
ನವದೆಹಲಿ(ಡಿ.29): ಕಳೆದೊಂದು ವರ್ಷದ ಹಿಂದೆ ಚೀನಾದ ವುಹಾನ್ ಪ್ರಾಂತ್ಯದಿಂದ ಹಬ್ಬಿದ್ದ ಕೊರೋನಾ ವೈರಸ್ ಎಂಬ ಮಹಾಮಾರಿ ಇಡೀ ವಿಶ್ವಕ್ಕೇ ವ್ಯಾಪಿಸಿ ಅಬ್ಬರಿಸುತ್ತಿದೆ. ಈ ಮಹಾಮಾರಿ ಅನೇಕರ ಜೀವ ಬಲಿ ಪಡೆದಿದೆ. ಈ ವೈರಸ್ಗೆ ಲಸಿಕೆ ಸಿಗುವ ಹಂತದಲ್ಲಿರುವಾಗಲೇ ಇದೀಗ ಈ ಕೊರೋನಾದ ಹೊಸ ತಳಿಯೊಂದು ಪತ್ತೆಯಾಗಿದ್ದು, ಇಡೀ ವಿಶ್ವವನ್ನು ಆತಂಕಕ್ಕೆ ದೂಡಿದೆ. ಈ ಆಘಾತದ ನಡುವೆಯೇ ಬ್ರಿಟನ್ನಿಂದ ಭಾರತಕ್ಕೆ ಆಗಮಿಸಿದ ಆರು ಮಂದಿ ಪ್ರಯಾಣಿಕರಲ್ಲಿ ಈ ಸೋಂಕು ದೃಢಪಟ್ಟಿದೆ. ಅದರಲ್ಲೂ ಬೆಂಗಳೂರಿಗೆ ಆಗಮಿಸಿದ ಮೂವರಲ್ಲಿ ಈ ಸೋಂಕು ಕಾಣಿಸಿಕೊಂಡಿದೆ ಎಂಬುವುದು ಮತ್ತಷ್ಟು ಚಿಂತೆಗೀಡು ಮಾಡಿದೆ.
ಬ್ರಿಟನ್ನಿಂದ ಬಂದವರ ಪೈಕಿ ಎಷ್ಟು ಮಂದಿ ಈ ರೂಪಾಂತರಿ ವೈರಸ್ ತೆಕ್ಕೆಗೆ ಸಿಲುಕಿದ್ದಾರೆ ಎಂಬ ಮಾಹಿತಿಯನ್ನು ICMR- ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಹೊರ ಹಾಕಿದೆ. ಈ ಆರು ಮಂದಿಯಲ್ಲಿ ಮೂವರು ಬೆಂಗಳೂರಿನ ನಿಮ್ಹಾನ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಇಬ್ಬರು ಹೈದರಾಬಾದ್ನ ಸಿಸಿಎಂಬಿಯಲ್ಲಿದ್ದಾರೆ. ಇನ್ನೊಬ್ಬ ಪ್ರಯಾಣಿಕ ಪುಣೆಯ ಎನ್ಐವಿಯಲ್ಲಿ ದಾಖಲಾಗಿದ್ದಾರೆ.
ಈ ಕುರಿತಾಗಿ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಕೂಡಾ ಟ್ವೀಟ್ ಮಾಡಿದ್ದು ಕೊರೊನಾ ವೈರಾಣುವಿನ ರೂಪಾಂತರಗೊಂಡ ಪ್ರಬೇಧವನ್ನು ಪತ್ತೆ ಮಾಡಲು ಯು.ಕೆ.ನಿಂದ ರಾಜ್ಯಕ್ಕೆ ಮರಳಿದ್ದ ವ್ಯಕ್ತಿಗಳನ್ನು ನಿಮ್ಹಾನ್ಸ್ ನಲ್ಲಿ ಪರೀಕ್ಷೆಗೊಳಪಡಿಸಲಾಗಿತ್ತು. ಈ ಪೈಕಿ ಮೂವರಲ್ಲಿ ಹೊಸ ಪ್ರಬೇಧದ ಸೋಂಕು ದೃಢಪಟ್ಟಿದ್ದು. ಹೊಸ ಪ್ರಬೇಧದ ವೈರಸ್ ಹರಡದಂತೆ ತಡೆಯಲು ತಜ್ಞರೊಂದಿಗೆ ಚರ್ಚಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ