾರತೀಯ ಕಿಸಾನ್ ಒಕ್ಕೂಟ ಈ ಪ್ರತಿಭಟನೆ ಆಯೋಜಿಸಿದೆ. ಪ್ರತಿಭಟನೆ ಕಾವು ಹೆಚ್ಚಾಗುತ್ತಿದ್ದಂತೆ ಪ್ರೀತಂ ಸಿಂಗ್ ಅನ್ನೋ ರೈತ ನಿನ್ನೆ(ಸೆ.18) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣವೇ ರೈತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿಲಾಗಿತ್ತು.
ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಇಂದು(ಸೆ.19) ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸೆಪ್ಟೆಂಬರ್ 15 ರಿಂದ ಪ್ರತಿಭಟನೆ ನಡೆಯುತ್ತಿದೆ. ಆತ್ಮಹತ್ಯೆ ಮಾಡಿಕೊಂಡ ರೈತ ಸೆ.15 ರಿಂದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಆದರೆ ದಿಢೀರ್ ಆತ್ಮಹತ್ಯೆಗೆ ಕಾರಣ ಏನು ಅನ್ನೋದು ತಿಳಿದುಬಂದಿಲ್ಲ ಎಂದು ಮುಕ್ತಸರ್ ಪೊಲೀಸರು ಹೇಳಿದ್ದಾರೆ.
ರೈತ ಪ್ರೀತಂ ಸಿಂಗ್ ಅತಿಯಾದ ಸಾಲ ಮಾಡಿಕೊಂಡಿದ್ದರು. ಆದರೆ ಬೆಳೆ ನಾಶ, ಬೆಳೆದ ಬೆಳೆಗೆ ಕೊರೋನಾ ಕಾರಣ ಮಾರುಕಟ್ಟೆಯೂ ಸಿಗಲಿಲ್ಲ. ಹೀಗಾಗಿ ಸಾಲ ಹಿಂತುರಿಗಿಸಲು ಕಷ್ಟವಾಗಿತ್ತು ಎಂದು ರೈತನ ಕುಟುಂಬ ಸದಸ್ಯರು ಹೇಳಿದ್ದಾರೆ.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ