10 ವರ್ಷಗಳ ಹಿಂದೆ ಆಧಾರ್ ಮಾಡಿಸಿದ್ದರೆ ಅಪ್ಡೇಟ್ ಕಡ್ಡಾಯ, ಡಿ.14ರ ಒಳಗೆ ಆನ್‌ಲೈನ್ ನಲ್ಲೇ ನವೀಕರಿಸಿ

Published : Nov 23, 2023, 05:58 PM IST
10 ವರ್ಷಗಳ ಹಿಂದೆ ಆಧಾರ್ ಮಾಡಿಸಿದ್ದರೆ ಅಪ್ಡೇಟ್ ಕಡ್ಡಾಯ, ಡಿ.14ರ ಒಳಗೆ ಆನ್‌ಲೈನ್ ನಲ್ಲೇ ನವೀಕರಿಸಿ

ಸಾರಾಂಶ

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI)  ಡಿಸೆಂಬರ್ 14 ರವರೆಗೆ ಆನ್‌ಲೈನ್ ಆಧಾರ್ ಅಪ್‌ಡೇಟ್‌ಗಳಿಗೆ ಅವಕಾಶ ನೀಡಿದೆ. 50 ಶುಲ್ಕ ರೂ ಪಾವತಿಸಿ. ನಿಮ್ಮ ಆಧಾರ್‌ ಅಪ್‌ಡೇಟ್‌ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. 

ಬೆಂಗಳೂರು (ನ.23): ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI)  ಡಿಸೆಂಬರ್ 14 ರವರೆಗೆ ಆನ್‌ಲೈನ್ ಆಧಾರ್ ಅಪ್‌ಡೇಟ್‌ಗಳಿಗೆ ಅವಕಾಶ ನೀಡಿದೆ. 50 ಶುಲ್ಕ ರೂ ಪಾವತಿಸಿ. ನಿಮ್ಮ ಆಧಾರ್‌ ಅಪ್‌ಡೇಟ್‌ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. 

2011ರಿಂದ 2015ರೊಳಗೆ ಆಧಾರ್ ಕಾರ್ಡ್ ಮಾಡಿಸಿಕೊಂಡು ಒಮ್ಮೆಯೂ ಅಪ್ಡೇಟ್ ಮಾಡದವರಿಗೆ ಇದೀಗ ಅಪ್ಡೇಟ್ ಮಾಡುವಂತೆ ಕಟ್ಟುನಿಟ್ಟಿನ ಆದೇಶ ಇದ್ದು, ಈ ಸಂಬಂಧ ಮೆಸೇಜ್ ಬರುತ್ತಿದೆ.

ನವದಂಪತಿಗಳಿಗೆ ತಿರುಪತಿ ತಿಮ್ಮಪ್ಪನ ವಿಶೇಷ ದರ್ಶನ ಭಾಗ್ಯ: ದಾಖಲೆ ಕಡ್ಡಾಯ
 
ಈ ಅವಧಿಯಲ್ಲಿ, ಭಾರತೀಯ ನಿವಾಸಿಗಳು ತಮ್ಮ ಮಾಹಿತಿಯನ್ನು-ಹೆಸರು, ವಿಳಾಸ, ಹುಟ್ಟಿದ ದಿನಾಂಕ, ಲಿಂಗ, ಮೊಬೈಲ್ ಸಂಖ್ಯೆ ಮತ್ತು ಇಮೇಲ್, ಇಮೇಲ್ ಇಲ್ಲದೇ ಆನ್‌ಲೈನ್ ಪೋರ್ಟಲ್ ಮೂಲಕ ಮಾರ್ಪಡಿಸಲು ಅಥವಾ ಸರಿಪಡಿಸಲು ಅವಕಾಶವನ್ನು ಹೊಂದಿರುತ್ತಾರೆ.  

ತಮ್ಮ ಭಾವಚಿತ್ರ, ಐರಿಸ್ ಅಥವಾ ಇತರ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸಬೇಕಾದ ವ್ಯಕ್ತಿಗಳು ಇನ್ನೂ ಆಧಾರ್ ನೋಂದಣಿ ಕೇಂದ್ರಕ್ಕೆ ವೈಯಕ್ತಿಕವಾಗಿ ಭೇಟಿ ನೀಡಬೇಕು ಮತ್ತು ಅನ್ವಯವಾಗುವ ಶುಲ್ಕವನ್ನು ಪಾವತಿಸಬೇಕು. ಫಿಂಗರ್‌ಪ್ರಿಂಟ್‌ಗಳು, ಐರಿಸ್ ಪ್ಯಾಟರ್ನ್‌ಗಳು ಮತ್ತು ಇತರ ಬಯೋಮೆಟ್ರಿಕ್ ಡೇಟಾವನ್ನು ಸ್ಕ್ಯಾನ್ ಮಾಡಲು ದಾಖಲಾತಿ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ಅಪ್‌ಡೇಟ್‌ಗಳಿಗೆ ವಿಶೇಷ ಉಪಕರಣಗಳ ಬಳಕೆಯ ಅಗತ್ಯವಿರುತ್ತದೆ.

ಆಧಾರ್‌ ಕಾರ್ಡ್‌ ಸುರಕ್ಷತೆ ಬಗ್ಗೆ ಅನುಮಾನ ಇದ್ಯಾ? ಬಯೋಮೆಟ್ರಿಕ್ ಡೇಟಾ ಲಾಕ್ / ಅನ್ಲಾಕ್‌ ಬಗ್ಗೆ ತಿಳ್ಕೊಳ್ಳಿ..

ಹೆಚ್ಚುವರಿಯಾಗಿ  ಬಯೋಮೆಟ್ರಿಕ್ ಅಪ್‌ಡೇಟ್ ಪ್ರಕ್ರಿಯೆಯು ಸಂಭಾವ್ಯ ಸೈಬರ್‌ ಕ್ರೈಂ ಚಟುವಟಿಕೆಗಳನ್ನು ತಡೆಗಟ್ಟಲು ಅಗತ್ಯವಾದ ಪರಿಶೀಲನಾ ಕಾರ್ಯವಿಧಾನಗಳನ್ನು ಸಹ ಒಳಗೊಂಡಿದೆ. ನೀವು ನಿಮ್ಮ ಆಧಾರ್ ಅಪ್‌ಡೇಟ್‌ ಮಾಡಿಸಿಕೊಳ್ಳಬೇಕೆಂದರೆ ಇಂದೇ ಹತ್ತಿರದ ಆಧಾರ್ ಸೆಂಟರ್‌ ಗೆ ಭೇಟಿ ನೀಡಿ ಪರಿಶೀಲನೆ ಮಾಡಿಕೊಳ್ಳುವುದು ಉತ್ತಮ 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇಂದು ರಾತ್ರಿ 8ರ ಒಳಗೆ ಟಿಕೆಟ್ ಮೊತ್ತ ಮರುಪಾವತಿಸಿ : ಇಂಡಿಗೋಗೆ ಕೇಂದ್ರ ಗಡುವು
India Latest News Live: ಆಯೋಧ್ಯೆಯ ಬಾಬ್ರಿ ಮಸೀದಿಯನ್ನೇ ಹೋಲುವಂತಹ ಮಸೀದಿಗೆ ಶಂಕು ಸ್ಥಾಪನೆ