ನಿಪಾಕ್ಕೆ ಬಲಿಯಾದ ಬಾಲಕನ ಸಂಪರ್ಕಕ್ಕೆ ಬಂದವರು ವೈರಸ್‌ನಿಂದ ಬಚಾವ್‌

Kannadaprabha News   | Asianet News
Published : Sep 08, 2021, 09:12 AM IST
ನಿಪಾಕ್ಕೆ ಬಲಿಯಾದ ಬಾಲಕನ ಸಂಪರ್ಕಕ್ಕೆ ಬಂದವರು ವೈರಸ್‌ನಿಂದ ಬಚಾವ್‌

ಸಾರಾಂಶ

ಕೇರಳದಲ್ಲಿ ಭಾನುವಾರ ನಿಪಾ ವೈರಸ್‌ಗೆ ಬಲಿಯಾದ 12 ವರ್ಷದ ಬಾಲಕ ಸಂಪರ್ಕಕ್ಕೆ ಬಂದಿದ್ದವರ ಪೈಕಿ ಯಾರಲ್ಲೂ ನಿಪಾ ವೈರಸ್‌ ಪತ್ತೆಯಾಗಿಲ್ಲ 

ಕಲ್ಲಿಕೋಟೆ (ಸೆ.08): ಕೇರಳದಲ್ಲಿ ಭಾನುವಾರ ನಿಪಾ ವೈರಸ್‌ಗೆ ಬಲಿಯಾದ 12 ವರ್ಷದ ಬಾಲಕನ ಸಂಪರ್ಕಕ್ಕೆ ಬಂದಿದ್ದವರ ಪೈಕಿ ಯಾರಲ್ಲೂ ನಿಪಾ ವೈರಸ್‌ ಪತ್ತೆಯಾಗಿಲ್ಲ ಎಂಬುದು ದೃಢಪಟ್ಟಿದೆ. 

ಬಾಲಕನ ಸಂಪರ್ಕಕ್ಕೆ ಬಂದಿದ್ದ 8 ಮಂದಿಯ ಮಾದರಿಯನ್ನು ಪರೀಕ್ಷೆಗೊಳಪಡಿಸಲಾಗಿದ್ದು, ಅವರ ವರದಿಗಳು ನೆಗೆಟಿವ್‌ ಆಗಿವೆ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾಜ್‌ರ್‍ ಮಂಗಳವಾರ ಹೇಳಿದ್ದಾರೆ. ಅಲ್ಲದೆ ನಿಪಾ ವೈರಸ್‌ಗೆ ತುತ್ತಾಗಿರುವ 48 ಮಂದಿಯನ್ನು ವೈದ್ಯಕೀಯ ಕಾಲೇಜಿನಲ್ಲಿ ಐಸೋಲೇಷನ್‌ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಇದೇ ವೇಳೆ ಮಾಹಿತಿ ನೀಡಿದರು.

ಕೇರಳ ನಿಪಾ ವೈರಸ್‌ ಬಗ್ಗೆ ಕರ್ನಾಟಕ ಕಟ್ಟೆಚ್ಚರ

ಇದೇ ವೇಳೆ ರಾಜ್ಯದಲ್ಲಿ ನಿಪಾ ಹರಡದಂತೆ ಮತ್ತು ನಿಪಾಕ್ಕೆ ತುತ್ತಾದವರ ಚಿಕಿತ್ಸೆಗೆ ಸಂಬಂಧಿಸಿದಂತೆ ಕಟ್ಟೆಚ್ಚರ ವಹಿಸುವಂತೆ ಕೇರಳ ರಾಜ್ಯಕ್ಕೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.

ಏನೆಲ್ಲಾ ಸೂಚನೆಗಳು?

1. ಕಂಟೈನ್‌ಮೆಂಟ್‌ ಪ್ರದೇಶಗಳಲ್ಲಿ ಹೆಚ್ಚು ನಿಗಾ.

2. ಸಕ್ರಿಯ ನಿಪಾ ಕೇಸ್‌ ಪತ್ತೆ ಮಾಡಿ.

3. ಸೋಂಕಿತರಿಗೆ ಸೂಕ್ತ ಔಷಧ ಪೂರೈಸಿ

4. ರಾಜ್ಯಾದ್ಯಂತ ಸೂಕ್ತ ತಪಾಸಣಾ ವ್ಯವಸ್ಥೆ ಕೈಗೊಳ್ಳಿ

5. ನಿಪಾ ಪೀಡಿತ ನೆರೆಹೊರೆ ಜಿಲ್ಲೆಗಳಲ್ಲಿ ಎಚ್ಚರಿಕೆ ವಹಿಸಿ

6. ಜಿಲ್ಲೆಯಲ್ಲಿ 24 ಗಂಟೆಗಳ ಕಾಲ ಆಸ್ಪತ್ರೆ ಕೊಠಡಿ ತೆರೆದಿಡಿ

7. ಸಮುದಾಯ ಸುತ್ತಮುತ್ತ ಸರ್ವೆಲೆನ್ಸ್‌ ಹೆಚ್ಚಳಕ್ಕೆ ಆದೇಶ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗುಲಾಮಿ ಮನಃಸ್ಥಿತಿ ಬಿಡಲು 2035ರ ಗಡುವು : ಮೋದಿ
ಇಂಡಿಗೋ ವಿಮಾನ ರದ್ದತಿ ಕೊಂಚ ಸರಿ ದಾರಿಗೆ