ಯುಪಿ ಚುನಾವಣೆಗೆ ನಿಯೋಜಿತ 706 ಶಿಕ್ಷಕರು ಕೋವಿಡ್‌ಗೆ ಬಲಿ

Kannadaprabha News   | Asianet News
Published : May 07, 2021, 11:26 AM IST
ಯುಪಿ ಚುನಾವಣೆಗೆ ನಿಯೋಜಿತ 706 ಶಿಕ್ಷಕರು ಕೋವಿಡ್‌ಗೆ ಬಲಿ

ಸಾರಾಂಶ

ಚುನಾವಣೆಗೆ ನಿಯೋಜಿತರಾಗಿದ್ದ  ಶಿಕ್ಷಕರು ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಚುನಾವಣಾ ಕಾರ್ಯ ತೊಡಗಿದ್ದ 706 ಶಿಕ್ಷಕರು ಉತ್ತರ ಪ್ರದೇಶದಲ್ಲಿ ಕೊರೋನಾ ಮಹಾಮಾರಿಯಿಂದ ಮೃತಪಟ್ಟಿದ್ದಾರೆ. 

ಲಖನೌ (ಮೇ.07): ಉತ್ತರ ಪ್ರದೇಶದಲ್ಲಿ ಕಳೆದ ತಿಂಗಳು ನಡೆದ ಪಂಚಾಯತ್‌ ಚುನಾವಣಾ ಕಾರ್ಯಗಳಿಗೆ ನಿಯೋಜಿತರಾಗಿದ್ದ ಸಾವಿರಾರು ಶಿಕ್ಷಕರ ಪೈಕಿ 706 ಶಿಕ್ಷಕರು ಕೋವಿಡ್‌ಗೆ ಬಲಿಯಾಗಿದ್ದಾರೆ ಎಂಬ ಆತಂಕಕಾರಿ ಸಂಗತಿ ಬೆಳಕಿಗೆ ಬಂದಿದೆ.

ರಾಜ್ಯದಲ್ಲಿ ಸೋಂಕು ಹೆಚ್ಚಿದ್ದ ಏಪ್ರಿಲ್‌ ತಿಂಗಳಿನಲ್ಲಿ 8.69 ಲಕ್ಷ ವಿವಿಧ ಪಂಚಾಯತ್‌ ಹುದ್ದೆಗಳಿಗೆ ಚುನಾವಣೆ ನಡೆಸಲಾಗಿತ್ತು. 4 ಹಂತದಲ್ಲಿ ನಡೆದ ಚುನಾವಣೆಯಲ್ಲಿ 11.5 ಕೋಟಿ ಮತದಾರರು ಮತ ಚಲಾವಣೆ ಹಕ್ಕು ಹೊಂದಿದ್ದರು. ಈ ಚುನಾವಣೆಗೆ ಸಾಕಷ್ಟುವಿರೋಧದ ಹೊರತಾಗಿಯೂ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಲಾಗಿತ್ತು. ಹೀಗೆ ನಿಯೋಜನೆಗೊಂಡವರ ಪೈಕಿ, ಚುನಾವಣೆ ಮುಗಿದ ಬಳಿಕ 706 ಶಿಕ್ಷಕರು ಕೋವಿಡ್‌ಗೆ ಸಾವನ್ನಪ್ಪಿದ್ದಾರೆ ಎಂದು ಉತ್ತರಪ್ರದೇಶ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಆರೋಪಿಸಿದೆ. ಅಲ್ಲದೆ ಈ ಕುರಿತು ಅದು ರಾಜ್ಯ ಸರ್ಕಾರಕ್ಕೂ ಪತ್ರ ಬರೆದು ತನ್ನ ಅಸಮಾಧಾನ ತೋಡಿಕೊಂಡಿದೆ.

ಯುವಕ ಸಂಗ್ರಹಿಸಿದ ಆಕ್ಸಿಜನ್ ಸಿಲಿಂಡರ್ ಕಸಿದ ಯುಪಿ ಪೊಲೀಸ್; ಆಮ್ಲಜನಕ ಸಿಗದೆ ತಾಯಿ ಸಾವು! ..

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ ಪ್ರಧಾನ ಕಾರ‍್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ರಾಜ್ಯ ಸರ್ಕಾರ ಮತ್ತು ಚುನಾವಣಾ ಆಯೋಗದ ನಿರ್ಲಕ್ಷ್ಯತೆಯಿಂದಾಗಿ 706 ಶಿಕ್ಷಕರು ಸಾವಿಗೀಡಾಗಿದ್ದಾರೆ. ಚುನಾವಣೆ ಮೂಲಕ ರಾಜ್ಯ ಮತ್ತು ಆಯೋಗವು ಮಾನವೀಯತೆಯ ಮೇಲೆ ನಡೆದ ಅಪರಾಧವಾಗಿದೆ ಎಂದು ಕಿಡಿಕಾರಿದ್ದಾರೆ.

ಉತ್ತರ ಪ್ರದೇಶ ತಲುಪಿತು ಆಕ್ಸಿಜನ್ ಟ್ಯಾಂಕರ್ ಹೊತ್ತ ವಿಶೇಷ ರೈಲು; ಅರ್ಧ ಸಮಸ್ಯೆ ನಿವಾರಣೆ! .

ಮತ್ತೊಂದೆಡೆ ಸಾವಿಗೀಡಾದ ಶಿಕ್ಷಕರ ಕುಟುಂಬಕ್ಕೆ ಹಣಕಾಸು ನೆರವು ಮತ್ತು ಅವರ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಎಸ್‌ಪಿ ಅಧಿನಾಯಕಿ ಮಾಯಾವತಿ ಒತ್ತಾಯಿಸಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Vande Mataram ಎರಡು ಪದಗಳ ಅರ್ಥ ವಿವರಿಸಿದ ಇಕ್ರಾ ಹಸನ್: ಸಂಸದೆಯ ಮಾತು ವೈರಲ್
ವಿದೇಶಗಳಿಗೆ ಭಾರತೀಯ ಪ್ರತಿಭೆ : ನಷ್ಟವೋ ? ಪ್ರಭಾವವೋ?