
ವಾರಂಗಲ್ (ಮೇ.9): ಸರ್ಕಾರಿ ಶಾಲೆಯ ನಿರ್ಮಾಣಕ್ಕಾಗಿ ಕಾಕತಿಯ ಕಾಲದ 800 ವರ್ಷ ಪುರಾತನ ಶಿವನ ದೇಗುಲವೊಂದನ್ನು ಇಲ್ಲಿನ ಖಾನಾಪುರ ಮಂಡಲದ ಅಶೋಕ ನಗರದಲ್ಲಿ ಧ್ವಂಸಗೊಳಿಸಲಾಗಿದೆ. ಇದಕ್ಕೆ ಸ್ಥಳೀಯರಿಂದ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ದೂರು ದಾಖಲಾಗಿದೆ.
ಈ ಬಗ್ಗೆ ವಕೀಲ ರಾಮರಾವ್ ಇಮ್ಮನೇನಿ ರಾಷ್ಟ್ರೀಯ ಸ್ಮಾರಕಗಳ ಪ್ರಾಧಿಕಾರದಲ್ಲಿ ದೂರು ದಾಖಲಿಸಿದ್ದಾರೆ. ಪುರಾತತ್ವ ಮತ್ತು ದತ್ತಿ ಇಲಾಖೆಗಳಿಂದ ಅನುಮೋದನೆ ಪಡೆಯದೆ ಈ ಯೋಜನೆಗೆ ಅನುಮತಿಸಿದ ಅಧಿಕಾರಿಗಳ ವಿರುದ್ಧ ತೆಲಂಗಾಣ ಪರಂಪರೆ ಕಾಯ್ದೆಯ 30ನೇ ಸೆಕ್ಷನ್ನ ಅಡಿ ಕಾನೂನು ಕ್ರಮ ಜರುಗಿಸಬೇಕು. ಇದಕ್ಕೆ ಕೇಂದ್ರ ಸಂಸ್ಕೃತಿ ಸಚಿವಾಲಯ ಮತ್ತು ಇತಿಹಾಸಕಾರರನ್ನು ಹೊಣೆ ಮಾಡಬೇಕು ಎಂದು ಕೋರಿದ್ದಾರೆ.
ದೇಗುಲ ಧ್ವಂಸಕ್ಕೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ವಾರಂಗಲ್ ಜಿಲ್ಲಾಧಿಕಾರಿ ಡಾ. ಸತ್ಯ ಶಾರದಾ ಮತ್ತು ನರಸಂಪೇಟೆ ಶಾಸಕ ದೊಂತಿ ಮಾಧವ ರೆಡ್ಡಿ ಮೇ 6ರಂದು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಬಳಿಕ, ‘ಆ 30 ಎಕರೆಯಲ್ಲಿ ಪೊದೆಗಳನ್ನು ತೆರವುಗೊಳಿಸುವಾಗ ಹಳೆಯ ಶಿಥಿಲಗೊಂಡ ರಚನೆಯ ಅವಶೇಷಗಳಷ್ಟೇ ಕಂಡುಬಂದಿದ್ದವು ಹಾಗೂ ಅವುಗಳು ಸಂರಕ್ಷಿತ ಸ್ಮಾರಕವೆಂದು ದಾಖಲಾಗಿರಲಿಲ್ಲ’ ಎಂದು ಸ್ಪಷ್ಟನೆ ನೀಡಿದ್ದಾರೆ. ಜತೆಗೆ, ಅದೇ ಸ್ಥಳದಲ್ಲಿ ದೇವಸ್ಥಾನವನ್ನು ಮರುನಿರ್ಮಾಣ ಮಾಡುವುದಾಗಿ ಭರವಸೆ ನೀಡಿದ್ದಾರೆ.
13ನೇ ಶತಮಾನದಲ್ಲಿ ಆಳ್ವಿಕೆ ನಡೆಸುತ್ತಿದ್ದ ಕಾಕತೀಯ ದೊರೆ ಗಣಪತಿದೇವನ ಕಾಲದ ಈ ದೇವಾಲಯದ ಸ್ಥಳವು ಫೆಬ್ರವರಿ ಕ್ರಿ.ಶ. 1231ರ ಅಪರೂಪದ 7 ಸಾಲುಗಳ ತೆಲುಗು ಶಾಸನವನ್ನು ಹೊಂದಿದ್ದು, ಅದರಲ್ಲಿ ರಾಜನನ್ನು ‘ಮಹಾರಾಜ’ ಮತ್ತು ‘ರಾಜಾಧಿರಾಜುಲು’ ಎಂದು ಸಂಬೋಧಿಸಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ