
ಗುವಾಹಟಿ: ಅಕ್ರಮ ವಲಸಿಗರು ಭಾರತೀಯ ಪೌರತ್ವ ಪಡೆಯುವುದನ್ನು ತಡೆಗಟ್ಟುವ ಉದ್ದೇಶದಿಂದ, 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಅಸ್ಸಾಂನಲ್ಲಿ ಹೊಸದಾಗಿ ಆಧಾರ್ ಕಾರ್ಡ್ ನೀಡಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಘೋಷಿಸಿದ್ದಾರೆ.
ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘18 ವರ್ಷಕ್ಕಿಂತ ಮೇಲ್ಪಟ್ಟವರು ಇನ್ನೂ ಆಧಾರ್ ಕಾರ್ಡ್ ಪಡೆಯದಿದ್ದರೆ, ಅರ್ಜಿ ಸಲ್ಲಿಸಲು ಕೇವಲ ಒಂದು ತಿಂಗಳ ಕಾಲಾವಕಾಶ ನೀಡಲಾಗುವುದು. ಬಳಿಕ ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಹೊಸದಾಗಿ ಕಾರ್ಡ್ ವಿತರಿಸುವುದಿಲ್ಲ. ಆದರೆ ಟೀ ಬುಡಕಟ್ಟು, ಎಸ್ಸಿ ಮತ್ತು ಎಸ್ಟಿ ಸಮುದಾಯದವರಿಗೆ ಮುಂದಿನ ಒಂದು ವರ್ಷದವರೆಗೆ ಅವಕಾಶ ನೀಡಲಾಗುವುದು. ಬಾಂಗ್ಲಾದೇಶದಿಂದ ಅಕ್ರಮ ವಲಸಿಗರ ಆತಂಕ ಹೆಚ್ಚಿರುವ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ’ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ತಿಳಿಸಿದರು.
ಇನ್ಮುಂದೆ ಡ್ರೈವಿಂಗ್ ಲೈಸೆನ್ಸ್, RC ಬುಕ್ನಲ್ಲಿ ಇದು ಕಡ್ಡಾಯ: ಕೇಂದ್ರದಿಂದ ಆದೇಶ
ನವದೆಹಲಿ: ದೇಶದ ಎಲ್ಲಾ ಡ್ರೈವಿಂಗ್ ಲೈಸೆನ್ಸ್ ಮತ್ತು ವಾಹನ ಮಾಲೀಕರು ತಮ್ಮ ಮೊಬೈಲ್ ನಂಬರ್ಗಳನ್ನು ಆಧಾರ್ ಮೂಲಕ ಲಿಂಕ್ ಮಾಡಬೇಕು ಎಂದು ರಸ್ತೆ ಸಾರಿಗೆ ಸಚಿವಾಲಯ ತಿಳಿಸಿದೆ. ಸುಗಮ ಸಂವಹನ ಮತ್ತು ಸಾರಿಗೆ ಸೇವೆಗಳಿಗೆ ಸುಲಭ ಪ್ರವೇಶಕ್ಕಾಗಿ ಆಧಾರ್ ಮೂಲಕ ಈ ಪ್ರಕ್ರಿಯೆ ಪೂರ್ಣಗೊಳಿಸಬೇಕು. ವಾಹನ ನೋಂದಣಿ ಮತ್ತು ಮೊಬೈಲ್ ನಂಬರ್ ಲಿಂಕ್ ಮಾಡುವುದು, ಆಧಾರ್ನಿಂದ ಪರಿಶೀಲಿಸುವುದು ಕಡ್ಡಾಯ ಅಂತ ಸಚಿವಾಲಯ ತಿಳಿಸಿದೆ. ಯಾವುದೇ ಸಾರಿಗೆ ಅಥವಾ ಡ್ರೈವಿಂಗ್ ಸಂಬಂಧಿ ಸೇವೆಗಳನ್ನು ಪಡೆಯಲು ಇದು ಅಗತ್ಯ.
ಸುಗಮ ಸಂವಹನ ಮತ್ತು ಸಾರಿಗೆ ಸೇವೆಗಳಿಗೆ ಸುಲಭ ಪ್ರವೇಶಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಆಧಾರ್ ಮೂಲಕ ಈ ಪ್ರಕ್ರಿಯೆ ಪೂರ್ಣಗೊಳಿಸಬೇಕು. ವಾಹನ ನೋಂದಣಿ ಮತ್ತು ಮೊಬೈಲ್ ನಂಬರ್ ಲಿಂಕ್ ಮಾಡುವುದು, ಆಧಾರ್ನಿಂದ ಪರಿಶೀಲಿಸುವುದು ಕಡ್ಡಾಯ. ಯಾವುದೇ ಸಾರಿಗೆ ಅಥವಾ ಡ್ರೈವಿಂಗ್ ಸಂಬಂಧಿ ಸೇವೆಗಳನ್ನು ಪಡೆಯಲು ಇದು ಅಗತ್ಯ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ