ಸೈಲೆಂಟ್ ಅಟ್ಯಾಕ್: ಈ ರಾಜ್ಯದ ಶೇ. 80ರಷ್ಟು ಸೋಂಕಿತರಲ್ಲಿ ಲಕ್ಷಣಗಳೇ ಇಲ್ಲ!

Published : Apr 27, 2020, 12:13 PM ISTUpdated : Apr 27, 2020, 12:39 PM IST
ಸೈಲೆಂಟ್ ಅಟ್ಯಾಕ್: ಈ ರಾಜ್ಯದ ಶೇ. 80ರಷ್ಟು ಸೋಂಕಿತರಲ್ಲಿ ಲಕ್ಷಣಗಳೇ ಇಲ್ಲ!

ಸಾರಾಂಶ

ಮೌನವಾಗಿ ದಾಇ ಮಾಡ್ತಿದೆ ಕೊರೋನಾ| ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಬೆನ್ನಲ್ಲೇ ಸಿಕ್ಕಿದೆ ಶಾಕಿಂಗ್ ನ್ಯೂಸ್| ಈ ರಾಜ್ಯದ ಶೇ. 80ರಷ್ಟು ಸೋಂಕಿತರಲ್ಲಿ ಕೊರೋನಾ ಲಕ್ಷಣಗಳೇ ಇಲ್ಲ!

ಮಹಾರಾಷ್ಟ್ರ(ಏ.27): ಮಹಾರಾಷ್ಟ್ರದಲ್ಲಿ ಕೊರೋನಾ ಪೀಡಿತರ ಸಂಖ್ಯೆ ಹೆಚ್ಚುತ್ತಿರುವ ನಡುವೆ ಇಲ್ಲಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಗಾಬರಿ ಹುಟ್ಟಿಸುವ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಕೊರೋನಾ ಕುರಿತಾಗಿ ಮಾಹಿತಿ ನಿಡಿದ ಠಾಕ್ರೆ ರಾಜ್ಯದ ಶೇ. 80 ರಷ್ಟು ಸೋಂಕಿತರಲ್ಲಿ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ ಎಂದಿದ್ದಾರೆ. ಇನ್ನು ಮಹಾಮಾರಷ್ಟ್ರದಲ್ಲಿ ಈವರೆಗೆ ಒಟ್ಟು 7,628 ಕೊರೋನಾ ಪ್ರಕರಣಗಳು ವರದಿಯಾಗಿವೆ.

ಬೇಜವಾಬ್ದಾರಿಯಿಂದ ಕೊರೋನಾ ಹರಡಲು ಕಾರಣವಾದ 'ಮಹಾ'ಮಂತ್ರಿ

ಇನ್ನು ರಾಜ್ಯದಲ್ಲಿ ವರದಿಯಾದ ಕೊರೋನಾ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ ಉದ್ಧವ್ ಠಾಕ್ರೆ ತಾವು ಇತರ ರಾಜ್ಯಗಳಿಗಿಂತ ಹೆಚ್ಚು ತಪಾಸಣೆ ನಡೆಸಿದ್ದೇವೆ. ಹೀಗಾಘಿ ಇಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಿದೆ. ಆದರೆ ಶೇ. 80 ರಷ್ಟು ಸೋಂಕಿತರಲ್ಲಿ ಕೊರೋನಾ ಸೋಂಕಿನ ಯಾವುದೇ ಲಕ್ಷಣಗಳು ಕಂಡು ಬಂದಿರಲಿಲ್ಲ. ಇವರನ್ನು ಹೇಗೆ ರಕ್ಷಿಸುವುದೆಂದು ಮನೋಡಬೇಕಿದೆ ಎಂದಿದ್ದಾರೆ. ಅಲ್ಲದೇ ಕೊರೋನಾದ ಲಕ್ಷಣಗಳು ಗೋಚರಿಸಿದ ಕೂಡಲೇ ಆಸ್ಪತ್ರೆಗೆ ತೆರಳಿ ಪರೀಕ್ಷೆ ಮಾಡಿಸಕೊಳ್ಳಿ, ದಯವಿಟ್ಟು ಮುಚ್ಚಿಡಬೇಡಿ ಎಂದು ಠಾಕ್ರೆ ಮನವಿ ಮಾಡಿಕೊಣಂಡಿದ್ದಾರೆ.

ಡೆಲಿವರಿ ಬಾಯ್‌ ಮುಸ್ಲಿಂ ಎಂಬ ಕಾರಣಕ್ಕೆ ವಸ್ತು ಬೇಡ ಎಂದವ ಆರೆಸ್ಟ್..!

ಇದೇ ವೇಳೆ ಲಾಕ್‌ಡೌನ್ ವಿಸ್ತರಿಸುವ ಕುರಿತು ಮಾತನಾಡಿದ ಸಿಎಂ ಉದ್ಧವ್ ಠಾಕ್ರೆ, ಈ ತಿಂಗಳ ಅಂತ್ಯದೊಳಗೆ ಒಂದು ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದಿದ್ದಾರೆ. ಅಲ್ಲದೇ ವೈದ್ಯರ ಕ್ಲಿನಿಕ್, ಡಯಾಲಿಸಿಸ್ ಸೆಂಟರ್ ತೆರೆಯಲು ಅವಕಾಶ ನೀಡುವ ಕುರಿತಾಗಿಯೂ ಮಾತನಾಡಿದ್ದಾರೆ. ಜನರ ಬಳಿ ಧೈರ್ಯದಿಂದಿರಲು ಮನವಿ ಮಾಡಿರುವ ಉದ್ಧವ್ ಠಾಕ್ರೆ ನಮ್ಮ ಬಳಿ ಲಾಕ್‌ಡೌನ್ ಹೊರತುಪಡಿಸಿ ಸದ್ಯ ಕೊರೋನಾ ನಿಯಂತ್ರಿಸಲು ಬೇರಾವ ದಾರಿಯೂ ಇಲ್ಲ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಪೌರತ್ವ ಸಿಗುವ ಮುನ್ನವೇ ವೋಟರ್‌ ಲಿಸ್ಟ್‌ನಲ್ಲಿ ಹೆಸರು, ಸೋನಿಯಾ ಗಾಂಧಿಗೆ ನೋಟಿಸ್‌ ಕೊಟ್ಟ ದೆಹಲಿ ಕೋರ್ಟ್!
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ