WATCH: ತೆಲಂಗಾಣದಲ್ಲಿ ಹೃದಯ ವಿದ್ರಾವಕ ಘಟನೆ: ತಾಯಿಯ ಅಂತ್ಯಸಂಸ್ಕಾರಕ್ಕಾಗಿ ಭಿಕ್ಷೆ ಬೇಡಿದ 11 ವರ್ಷದ ಬಾಲಕಿ!

Published : Aug 18, 2024, 10:12 PM ISTUpdated : Aug 18, 2024, 10:22 PM IST
WATCH: ತೆಲಂಗಾಣದಲ್ಲಿ ಹೃದಯ ವಿದ್ರಾವಕ ಘಟನೆ: ತಾಯಿಯ ಅಂತ್ಯಸಂಸ್ಕಾರಕ್ಕಾಗಿ ಭಿಕ್ಷೆ ಬೇಡಿದ 11 ವರ್ಷದ ಬಾಲಕಿ!

ಸಾರಾಂಶ

ತಾಯಿಯ ಅಂತ್ಯಸಂಸ್ಕಾರ ನಡೆಸಲು 11 ವರ್ಷದ ಬಾಲಕಿ ಭಿಕ್ಷಾಟನೆ ಮಾಡಿದ ಹೃದಯ ವಿದ್ರಾವಕ ಘಟನೆ ತೆಲಂಗಾಣದ ನಿರ್ಮಲ್ ಜಿಲ್ಲೆಯ ತಾನೂರ್ ಪಟ್ಟನದ ತರೋಡ ನಡೆದಿದೆ. ದುರ್ಗಾ (11) ತಾಯಿಯ ಅಂತ್ಯಸಂಸ್ಕಾರಕ್ಕಾಗಿ ಭಿಕ್ಷೆ ಮಾಡಿದ ಮಗು.

ತೆಲಂಗಾಣ (ಆ.18): ತಾಯಿಯ ಅಂತ್ಯಸಂಸ್ಕಾರ ನಡೆಸಲು 11 ವರ್ಷದ ಬಾಲಕಿ ಭಿಕ್ಷಾಟನೆ ಮಾಡಿದ ಹೃದಯ ವಿದ್ರಾವಕ ಘಟನೆ ತೆಲಂಗಾಣದ ನಿರ್ಮಲ್ ಜಿಲ್ಲೆಯ ತಾನೂರ್ ಪಟ್ಟನದ ತರೋಡ ನಡೆದಿದೆ.

ದುರ್ಗಾ (11) ತಾಯಿಯ ಅಂತ್ಯಸಂಸ್ಕಾರಕ್ಕಾಗಿ ಭಿಕ್ಷೆ ಮಾಡಿದ ಮಗು.  ಗಂಗಾಮಣಿ(36) ಮೃತ ದುರ್ದೈವಿ.  ಕೆಲವು ವರ್ಷಗಳಿಂದ ಗಂಡನಿಂದ ದೂರವಾಗಿದ್ದ ಗಂಗಾಮಣಿ. ಒಬ್ಬಳೇ ಮಗಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಕೂಲಿನಾಡಿ ಮಾಡಿಕೊಂಡು ಜೀವನ ನಡೆಸಿದ್ದಳು. ಆದರೆ ಕೆಲ ದಿನಗಳ ಹಿಂದೆಯಷ್ಟೇ ಬಾಲಕಿಯ ತಂದೆ ತೀರಿಕೊಂಡಿದ್ದು, ಶನಿವಾರ ರಾತ್ರಿ ತಾಯಿ ಕೂಡ ಆತ್ಮಹತ್ಯೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಚಿಕ್ಕವಯಸ್ಸಿನಲ್ಲಿ ತಂದೆ-ತಾಯಿಯನ್ನು ಕಳೆದುಕೊಂಡು ಬಾಲಕಿ ದುರ್ಗಾ ತಾಯಿಯ ಅಂತ್ಯಸಂಸ್ಕಾರಕ್ಕೂ ದುಡ್ಡಿಲ್ಲದೆ, ಹೇಳಿಕೊಳ್ಳಲು ಸಂಬಂಧಿಕರು ಇಲ್ಲದೆ ಅನಾಥವಾಗಿ ಬೀದಿಗೆ ಬಿದ್ದಿರುವ ಬಾಲಕಿ.

ಹತ್ಯೆಯಾದ ದಿನ ಕೋಲ್ಕತ್ತಾ ಟ್ರೈನಿ ವೈದ್ಯೆ ಬರೆದ ಕೊನೆಯ ಡೈರಿಯಲ್ಲಿ ಏನಿತ್ತು?

ಬಾಲಕಿಯ ಹತ್ತಿರ ಕನಿಷ್ಠ ತಾಯಿಯ ಅಂತಿಮ ಸಂಸ್ಕಾರಕ್ಕೂ ಹಣವಿಲ್ಲ.  ಹೀಗಾಗಿ ತಾಯಿಯ ಅಂತ್ಯಸಂಸ್ಕಾರಕ್ಕಾಗಿ ಮನೆ ಮುಂದೆ ಟವೆಲ್ ಹಾಸಿ ಭಿಕ್ಷೆ ಬೇಡಿದ ಬಾಲಕಿ. ಬಾಲಕಿ ದುರ್ಗಾ ಭಿಕ್ಷೆ ಬೇಡುತ್ತಿರುವ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಕಂಬನಿ ಮೀಡಿದಿದ್ದಾರೆ. ಫೋನ್‌ ಪೇ ಮೂಲಕ ಹಣ ಸಂಗ್ರಹಿಸಿ ಸ್ಥಳೀಯರ ನೆರವಿನಿಂದ ಕೊನೆಗೂ ಬಾಲಕಿಯ ತಾಯಿ ಅಂತ್ಯಸಂಸ್ಕಾರ ನಡೆಸಲಾಗಿದೆ.

ವ್ಹೀಲಿಂಗ್ ಮಾಡುತ್ತಿದ್ದ ಪುಂಡನ ಬೈಕ್‌ ಫ್ಲೈಓವರ್ ಮೇಲಿಂದ ಕೆಳಕ್ಕೆ ಎಸೆದ ಸಾರ್ವಜನಿಕರು!

ಘಟನೆ ಮಾಹಿತಿ ತಿಳಿದು ಮಾಜಿ ಸಚಿವ ಕೆಟಿಆರ್ ಬಾಲಕಿಯ ಸಹಾಯಕ್ಕೆ ದಾವಿಸಿದ್ದಾರೆ. ಆ ಬಾಲಕಿಗೆ ಬಿಎಆರ್ ಪಕ್ಷದ ವತಿಯಿಂದ 10 ಸಾವಿರ ರೂಪಾಯಿ ನೆರವು ನೀಡಿದ್ದಾರೆ. ಸ್ಥಳೀಯ ಮುಖಂಡರು ಬಾಲಕಿಯ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿ ಮುಂದಿನ ಜೀವನಕ್ಕೆ ಸಹಾಯ ಮಾಡುವುದು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
ತಮಿಳು ಚಿತ್ರದಲ್ಲಿ ಕನ್ನಡ ಹಾಡು ಬಳಸಿದ್ದಕ್ಕೆ ದಂಡ, ಒಟಿಟಿ ರಿಲೀಸ್‌ಗೂ ಮುನ್ನ 30 ಲಕ್ಷ ಠೇವಣಿ ಇಡಿ ಎಂದ ಕೋರ್ಟ್‌!