
ನವದೆಹಲಿ: ದೆಹಲಿಯಲ್ಲಿನ ಸೇವೆಯ ಅಧಿಕಾರವನ್ನು ತನ್ನ ಬಳಿಯೇ ಉಳಿಸಿಕೊಳ್ಳಲು ಇತ್ತೀಚೆಗೆ ಕೇಂದ್ರ ಸರ್ಕಾರ ಹೊರಡಿಸಿದ್ದ ಸುಗ್ರೀವಾಜ್ಞೆಗೆ ಮಧ್ಯಂತರ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಸುಗೀವಾಜ್ಞೆಗೆ ತಡೆ ಕೋರಿ ಆಮ್ಆದ್ಮಿ ಪಕ್ಷದ ಸಲ್ಲಿಸಿದ್ದ ಅರ್ಜಿಯನ್ನು ಸೋಮವಾರ ವಿಚಾರಣೆ ನಡೆಸಿದ ನ್ಯಾಯಾಲಯ, ತಡೆ ನೀಡಲು ನಿರಾಕರಿಸಿತು. ಆದರೆ ಈ ಕುರಿತು ಪ್ರತಿಕ್ರಿಯೆ ಬಯಸಿ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿತು. ಅಲ್ಲದೆ ಪ್ರಕರಣದಲ್ಲಿ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅವರನ್ನೂ ಪಕ್ಷಗಾರರನ್ನಾಗಿ ಮಾಡುವಂತೆ ಆಪ್ ಪರ ವಕೀಲರಿಗೆ ಸೂಚಿಸಿತು. ಮುಂದಿನ ವಿಚಾರಣೆ ಜು.17ಕ್ಕೆ ನಿಗದಿಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ