
ನವದೆಹಲಿ: ದೇಶದಲ್ಲಿ ಮುಂಗಾರು ಮಳೆಯ 4 ತಿಂಗಳ ಅವಧಿ ಪೂರ್ಣಗೊಂಡಿದ್ದು, ಧೀರ್ಘಕಾಲೀನ ಸರಾಸರಿಯಲ್ಲಿ ಭಾರತದಲ್ಲಿ ಸಾಮಾನ್ಯ ಪ್ರಮಾಣದ ಮಳೆಯಾಗಿದೆ. ಅಲ್ಲದೇ ಹಿಂಗಾರು ಕೂಡ ಸಾಮಾನ್ಯವಾಗಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕರ್ನಾಟಕ ಸೇರಿ ದೇಶದ ದಕ್ಷಿಣ ಭಾಗದಲ್ಲಿ ಹಿಂಗಾರು ಮಳೆ ಸಾಮಾನ್ಯವಾಗಿಯೇ ಬೀಳಲಿದೆ. ಶೇ.88ರಿಂದ ಶೇ.112ರಷ್ಟು ಮಳೆ- ಅಂದರೆ 334 ಮಿ.ಮೀ. ಸರಾಸರಿ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಿದೆ. ಇದೇ ವೇಳೆ, ಶೇ.18ರಷ್ಟು ಪ್ರದೇಶದಲ್ಲಿ ಮುಂಗಾರು ಕೊರತೆ ಆಗಿದೆ ಎಂದು ಅದು ಮಾಹಿತಿ ನೀಡಿದೆ.
ಎಲ್ಲೆಡೆ ಸಾಮಾನ್ಯ ಮಳೆ ಇಲ್ಲ
ಪೆಸಿಫಿಕ್ ಸಾಗರದಲ್ಲಿ (Pacific Ocean) ಉಂಟಾಗಿದ್ದ ಎಲ್ನಿನೋದ (El Nino) ಪರಿಣಾಮವಾಗಿ ಈ ಬಾರಿ ಮುಂಗಾರು ಆಗಮನ ವಿಳಂಬಗೊಂಡಿತ್ತು, ಆದರೂ ಇದರ ಪ್ರಭಾವ ಮೀರಿ ಸಾಮಾನ್ಯ ಪ್ರಮಾಣದಲ್ಲಿ ಮಳೆಯಾಗಿದೆ. ಆದರೆ ಇದರ ಅರ್ಥ ದೇಶಾದ್ಯಂತ ಎಲ್ಲಾ ಪ್ರದೇಶಗಳಲ್ಲೂ ಸರಿಯಾದ ಪ್ರಮಾಣದಲ್ಲಿ ಮಳೆಯಾಗಿದೆ ಎಂಬುದಲ್ಲ ಎಂದು ಐಎಂಡಿ ಸ್ಪಷ್ಟಪಡಿಸಿದೆ. ದೀರ್ಘಕಾಲೀನವಾಗಿ ಶೇ.94ರಿಂದ 106ರಷ್ಟು ಮಳೆಯಾದರೆ ಅದನ್ನು ಸಾಮಾನ್ಯ ಮಳೆ ಎಂದು ಪರಿಗಣಿಸಲಾಗುತ್ತದೆ.
ಭಾರತದಲ್ಲಿ ಮಾನ್ಸೂನ್ ಹಲವು ನೈಸರ್ಗಿಕ ವ್ಯತ್ಯಾಸಗಳನ್ನು (natural variations) ಹೊಂದಿರುತ್ತದೆ. ಅಲ್ಲದೇ ಹವಾಮಾನ ಬದಲಾವಣೆಯೂ ಸಹ ಭಾರತೀಯ ಮುಂಗಾರಿನ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿದೆ. ಆದರೂ ಈ ವರ್ಷ ಶೇ.94.4ರಷ್ಟು ಮಳೆಯಾಗಿದೆ. ದೇಶದ ಶೇ.73ರಷ್ಟು ಪ್ರದೇಶದಲ್ಲಿ ಸಾಮಾನ್ಯ ಮಳೆಯಾಗಿದ್ದು, ಶೇ.18ರಷ್ಟು ಪ್ರದೇಶ ಮಳೆ ಕೊರತೆ ಎದುರಿಸಿದೆ ಎಂದು ಐಎಂಡಿ ನಿರ್ದೇಶಕ ಮೃತ್ಯುಂಜಯ ಮೋಹಪಾತ್ರ (IMD Director Mrityunjaya Mohapatra) ಅವರು ಹೇಳಿದ್ದಾರೆ.
ಪಾಕಿಸ್ತಾನದ ಬಲೋಚ್ ಪ್ರಾಂತ್ಯದಲ್ಲಿ ಮಸೀದಿ ಬಳಿ ಸ್ಫೋಟ: 52 ಜನರ ಸಾವು, 130ಕ್ಕೂ ಹೆಚ್ಚು ಜನರಿಗೆ ಗಾಯ
ಈಶಾನ್ಯ ಮತ್ತು ಪೂರ್ವ ಭಾರತದಲ್ಲಿ 111.5 ಸೆಂ.ಮೀ. ಮಳೆಯಾಗಿದೆ. ಸಾಮಾನ್ಯವಾಗಿ ಇಲ್ಲಿ 113.6 ಸೆಂ.ಮೀ. ಮಳೆಯಾಗುತ್ತಿತ್ತು. ಅಲ್ಲದೇ ವಾಯುವ್ಯ ಭಾರತದಲ್ಲಿ ಸಾಮಾನ್ಯ 58 ಸೆಂ.ಮೀ. ಮಳೆಯ ಬದಲಿಗೆ 59 ಸೆಂ.ಮೀ. ಮಳೆಯಾಗಿದೆ. ಕೇಂದ್ರ ಭಾರತದಲ್ಲೂ ಸಹ ಸಾಮಾನ್ಯ 97 ಸೆಂ.ಮೀ. ಬದಲಿಗೆ 98 ಸೆಂ.ಮೀ ಮಳೆಯಾಗಿದೆ. ದಕ್ಷಿಣ ಪ್ರಸ್ಥಭೂಮಿಯಲ್ಲಿ ಶೇ.8ರಷ್ಟು ಮುಂಗಾರು ಕೊರತೆ ಉಂಟಾಗಿದೆ ಎಂದು ಐಎಂಡಿ ಹೇಳಿದೆ.
ಬಿಟ್ಟು ಹೋಗುತ್ತಿದ್ದ ಒಡೆಯನ ಬೈಕ್ ಏರದಂತೆ ತಡೆದ ಆನೆ: ಭಾವುಕ ವೀಡಿಯೋ ವೈರಲ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ