ರಸ್ತೆ ಪಕ್ಕ ಮಲಗಿದ್ದ 10 ಕಾರ್ಮಿಕರ ಮೇಲೆ ಹರಿದ ಟ್ರಕ್‌: 5 ಸಾವು, ಐವರು ಗಂಭೀರ

Published : Oct 03, 2023, 07:16 AM ISTUpdated : Oct 03, 2023, 07:17 AM IST
ರಸ್ತೆ ಪಕ್ಕ ಮಲಗಿದ್ದ 10 ಕಾರ್ಮಿಕರ ಮೇಲೆ ಹರಿದ ಟ್ರಕ್‌: 5 ಸಾವು, ಐವರು ಗಂಭೀರ

ಸಾರಾಂಶ

ಸೇಬು ಸಾಗಿಸುತ್ತಿದ್ದ ಟ್ರಕ್ಕೊಂದು ರಸ್ತೆ ಪಕ್ಕದಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಪರಿಣಾಮ 5 ಕಾರ್ಮಿಕರು ಸಾವನ್ನಪ್ಪಿದ್ದು ಐವರು ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಮಹಾರಾಷ್ಟ್ರದ ಬುಲ್ಡಾನಾ ಬಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

ಬುಲ್ಡಾನಾ: ಸೇಬು ಸಾಗಿಸುತ್ತಿದ್ದ ಟ್ರಕ್ಕೊಂದು ರಸ್ತೆ ಪಕ್ಕದಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಪರಿಣಾಮ 5 ಕಾರ್ಮಿಕರು ಸಾವನ್ನಪ್ಪಿದ್ದು ಐವರು ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಮಹಾರಾಷ್ಟ್ರದ ಬುಲ್ಡಾನಾ ಬಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಕಾರ್ಮಿಕರು ರಸ್ತೆ ರಿಪೇರಿ ಕೆಲಸಕ್ಕೆ ಬಂದು ಅಲ್ಲೇ ತಾತ್ಕಾಲಿಕ ಶೆಡ್‌ ನಿರ್ಮಿಸಿ ವಾಸಿಸುತ್ತಿದ್ದರು. ವಾಹನದ ಚಕ್ರದ ಮೇಲಿನ ನಿಯಂತ್ರಣ ಕಳೆದುಕೊಂಡ ಟ್ರಕ್‌ ಚಾಲಕ ವಾಹನವನ್ನು ಕಾರ್ಮಿಕರ ಮೇಲೆ ಹರಿಸಿದ್ದು, ಘಟನೆ ನಡೆದ ಸ್ಥಳದಿಂದ ಟ್ರಕ್‌ ಚಾಲಕ ಪರಾರಿಯಾಗಿದ್ದಾನೆ. ಆತನ ಪತ್ತೆಗೆ ಬಲೆ ಬೀಸಲಾಗಿದೆಯೆಂದು ಪೋಲೀಸರು ತಿಳಿಸಿದ್ದಾರೆ. ಬದುಕುಳಿದವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಚೋಪ್ಡೆ ಆಸ್ಪತ್ರೆಗೆ ಸೇರಿಸಲಾಗಿದೆ.

ಮುಂಜಾನೆ 5.30ರ ಸುಮಾರಿಗೆ ಈ ಘಟನೆ ನಡೆದಿದೆ.  ಜಿಲ್ಲೆಯ ವಡ್ನರ್ ಭೋಲ್ಜಿ ಗ್ರಾಮದಲ್ಲಿ ನಿರ್ಮಿಸಲಾಗುತ್ತಿರುವ ಸರ್ವಿಸ್ ರಸ್ತೆಯ ಬದಿಯಲ್ಲಿ ತಾತ್ಕಾಲಿಕ ಗುಡಿಸಲುಗಳಲ್ಲಿ ಕಾರ್ಮಿಕರು ಮಲಗಿದ್ದಾಗ ಬೆಳಿಗ್ಗೆ 5.30 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ರಸ್ತೆಯಲ್ಲಿ ಚಲಿಸುತ್ತಿದ್ದ ಟ್ರಕ್ ಕಾರ್ಮಿಕರ ಮೇಲೆ ಹರಿದಿದೆ ಎಂದು ಅವರು ಹೇಳಿದರು.

ಬ್ರಿಟಿಷ್‌ ಆಳ್ವಿಕೆಯ 40 ವರ್ಷದಲ್ಲಿ 16.5 ಕೋಟಿಗೂ ಹೆಚ್ಚು ಭಾರತೀಯರ ಸಾವು, 3600 ಲಕ್ಷ ಕೋಟಿ ರು. ಲೂಟಿ!

ಜಾತ್ರೆಯಲ್ಲಿ ಜಾಯಿಂಟ್ ವ್ಹೀಲ್‌ಗೆ ಸಿಲುಕಿಕೊಂಡ ಬಾಲಕಿಯ ಕೂದಲು: ಆಘಾತಕಾರಿ ವೀಡಿಯೋ ವೈರಲ್

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Flood: ಮೋದಿ ಜೀ ನಮ್ಮನ್ನು ಕಾಪಾಡಿ; ಟಿಬೆಟ್ ದುರಂತದ ನಡುವೆ ಕಣ್ಣೀರಿಡುತ್ತಾ ಭಾರತಕ್ಕೆ ವಿಡಿಯೋ ಸಂದೇಶ ಕಳುಹಿಸಿದ ಸುನೀತಾ!
ಬ್ರಹ್ಮಪುತ್ರ ನದಿಗೆ ಚೀನಾದಿಂದ ವಿಶ್ವದ ಅತೀ ದೊಡ್ಡ ಡ್ಯಾಂ: ಈಶಾನ್ಯ ಭಾರತಕ್ಕೆ ನೇಪಾಳದಂತೆಯೇ ಜಲಸ್ಫೋಟದ ಎಚ್ಚರಿಕೆ!