ಭಕ್ತರಿಗೆ ಮಲ ತಿನ್ನಿಸಿ ಕ್ರೂರ ಹಿಂಸೆ: ಸ್ವಯಂಘೋಷಿತ ದೇವಮಾನವಿಯನ್ನು ಕಂಬಿ ಹಿಂದೆ ಕಳಿಸಿದ ಸಿಂಗಾಪುರ್‌ ಕೋರ್ಟ್

Published : Jun 30, 2024, 03:39 PM ISTUpdated : Jun 30, 2024, 03:44 PM IST
ಭಕ್ತರಿಗೆ ಮಲ ತಿನ್ನಿಸಿ ಕ್ರೂರ ಹಿಂಸೆ: ಸ್ವಯಂಘೋಷಿತ ದೇವಮಾನವಿಯನ್ನು ಕಂಬಿ ಹಿಂದೆ ಕಳಿಸಿದ ಸಿಂಗಾಪುರ್‌ ಕೋರ್ಟ್

ಸಾರಾಂಶ

ಭಕ್ತರಿಗೆ ಮಾನವ ಮಲ ತಿನ್ನಿಸಿ ಪಾಪ ಕಳೆಯುವ ಹೆಸರಲ್ಲಿ ಅವರನ್ನು ಹೊಡೆದು ಬಡೆದು ಕ್ರೂರವಾಗಿ ಹಿಂಸೆ ನೀಡಿದ ಸಿಂಗಾಪುರದ ಸ್ವಯಂಘೋಷಿತ ದೇವ ಮಾನವಿಗೆ ಅಲ್ಲಿನ ನ್ಯಾಯಾಲಯ ಹತ್ತೂವರೆ ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ.

ಸಿಂಗಾಪುರ: ಭಕ್ತರಿಗೆ ಮಾನವ ಮಲ ತಿನ್ನಿಸಿ ಪಾಪ ಕಳೆಯುವ ಹೆಸರಲ್ಲಿ ಅವರನ್ನು ಹೊಡೆದು ಬಡೆದು ಕ್ರೂರವಾಗಿ ಹಿಂಸೆ ನೀಡಿದ ಸಿಂಗಾಪುರದ ಸ್ವಯಂಘೋಷಿತ ದೇವ ಮಾನವಿಗೆ ಅಲ್ಲಿನ ನ್ಯಾಯಾಲಯ ಹತ್ತೂವರೆ ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ. 54 ವರ್ಷದ ವೂ ಮೇ ಹೋ ಎಂಬಾಕೆಯೇ ಜೈಲು ಶಿಕ್ಷೆಗೆ ಗುರಿಯಾದ ಸಿಂಗಾಪುರದ ದೇವ ಮಾನವಿ. 2020ರಲ್ಲಿ ಕೆಲ ಭಕ್ತರು ಆಕೆಯ ವಿರುದ್ಧ ಆಕೆಯ ಕ್ರೌರ್ಯದ ವಿರುದ್ಧ ಪೊಲೀಸರಿಗೆ ದೂರು ನೀಡಿದ ನಂತರ ಅದೇ ವರ್ಷದ ಅಕ್ಟೋಬರ್‌ ತಿಂಗಳಲ್ಲಿ ಆಕೆಯನ್ನು ಬಂಧಿಸಲಾಗಿತ್ತು. ಈಗ ಆಕೆಯ ಕ್ರೌರ್ಯ ಸಾಬೀತಾದ ಹಿನ್ನೆಲೆ ಸಿಂಗಾಪುರದ ನ್ಯಾಯಾಲಯ ಆಕೆಗೆ ಕಠಿಣ ಶಿಕ್ಷೆ ವಿಧಿಸಿದೆ. 

ಆಕೆ ಮಾಡಿದ್ದೇನು?

ತನ್ನ ಆಧ್ಮಾತ್ಮದ ಅನುಯಾಯಿಗಳಿಗೆ ಆಕೆ ತಾನು ದೇವರ ಜೊತೆ ಸಂಪರ್ಕ ಸಾಧಿಸಬಲ್ಲ ನಿಜವಾದ ದೇವ ಮಾನವಿ ಎಂದು ನಂಬಿಸಿದ ಆಕೆ ನಂತರ ಅವರ ಪಾಪ ಕರ್ಮಗಳ ನಿರ್ಮೂಲನೆಯ ಹೆಸರಿನಲ್ಲಿ ಹಣ ವಸೂಲಿ ಮಾಡುವ ಕೆಲಸ ಶುರು ಮಾಡಿದ್ದಾಳೆ. ಅಲ್ಲದೇ ಅವಿಧೇಯತೆ ತೋರಿದ ಭಕ್ತರಿಗೆ ಬರೀ ಹಣ ವಸೂಲಿ ಮಾಡುವುದು ಮಾತ್ರವಲ್ಲದೇ ಅವರಿಗೆ ತಪ್ಪು ಮಾಡಿದ್ದಾರೆ ಎಂದು ಹೇಳಿ ಕ್ರೂರವಾಗಿ ಹಿಂಸೆ ನೀಡಿದ್ದಾಳೆ. ಆ ಹಿಂಸೆ ಹೇಗಿತೆಂದರೆ ಮಾನವ ಮಲವನ್ನು ಬಲವಂತವಾಗಿ ತಿನ್ನಿಸುವುದು, ದೊಣ್ಣೆಯಲ್ಲಿ ಹೊಡೆಯುವುದು, ಕಟ್ಟಡದಿಂದ ಕೆಳಗೆ ಹಾರುವಂತೆ ಮಾಡುವುದು, ಅವರ ಹಲ್ಲುಗಳನ್ನು ಇಕ್ಕಳದಿಂದ ಕೀಳಿಸುವುದು ಸೇರಿದಂತೆ ಭಕ್ತರ ಮೇಲೆ ಹಲವು ರೀತಿಯ ಕ್ರೌರ್ಯ ಮೆರೆದಿದ್ದಾಳೆ ಈ ದೇವ ಮಾನವಿ ಎಂದು ನ್ಯೂಸ್ ಏಷ್ಯಾ ಚಾನೆಲ್ ವರದಿ ಮಾಡಿದೆ. 

ಯುವತಿಯರ ಅಕ್ರಮ ವಶ ಪ್ರಕರಣ: ನಿತ್ಯಾನಂದಗೆ ಗುಜರಾತ್‌ ಹೈಕೋರ್ಟ್‌ ಕ್ಲೀನ್‌ಚಿಟ್‌

ಭಾರತದ ಧಾರ್ಮಿಕ ಗುರು ಶ್ರೀ ಶಕ್ತಿ ನಾರಾಯಣಿ ಅಮ್ಮ ಅವರನ್ನು ನಂಬುತ್ತಿದ್ದ 30  ಅನುಯಾಯಿಗಳನ್ನು ಹೊಂದಿದ್ದ ಈಕೆ 2012ರಿಂದಲೂ ಈ ಗುಂಪನ್ನು ನಡೆಸಿಕೊಂಡು ಬಂದಿದ್ದಾಳೆ. ತಾನು ದೇವರೊಂದಿಗೆ ಮಾತನಾಡುವೆ ಎಂದು ನಂಬಿಸಿದ ಆಕೆ ತನ್ನನ್ನು ದೇವರೆಂದು ಕರೆಯಬೇಕೆಂದು ಆ ಗುಂಪಿಗೆ ಹೇಳಿದ್ದಳಂತೆ..

ಇನ್ನು ತಮ್ಮ ನೋವನ್ನು ಅಥವಾ ತಮ್ಮ ಸಂಬಂಧಿಕರ ಸಮಸ್ಯೆಯನ್ನು ಇಲ್ಲದಂತೆ ಮಾಡುತ್ತಾಳೆ ಈಕೆ ಎಂಬ ನಂಬಿಕೆಯಲ್ಲಿ ಜನ ಈಕೆಯ ಬಳಿ ಬರುತ್ತಿದ್ದರು. ಈ ವೇಳೆ ಅವರಿಗೆ ಈಕೆ ತಮ್ಮ ಕೆಟ್ಟ ಕರ್ಮಗಳನ್ನು ಹೋಗಲಾಡಿಸಿ ಒಳ್ಳೆಯ ಕರ್ಮಗಳನ್ನು ಪಡೆಯಲು ಭಾರತದಲ್ಲಿರುವ ಅಮ್ಮನಿಗೆ ಹಣ ಪಾವತಿ ಮಾಡುವಂತೆ ಹೇಳುತ್ತಿದ್ದಳು. ಅಲ್ಲದೇ ತನ್ನ ಅನುಯಾಯಿಗಳ ಬಳಿ ತಮ್ಮ ಬಳಿ ಎಷ್ಟು ಹಣ ಇದೆ  ಎಂದು ಹೇಳುವಂತೆ ಒತ್ತಾಯಿಸುತ್ತಿದ್ದಳು. ಅಲ್ಲದೇ ಸುಳ್ಳು ಹೇಳಿದರೆ ದೇವರು ಶಿಕ್ಷೆ ನೀಡುತ್ತಾರೆ ಎಂದು ಹೇಳುತ್ತಿದ್ದಳು. 

ರೆಪಿಸ್ಟ್ ಸ್ವಯಂ ಘೋಷಿತ ದೇವಮಾನವನಿಗೆ ಮತ್ತೊಂದು ಪ್ರಕರಣದಲ್ಲಿ ಜೀವಾವಧಿ!

ಹೀಗೆ ಹೇಳಿ ಭಕ್ತರಿಂದ ಹಣ ವಸೂಲಿ ಮಾಡುತ್ತಿದ್ದ ಆಕೆ ತನಗಾಗಿ ಆಸ್ತಿಗಳನ್ನು ವಾಹನವನ್ನು ಖರೀದಿಸುವಂತೆ ಹೇಳುತ್ತಿದ್ದಳು. ಬಳಿಕ ಅದನ್ನು ತನ್ನ ವೈಯಕ್ತಿಕ ಕೆಲಸಕ್ಕೆ ಬಳಸುತ್ತಿದ್ದಳು. ಅಲ್ಲದೇ ತನಗೆ ಹಣ ನೀಡುವುದಕ್ಕಾಗಿ ಭಕ್ತರೇ ಬ್ಯಾಂಕ್‌ನಿಂದ ಲೋನ್ ಮಾಡುವಂತೆ ಮಾಡಿದ್ದಳು ಎಂದು ಏರ್ ಏಷ್ಯಾ ವರದಿ ಮಾಡಿದೆ. 2012ರಿಂದ 2020ರ ಸಮಯದಲ್ಲಿ ಆಕೆ 7 ಮಿಲಿಯನ್ ಡಾಲರ್ ಹಣವನ್ನು ಭಕ್ತರಿಂದ ವಸೂಲಿ ಮಾಡಿದ್ದಾಳೆ ಎಂದು ನ್ಯಾಯಾಲಯಕ್ಕೆ ಸಲ್ಲಿಸಿದ ಆರೋಪ ಪಟ್ಟಿಯಲ್ಲಿ ತಿಳಿಸಲಾಗಿದೆ. 

ಅಲ್ಲದೇ ಹತ್ತು ಭಕ್ತರನ್ನು ತನ್ನ ಮನೆ ಕೆಲಸಕ್ಕೆ ಬಳಸಿಕೊಳ್ಳುತ್ತಿದ್ದಳು. ಅಡಿಗೆ ಮಾಡುವುದು ದಿನಸಿ ತರುವುದು, ಮನೆ ಕ್ಲೀನ್ ಮಾಡುವುದು ಸೇರಿದಂತೆ ಎಲ್ಲಾ ಕೆಲಸಗಳನ್ನು ಮಾಡಿಸುತ್ತಿದ್ದಳು. ಕೆಲವು ಭಕ್ತರು  ತಮ್ಮ ಕೆಲಸ ತೊರೆಯುವುದಾಗಿ ಹೇಳಿದಾಗ ಅವರಿಗೆ ಕ್ರೂರವಾಗಿ ಹಿಂಸೆ ನೀಡಲು ಶುರು ಮಾಡಿದ್ದಳು, ಇವಳ ಕ್ರೌರ್ಯದಿಂದಾಗಿ ಒಬ್ಬಳು ಭಕ್ತೆ ಕಣ್ಣಿನ ದೃಷ್ಟಿಯನ್ನೇ ಕಳೆದುಕೊಂಡಿದ್ದಾಳೆ ಎಂದು ವರದಿ ಆಗಿದೆ. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..