ಕುವೈತ್ ಬೆಂಕಿ ದುರಂತದಲ್ಲಿ ಮಡಿದ 45 ಭಾರತೀಯರ ಶವದೊಂದಿಗೆ ಕೊಚ್ಚಿಗೆ ಆಗಮಿಸಿದ ಐಎಎಫ್ ವಿಶೇಷ ವಿಮಾನ

Published : Jun 14, 2024, 11:29 AM ISTUpdated : Jun 14, 2024, 11:53 AM IST
 ಕುವೈತ್ ಬೆಂಕಿ ದುರಂತದಲ್ಲಿ ಮಡಿದ 45 ಭಾರತೀಯರ ಶವದೊಂದಿಗೆ ಕೊಚ್ಚಿಗೆ ಆಗಮಿಸಿದ  ಐಎಎಫ್ ವಿಶೇಷ ವಿಮಾನ

ಸಾರಾಂಶ

ಏರ್‌ಪೋರ್ಸ್‌ನ ವಿಶೇಷ ವಿಮಾನ ಕುವೈತ್‌ನಲ್ಲಿ ಬೆಂಕಿ ದುರಂತದಲ್ಲಿ ಸಾವನ್ನಪ್ಪಿದ್ದ 45 ಭಾರತೀಯರ ಶವದೊಂದಿಗೆ ಕೊಚ್ಚಿಗೆ ಆಗಮಿಸಿದೆ. ಐಎಎಫ್‌ನ ಸಿ-130ಜೆ ಟ್ರಾನ್ಸ್‌ಪೋರ್ಟ್ ವಿಮಾನದಲ್ಲಿ ದುರಂತದಲ್ಲಿ ಮಡಿದ ಕಾರ್ಮಿಕರ ಶವವನ್ನು ತಾಯ್ನಾಡಿಗೆ ಕರೆ ತರಲಾಗಿದೆ.

ಭಾರತೀಯ ಏರ್‌ಪೋರ್ಸ್‌ನ ವಿಶೇಷ ವಿಮಾನ ಕುವೈತ್‌ನಲ್ಲಿ ಬೆಂಕಿ ದುರಂತದಲ್ಲಿ ಸಾವನ್ನಪ್ಪಿದ್ದ 45 ಭಾರತೀಯರ ಶವದೊಂದಿಗೆ ಕೊಚ್ಚಿಗೆ ಆಗಮಿಸಿದೆ. ಐಎಎಫ್‌ನ ಸಿ-130ಜೆ ಟ್ರಾನ್ಸ್‌ಪೋರ್ಟ್ ವಿಮಾನದಲ್ಲಿ ದುರಂತದಲ್ಲಿ ಮಡಿದ ಕಾರ್ಮಿಕರ ಶವವನ್ನು ತಾಯ್ನಾಡಿಗೆ ಕರೆ ತರಲಾಗಿದೆ. ಭಾರತದ ವಿದೇಶಾಂಗ ಇಲಾಖೆಯ ರಾಜ್ಯ ಖಾತೆ ಸಚಿವ ಕೀರ್ತಿವರ್ಧನ್ ಸಿಂಗ್ ಕೂಡ ಈ ವಿಮಾನದಲ್ಲಿ ಕೊಚ್ಚಿಗೆ ಆಗಮಿಸಿದ್ದರು. \

ಎರಡು ದಿನಗಳ ಹಿಂದೆ ಕುವೈತ್‌ನ 6 ಅಂತಸ್ಥಿನ ಕಟ್ಟಡವೊಂದರಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 45 ಜನ ಭಾರತೀಯರು ಸಜೀವ ದಹನಗೊಂಡಿದ್ದರು. ಘಟನೆಯ ನಂತರ ಕುವೈತ್‌ಗೆ  ತೆರಳಿದ್ದ ವಿದೇಶಾಂಗ ಖಾತೆ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಅವರು ಕುವೈತ್‌ನ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಶವಗಳನ್ನು ಶೀಘ್ರವಾಗಿ ತಾಯ್ನಾಡಿಗೆ ಸಾಗಿಸುವುದಕ್ಕೆ ನೆರವಾದರು. ಜೊತೆಗೆ ಘಟನೆಯಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭಾರತೀಯರ ಕ್ಷೇಮ ವಿಚಾರಿಸಿದ್ದರು. 

ಕುವೈತ್‌ ಅಗ್ನಿ ದುರಂತ: ಕನ್ನಡಿಗೆ ಸೇರಿ 45 ಭಾರತೀಯರು ಬಲಿ


ಕುವೈತ್ ಅಗ್ನಿ ದುರಂತದಲ್ಲಿ ಮೃತರಾದ 45 ಭಾರತೀಯರಲ್ಲಿ 23 ಜನ ಕೇರಳದವರೇ ಆಗಿದ್ದಾರೆ. ಈ ದುರಂತವೂ ಕುವೈತ್ ಹಾಗೂ ಭಾರತದಲ್ಲಿ ಇರುವ ಅವರ ಸಂಬಂಧಿಗಳು ಆಘಾತಕ್ಕೀಡಾಗುವಂತೆ ಮಾಡಿದೆ. ಕೇರಳದವರ ಜೊತೆಗೆ ತಮಿಳುನಾಡಿನ 7 ಜನ ಆಂಧ್ರ ಪ್ರದೇಶದ ಮೂವರು ಹಾಗೂ ಬಿಹಾರ, ಒಡಿಶಾ, ಕರ್ನಾಟಕ, ಮಹಾರಾಷ್ಟ್ರ, ಉತ್ತರ ಪ್ರದೇಶ, ಜಾರ್ಖಂಡ್, ಹರ್ಯಾಣ ಪಂಜಾಬ್‌ನ ಹಾಗೂ ಪಶ್ಚಿಮ ಬಂಗಾಳದ ತಲಾ ಒಬ್ಬರು ಈ ದುರಂತದಲ್ಲಿ ಮಡಿದಿದ್ದಾರೆ.

ಘಟನೆಗೆ ಏನು ಕಾರಣ ಎಂಬ ಬಗ್ಗೆ ಕುವೈತ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಜೊತೆಗೆ ಈ ದುರಂತದ ಸಂತ್ರಸ್ತರ ಕುಟುಂಬಗಳಿಗೆ ನೆರವಾಗುವ ಕಾರ್ಯದಲ್ಲಿ ತೊಡಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಘಟನೆಯಿಂದ ತೊಂದರೆಗೊಳಗಾದ ಕುಟುಂಬಕ್ಕೆ ಸಾಧ್ಯವಾಗುವ ಎಲ್ಲಾ ಸಹಾಯ ಮಾಡುವುದಾಗಿ ಹೇಳಿದ್ದರು. 

ಸೌದಿಯಲ್ಲಿ 195 ಭಾರತೀಯ ಕಾರ್ಮಿಕರಿದ್ದ ಕಟ್ಟಡಕ್ಕೆ ಬೆಂಕಿ, 40 ಸಾವು: ಹೆಲ್ಪ್‌ಲೈನ್ ತೆರೆದ ರಾಯಭಾರಿ ಕಚೇರಿ

ದುರಂತ ನಡೆದ ಕಟ್ಟಡದಲ್ಲಿ ತಮಿಳುನಾಡು ಹಾಗೂ ಕೇರಳದ 195 ಕಾರ್ಮಿಕರು ವಾಸವಾಗಿದ್ದರು. ಕುವೈತ್‌ನ ದಕ್ಷಿಣದ ಮಂಗಾಫ್‌ ಜಿಲ್ಲೆಯಲ್ಲಿ ಈ ದುರಂತ ನಡೆದಿದೆ.  ಅಡುಗೆಮನೆಯೊಂದರಲ್ಲಿ ಕಾಣಿಸಿಕೊಂಡ ಬೆಂಕಿ ನೋಡ ನೋಡುತ್ತಿದ್ದಂತೆ ಕಟ್ಟಡದ ತುಂಬೆಲ್ಲಾ ಆವರಿಸಿಕೊಂಡು ಈ ಭಾರಿ ದುರಂತ ಸಂಭವಿಸಿತ್ತು.   ಕೇರಳ ಮೂಲದ ಉದ್ಯಮಿ ಕೆ.ಜಿ. ಅಬ್ರಾಹಾಂ ಒಡೆತನದ ಕಟ್ಟಡ ಇದಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಜಾಲತಾಣಗಳಲ್ಲಿ ಮಕ್ಕಳ ಬಳಕೆ ನಿರ್ಬಂಧಿಸಿ: ಸುಧಾ ಮೂರ್ತಿ
ಟ್ರಂಪ್‌ಗೆ ಮುಯ್ಯಿಗೆ ಮುಯ್ಯಿ, ಪುಟಿನ್‌ ಜೊತೆ ಭಾಯಿ ಭಾಯಿ!