
ನವದೆಹಲಿ(ಜೂ.14): ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ 8360 ಅಭ್ಯರ್ಥಿಗಳ ಪೈಕಿ 7,194 ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ. ಅವರು ಕಳೆದುಕೊಂಡ ಠೇವಣಿಯ ಒಟ್ಟು ಮೊತ್ತ 16.36 ಕೋಟಿ ರು.
ಚುನಾವಣಾ ಆಯೋಗದ ದತ್ತಾಂಶದ ಪ್ರಕಾರ, 543 ಸ್ಥಾನಗಳಿಗೆ ಸ್ಪರ್ಧಿಸಿದ್ದವರ ಪೈಕಿ ಶೇ.86.1ರಷ್ಟು ಅಂದರೆ 8,360 ಅಭ್ಯರ್ಥಿಗಳು ನಿಗದಿತ ಪ್ರಮಾಣದ ಮತ ಪಡೆಯದ ಹಿನ್ನೆಲೆಯಲ್ಲಿ ಭದ್ರತಾ ಠೇವಣಿ ಕಳೆದುಕೊಂಡಿದ್ದಾರೆ. ಅಂದರೆ ತಮ್ಮ ಕ್ಷೇತ್ರಗಳಲ್ಲಿ ಚಲಾವಣೆಯಾದ ಒಟ್ಟು ಮತಗಳಲ್ಲಿ ಆರನೇ ಒಂದು ಭಾಗವನ್ನು ಪಡೆಯುವಲ್ಲಿ ವಿಫಲರಾಗಿದ್ದಾರೆ.
ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಾರ್ಟಿ ಈ ಬಾರಿಯ ಚುನಾವಣೆಯಲ್ಲಿ 488 ಅಭ್ಯರ್ಥಿಗಳಲ್ಲಿ 476, ಕಾಂಗ್ರೆಸ್ 51, ವಂಚಿತ್ ಬಹುಜನ ಆಘಾಡಿ ಪಕ್ಷ (ವಿಬಿಎ) 33, ಸಿಪಿಎಂ 20, ಬಿಜೆಪಿ 28 ಮತ್ತು 3,904 ಪಕ್ಷೇತರ ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ.
ಈಶ್ವರಪ್ಪಗೆ ಬರೀ 30 ಸಾವಿರ ಮತ; ಭಾರೀ ಸೋಲು, ಠೇವಣಿ ನಷ್ಟ!
2019ರ ಚುನಾವಣೆಯಲ್ಲಿ 6,923 ಅಭ್ಯರ್ಥಿಗಳು ಅಂದರೆ ಶೇ. 86 ರಷ್ಟು ಅಭ್ಯರ್ಥಿಗಳು ಒಟ್ಟು 15.87 ಕೋಟಿ ರು. ಠೇವಣಿಯನ್ನು ಕಳೆದುಕೊಂಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ