ಉದ್ಧವ್ ಠಾಕ್ರೆಯನ್ನು 'ಕಪಟಿ ರಾಜ' ಎಂದ ಫಡ್ನವೀಸ್ ಪತ್ನಿ ಅಮೃತಾ, ಕೆಲವೇ ಕ್ಷಣದಲ್ಲಿ ಟ್ವೀಟ್‌ ಡಿಲೀಟ್‌!

Published : Jun 22, 2022, 01:35 PM IST
ಉದ್ಧವ್ ಠಾಕ್ರೆಯನ್ನು 'ಕಪಟಿ ರಾಜ' ಎಂದ ಫಡ್ನವೀಸ್ ಪತ್ನಿ ಅಮೃತಾ, ಕೆಲವೇ ಕ್ಷಣದಲ್ಲಿ ಟ್ವೀಟ್‌ ಡಿಲೀಟ್‌!

ಸಾರಾಂಶ

* ಮಹಾರಾ‍ಷ್ಟ್ರದಲ್ಲಿ ರಾಜಕೀಯ ಗೊಂದಲ * ಉದ್ಧವ್ ಠಾಕ್ರೆಯನ್ನು ಕಪಟಿ ರಾಜ ಎಂದ ಫಡ್ನವೀಸ್ ಪತ್ನಿ * ಟ್ವೀಟ್‌ ಮಾಡಿದ ಕೆಲವೇ ಕ್ಷಣಗಳಲ್ಲಿ ಡಿಲೀಟ್

ಮುಂಬೈ(ಜೂ.22): ಮಹಾರಾಷ್ಟ್ರದಲ್ಲಿ ಆರಂಭವಾದ ರಾಜಕೀಯ ಗೊಂದಲ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಪ್ರಬಲ ನಾಯಕ ಏಕನಾಥ್ ಶಿಂಧೆ ಮಹಾರಾಷ್ಟ್ರದಿಂದ ಗುಜರಾತ್‌ಗೆ ಸುಮಾರು ಎರಡು ಡಜನ್ ಶಾಸಕರೊಂದಿಗೆ ತೆರಳಿರುವುದರಿಂದ ಆಡಳಿತಾರೂಢ ಶಿವಸೇನೆಯಲ್ಲಿ ಬಂಡಾಯದ ಸಾಧ್ಯತೆ ಕಂಡು ಬಂದಿದೆ. ಅದೇ ಸಮಯದಲ್ಲಿ, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಇತರ ಆಡಳಿತ ನಾಯಕರು ಸಮನ್ವಯದಲ್ಲಿ ನಿರತರಾಗಿದ್ದಾರೆ. ಈ ಮಧ್ಯೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನವೀಸ್ ಮಾಡಿರುವ ಟ್ವೀಟ್ ರಾಜಕೀಯ ವಲಯದಲ್ಲಿ ಸಂಚಲನವನ್ನು ಹೆಚ್ಚಿಸಿದೆ.

ಕಪಟಿ ರಾಜನಿದ್ದ ಎಂದ ಅಮೃತಾ 

ಅಮೃತಾ ಫಡ್ನವೀಸ್ ಹಿಂದಿಯಲ್ಲಿ ಟ್ವೀಟ್ ಒಂದನ್ನು ಮಾಡುತ್ತಾ - "ಏಕ್ ಥಾ ಕಪಟಿ ರಾಜಾ" ಈ ಟ್ವೀಟ್‌ ಮಾಡಿದ್ದೇ ತಡ ಅನೇಕ ಸೋಶಿಯಲ್ ಮೀಡಿಯಾ ಬಳಕೆದಾರರು ಅವರ ಟ್ವೀಟ್ ಅನ್ನು ಚರ್ಚಿಸಲು ಪ್ರಾರಂಭಿಸಿದರು. ಇದನ್ನು ಬರೆಯುವ ಮೂಲಕ ಫಡ್ನವೀಸ್ ಅವರು ಮಹಾರಾಷ್ಟ್ರದ ಪ್ರಸ್ತುತ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಗೇಲಿ ಮಾಡಿದ್ದಾರೆ ಎಂದು ಯಾರೋ ಹೇಳಿದರು.

ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ, ಕಾಂಗ್ರೆಸ್ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಮಹಾ ವಿಕಾಸ್ ಅಘಾಡಿ ಸಮ್ಮಿಶ್ರ ಸರ್ಕಾರ ಪತನದ ಅಂಚಿನಲ್ಲಿದೆ, ಸಚಿವ ಏಕನಾಥ್ ಶಿಂಧೆ ಮತ್ತು ಇತರ 21 ಶಿವಸೇನೆ ಶಾಸಕರು ಸೂರತ್‌ಗೆ ತೆರಳಿದಾಗಿನಿಂದ ಕೋಲಾಹಲ ಉಂಟಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಈ ಟ್ವೀಟ್ ಮಾಡಿದ್ದಾರೆ ಎಂಬುವುದು ಉಲ್ಲೇಖನೀಯ, 

ಹೀಗಂದಿದ್ದು ಯಾರಿಗೆ ಎಂದು ಪ್ರಶ್ನಿಸಿದ ಜನರು

"ಕಪಟಿ ರಾಜನೊಬ್ಬನಿದ್ದ ಎಂದು ಬರೆದ ನಂತರ ಅಮೃತಾ ಫಡ್ನವೀಸ್ ಆ ಟ್ವೀಟ್ ಅನ್ನು ಸಹ ಅಳಿಸಿದ್ದಾರೆ. ಆದರೆ, ಈ ಟ್ವೀಟ್‌ನ ಸ್ಕ್ರೀನ್ ಶಾಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಅವರು ಬಳಸಿದ ಈ ಪದಗಳನ್ನು ಶಿವಸೇನೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ತಳುಕು ಹಾಕಲಾಗುತ್ತಿದೆ. ಹೀಗಿರುವಾಗಲೇ ಇತ್ತ ಅಮೃತಾ ಅವರ ಪತಿ ದೇವೇಂದ್ರ ಫಡ್ನವೀಸ್ ದೆಹಲಿಗೆ ಬಂದಿದ್ದಾರೆ.. ಮಹಾರಾಷ್ಟ್ರದ ಸ್ಥಿತಿಗತಿಗಳ ಬಗ್ಗೆ ಬಿಜೆಪಿ ಹೈಕಮಾಂಡ್ ಜೊತೆ ಚಚರ್ಚಿಸಲಿದ್ದಾರೆ.

ಹಲವು ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದಾರೆ ಅಮೃತಾ 

ಅಮೃತಾ ಫಡ್ನವೀಸ್ ಅವರಿಗೆ 43 ವರ್ಷ. ಅವರು ಸಾಮಾಜಿಕ ಜಾಲತಾಣಗಳಲ್ಲಿ ತುಂಬಾ ಸಕ್ರಿಯರಾಗಿದ್ದಾರೆ. ಅಲ್ಲದೇ ಆಕ್ಸಿಸ್ ಬ್ಯಾಂಕ್‌ನ ಉಪಾಧ್ಯಕ್ಷರಾಗಿದ್ದಾರೆ. ಗ್ಲಾಮರಸ್ ಜೀವನ ಸಾಗಿಸುತ್ತಿರುವ ಅವರು ಸಂಗೀತದಲ್ಲಿ ತೀವ್ರ ಆಸಕ್ತಿ ಹೊಂದಿದ್ದಾರೆ. ಸಮಾಜಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಹೇಳಿಕೆಗಳನ್ನು ನಿಡುತ್ತಾರೆ. ಅವರೊಬ್ಬ ಸಾಮಾಜಿಕ ಕಾರ್ಯಕರ್ತೆಯಾಗಿಯೂ ಗುರುತಿಸಿಕೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದೇಗುಲ ಪ್ರವೇಶಿಸುವುದಿಲ್ಲ ಎಂದ ಕ್ರಿಶ್ಚಿಯನ್ ಮಿಲಿಟರಿ ಅಧಿಕಾರಿಯ ಅಮಾನತು ಎತ್ತಿ ಹಿಡಿದ ಸುಪ್ರೀಂಕೋರ್ಟ್‌ ಹೇಳಿದ್ದೇನು?
ಇಂಡಿಗೋದ ಭಾರೀ ಕುಸಿತ: ಒಂದೇ ವಿಮಾನಯಾನ ಸಂಸ್ಥೆಯ ಏಕಸ್ವಾಮ್ಯವಾದಾಗ