ಟಿಟಿಡಿಯ 743 ಸಿಬ್ಬಂದಿಗೆ ಕೊರೋನಾ ಸೋಂಕು, ಮೂವರು ವೈರಸ್‌ಗೆ ಬಲಿ!

Published : Aug 10, 2020, 01:23 PM ISTUpdated : Aug 10, 2020, 01:35 PM IST
ಟಿಟಿಡಿಯ 743 ಸಿಬ್ಬಂದಿಗೆ ಕೊರೋನಾ ಸೋಂಕು, ಮೂವರು ವೈರಸ್‌ಗೆ ಬಲಿ!

ಸಾರಾಂಶ

ಟಿಟಿಡಿಯ 743 ಸಿಬ್ಬಂದಿಗೆ ಕೊರೋನಾ ಸೋಂಕು, ಮೂವರು ವೈರಸ್‌ಗೆ ಬಲಿ| ತಿಮ್ಮಪ್ಪ ದೇವಾಲಯದ ಅರ್ಚಕರು ಸೇರಿದಂತೆ ತಿರುಮಲ ತಿರುಪತಿ ದೇವಸ್ಥಾನ ಮಂಡಳಿ

ತಿರುಪತಿ(ಆ.10): ಇಲ್ಲಿನ ತಿಮ್ಮಪ್ಪ ದೇವಾಲಯದ ಅರ್ಚಕರು ಸೇರಿದಂತೆ ತಿರುಮಲ ತಿರುಪತಿ ದೇವಸ್ಥಾನ ಮಂಡಳಿ (ಟಿಟಿಡಿ)ಯ 743 ಸಿಬ್ಬಂದಿಗಳಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಮೂವರು ಸೋಂಕಿಗೆ ಬಲಿಯಾಗಿದ್ದಾರೆ ಎಂದು ಟಿಟಿಡಿ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಬಿಎಸ್‌ವೈ, ಸಿದ್ದು ಬಹುತೇಕ ಚೇತರಿಕೆ: ಶೀಘ್ರದಲ್ಲೇ ಡಿಸ್ಚಾರ್ಜ್!

‘ಜೂನ್‌ 11ರಿಂದ ಒಟ್ಟು 743 ಟಿಟಿಡಿ ಸಿಬ್ಬಂದಿಗೆ ಕೋವಿಡ್‌-19 ಸೋಂಕು ತಗುಲಿದೆ. ಇವರಲ್ಲಿ 402 ಮಂದಿ ಈಗಾಗಲೇ ಗುಣಮುಖರಾಗಿದ್ದಾರೆ. ಉಳಿದ 338 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ಎಂದು ಟಿಟಿಡಿ ಕಾರ‍್ಯನಿರ್ವಾಹಕ ಅಧಿಕಾರಿ ಅನಿಲ್‌ ಕುಮಾರ್‌ ಸಿಂಘಾಲ್‌ ತಿಳಿಸಿದ್ದಾರೆ.

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಮುಚ್ಚಿದ್ದ ತಿರುಪತಿ ದೇವಾಲಯವನ್ನು ಜೂನ್‌ 11ರಿಂದ ಮರು ಆರಂಭಿಸಲಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Keralam Election Results: ಯಾರ ಪಾಲಿಗೆ ಕೇರಳಂ? ಎಡಕ್ಕೋ? ಬಲಕ್ಕೋ? ಅಥವಾ ಅತಂತ್ರವೋ?
5 State Assembly Election results 2026 Live: Keralam Election Results - ಯಾರ ಪಾಲಿಗೆ ಕೇರಳಂ? ಎಡಕ್ಕೋ? ಬಲಕ್ಕೋ? ಅಥವಾ ಅತಂತ್ರವೋ?