
ಪಟ್ಟಣಂತಿಟ್ಟ: ಕಳೆದ ಭಾನುವಾರ ಬಿಜೆಪಿಗೆ ಸೇರ್ಪಡೆಯಾಗಿದ್ದ ಸ್ಥಳೀಯ ಫಾದರ್ ಶೈಜು ಕುರಿಯನ್ ಅವರನ್ನು ಕ್ರೈಸ್ತ ಸಮುದಾಯದ ಎಲ್ಲಾ ಧಾರ್ಮಿಕ ಪದವಿಗಳಿಂದ ವಜಾ ಮಾಡಲಾಗಿದೆ.
ನೀಲಕ್ಕಲ್ ಭದ್ರಾಸನಂ ಆಡಳಿತ ಮಂಡಳಿ ಈ ನಿರ್ಧಾರ ತೆಗೆದುಕೊಂಡಿದೆ. ಕುರಿಯನ್ ಅವರನ್ನು ನೀಲಕ್ಕಲ್ ಭದ್ರಾಸನಂ ಆಡಳಿತ ಮಂಡಳಿ ಕಾರ್ಯದರ್ಶಿ, ನೀಲಕ್ಕಲ್ ಭದ್ರಾಸನಂ ಭಾನುವಾರದ ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷ ಪದವಿಯಿಂದ ಅಮಾನತು ಮಾಡಲಾಗಿದೆ. ಜೊತೆಗೆ ಕುರಿಯೆನ್ ಅವರನ್ನು ವಿಚಾರಣೆಗೊಳಪಡಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದೂ ಸಹ ತಿಳಿಸಿದೆ.
ಪ್ರಧಾನಿ ಮೋದಿಯವರು ಕಳೆದ ವಾರವಷ್ಟೇ ‘ಸ್ನೇಹ ಯಾತ್ರೆ’ಯಡಿಯಲ್ಲಿ ಕ್ರೈಸ್ತ ಸಮುದಾಯದ ಮುಖಂಡರ ಮನೆಗೆ ತೆರಳಿ ಅವರನ್ನು ಪಕ್ಷಕ್ಕೆ ಆಹ್ವಾನಿಸಿದ್ದರು. ಈ ಹಿನ್ನೆಲೆಯಲ್ಲಿ ಕಳೆದ ಭಾನುವಾರ ಕುರಿಯೆನ್ ಮತ್ತು 50 ಕ್ರಿಶ್ಚಿಯನ್ ಕುಟುಂಬಗಳು ಕೇಂದ್ರ ಸಚಿವ ಮುರಳೀಧರನ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.
ಕೇರಳದಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ಹೊಗಳುವುದೆ? ನಟಿ ಶೋಭನಾರನ್ನು ರುಬ್ಬುತ್ತಿರೋ ನೆಟ್ಟಿಗರು!
ದಕ್ಷಿಣ ಭಾರತದಲ್ಲಿ ಮಿಷನ್-50ಗೆ ಬಿಜೆಪಿ ಪಣ: ರಾಜ್ಯದ 25 ಸೇರಿ ಒಟ್ಟು 50 ಸೀಟು ಗೆಲ್ಲಲು ಮೆಗಾ ಪ್ಲಾನ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ