ಛತ್ತೀಸ್‌ಗಢ: ಎನ್‌ಕೌಂಟರ್‌ನಲ್ಲಿ 8 ನಕ್ಸಲರು, ಒಬ್ಬ ಯೋಧ ಬಲಿ

Published : Jun 16, 2024, 07:27 AM IST
ಛತ್ತೀಸ್‌ಗಢ: ಎನ್‌ಕೌಂಟರ್‌ನಲ್ಲಿ 8 ನಕ್ಸಲರು, ಒಬ್ಬ ಯೋಧ ಬಲಿ

ಸಾರಾಂಶ

ನಾರಾಯಣಪುರ, ಕಂಕೇರ್, ದಾಂತೇವಾಡ ಮತ್ತು ಕೊಂಡಗಾಂವ್ ಜಿಲ್ಲೆಗಳ ಭದ್ರತಾ ಸಿಬ್ಬಂದಿಗಳ ಜಂಟಿ ತಂಡವು ಅಬುಜ್ಮದ್‌ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ನಕ್ಸಲರ ಗುಂಪು ಎದುರಾಗಿದೆ. ಈ ವೇಳೆ ಉಭಯ ಬಣಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು ಇದರಲ್ಲಿ 8 ನಕ್ಸಲರು ಹತರಾಗಿದ್ದಾರೆ. ಇದೇ ವೇಳೆ ನಕ್ಸಲರ ಗುಂಡಿಗೆ ಓರ್ವ ಭದ್ರತಾ ಸಿಬ್ಬಂದಿ ಕೂಡಾ ಹುತಾತ್ಮರಾಗಿದ್ದಾರೆ. 

ನಾರಾಯಣಪುರ(ಜೂ.16):  ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಹಾಗೂ ನಕ್ಸಲರ ನಡುವೆ ಶನಿವಾರ ನಡೆದ ಗುಂಡಿನ ಚಕಮಕಿಯಲ್ಲಿ 8 ಮಂದಿ ನಕ್ಸಲರು ಮತ್ತು ವಿಶೇಷ ಕಾರ್ಯಪಡೆಯ(ಎಸ್‌ಟಿಎಫ್‌)ಯ ಓರ್ವ ಸಿಬ್ಬಂದಿ ಹತರಾಗಿದ್ದಾರೆ. ಘಟನೆಯಲ್ಲಿ ಇಬ್ಬರು ಎಸ್‌ಟಿಎಫ್‌ ಸಿಬ್ಬಂದಿ ಗಾಯಗೊಂಡಿದ್ದಾರೆ.

ನಾರಾಯಣಪುರ, ಕಂಕೇರ್, ದಾಂತೇವಾಡ ಮತ್ತು ಕೊಂಡಗಾಂವ್ ಜಿಲ್ಲೆಗಳ ಭದ್ರತಾ ಸಿಬ್ಬಂದಿಗಳ ಜಂಟಿ ತಂಡವು ಅಬುಜ್ಮದ್‌ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ನಕ್ಸಲರ ಗುಂಪು ಎದುರಾಗಿದೆ. ಈ ವೇಳೆ ಉಭಯ ಬಣಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು ಇದರಲ್ಲಿ 8 ನಕ್ಸಲರು ಹತರಾಗಿದ್ದಾರೆ. ಇದೇ ವೇಳೆ ನಕ್ಸಲರ ಗುಂಡಿಗೆ ಓರ್ವ ಭದ್ರತಾ ಸಿಬ್ಬಂದಿ ಕೂಡಾ ಹುತಾತ್ಮರಾಗಿದ್ದಾರೆ. ಘಟನಾ ಸ್ಥಳದಿಂದ ನಕ್ಸಲರಿಗೆ ಸೇರಿದ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿದೆ.

ಛತ್ತೀಸ್‌ಗಢದಲ್ಲಿ 12 ನಕ್ಸಲರ ಹತ್ಯೆ: ಐದೇ ತಿಂಗಳಲ್ಲಿ 100 ಬಲಿ..!

ಈ ವರ್ಷದಲ್ಲಿ ರಾಜ್ಯದಲ್ಲಿ ಭದ್ರತಾ ಪಡೆಗಳು ನಕ್ಸಲರ ವಿರುದ್ಧ ಭಾರೀ ಪ್ರಮಾಣದ ಕಾರ್ಯಾಚರಣೆ ನಡೆಸಿದ್ದು, ಇದರಲ್ಲಿ 131 ಮಂದಿ ನಕ್ಸಲರನ್ನು ಹತ್ಯೆ ಮಾಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ತಿರುಪತಿ ತಿಮ್ಮಪ್ಪನಿಗೆ ಅಂಗವಸ್ತ್ರದ ಮೋಸ, ಪ್ಲಾಸ್ಟಿಕ್‌ ಸಿಲ್ಕ್‌ ಕೊಟ್ಟು 55 ಕೋಟಿ ಯಾಮಾರಿಸಿದ ಕಂಪನಿ!
ರಾಷ್ಟ್ರಪತಿಗಳು ಪದಕ ನೀಡುತ್ತಿದ್ದಂತೆ ಕೊರಳಿನಿಂದ ಕಿತ್ತೆಸೆದ ಬಾಲಕ! ವೈರಲ್ ವಿಡಿಯೋ ಹಿಂದಿನ ಸತ್ಯವೇನು?