ದಿಲ್ಲಿ ಗೆದ್ದ ಆಪ್ ಮುಂದಿನ ಗುರಿ ಲೋಕಲ್: ಬಿಜೆಪಿ, ಕಾಂಗ್ರೆಸ್‌ಗೆ ಟೆನ್ಶನ್!

Published : Feb 16, 2020, 08:32 AM ISTUpdated : Feb 16, 2020, 09:34 AM IST
ದಿಲ್ಲಿ ಗೆದ್ದ ಆಪ್ ಮುಂದಿನ ಗುರಿ ಲೋಕಲ್: ಬಿಜೆಪಿ, ಕಾಂಗ್ರೆಸ್‌ಗೆ ಟೆನ್ಶನ್!

ಸಾರಾಂಶ

ದಿಲ್ಲಿ ಆಯ್ತು, ಈಗ ಆಪ್‌ ಗುರಿ ಲೋಕಲ್‌| ದೇಶದ ಎಲ್ಲ ಸ್ಥಳೀಯ ಸಂಸ್ಥೆ ಚುನಾವಣೆಗೂ ಸ್ಪರ್ಧೆ| ಧನಾತ್ಮಕ ರಾಷ್ಟ್ರೀಯತೆ ಮಂತ್ರ

ನವದೆಹಲಿ[ಫೆ.16]: ದೆಹಲಿ ವಿಧಾನಸಭೆ ಚುನಾವಣೆ ಗೆಲುವಿನ ಉತ್ಸಾಹದಲ್ಲಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ನೇತೃತ್ವದ ಆಮ್‌ ಆದ್ಮಿ ಪಕ್ಷ ದೇಶದಲ್ಲೆಡೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದೆ. ಈ ಮೂಲಕ ಪಕ್ಷವನ್ನು ದೆಹಲಿಯ ಹೊರಗೂ ವಿಸ್ತರಿಸುವ ಮಹತ್ವಾಕಾಂಕ್ಷಿ ಗುರಿಯನ್ನು ಅರವಿಂದ ಕೇಜ್ರಿವಾಲ್‌ ಹಾಕಿಕೊಂಡಿದ್ದಾರೆ.

ಭಾನುವಾರ ನಡೆಯುವ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷವನ್ನು ಇತರ ರಾಜ್ಯಗಳಿಗೂ ವಿಸ್ತರಿಸುವ ಕುರಿತು ಚರ್ಚಿಸಲಾಗುತ್ತದೆ. ‘ಧನಾತ್ಮಕ ರಾಷ್ಟ್ರೀಯತೆ’ ಮಂತ್ರದೊಂದಿಗೆ ನಾವು ಪಕ್ಷವನ್ನು ವಿಸ್ತರಿಸಲಿದ್ದೇವೆ. ಮಧ್ಯ ಪ್ರದೇಶ ಮತ್ತು ಗುಜರಾತ್‌ನಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪಕ್ಷ ಸ್ಪರ್ಧೆ ಮಾಡಲಿದೆ. ಅಲ್ಲದೇ ಪಂಜಾಬ್‌ ಸೇರಿದಂತೆ ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ನಿಟ್ಟಿನಲ್ಲಿಯೂ ಪಕ್ಷ ದೃಷ್ಟಿಹರಿಸಿದೆ. ಪಕ್ಷಕ್ಕೆ ಸೇರ್ಪಡೆ ಆಗಲು ಬಯಸುವವರು 9871010101 ನಂಬರ್‌ಗೆ ಮಿಸ್ಡ್‌ ಕಾಲ್‌ ನೀಡುವ ಮೂಲಕ ನಮ್ಮ ಪಕ್ಷಕ್ಕೆ ಸೇರ್ಪಡೆ ಆಗಬುದು ಎಂದು ಆಪ್‌ ಮುಖಂಡ ಗೋಪಾಲ್‌ ರಾಯ್‌ ತಿಳಿಸಿದ್ದಾರೆ.

ಆಮ್‌ ಆದ್ಮಿ ಪಕ್ಷ ದೆಹಲಿಯ ಹೊರಗೂ ಪಕ್ಷದ ಅಸ್ತಿತ್ವವನ್ನು ವಿಸ್ತರಿಸಲು ಯತ್ನಿಸಿದ್ದು ಇದೇ ಮೊದಲೇನೂ ಅಲ್ಲ. ಪಂಜಾಬ್‌ನಲ್ಲಿ ಭಾರೀ ನಿರೀಕ್ಷೆ ಹುಟ್ಟುಹಾಕಿದ್ದ ಆಪ್‌ ಕೇವಲ 20 ಸ್ಥಾನಗಳನ್ನಷ್ಟೇ ಗೆದ್ದುಕೊಂಡಿತ್ತು. ಕಳೆದ ವರ್ಷ ಲೋಕಸಭೆ ಚುನಾವಣೆಯ ವೇಳೆ ದೆಹಲಿಯಲ್ಲಿ ಒಂದೇ ಒಂದು ಸ್ಥಾನವನ್ನೂ ಗೆಲ್ಲಲು ಸಾಧ್ಯವಾಗಿರಲಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

India Latest News Live: ಭಾರತದಲ್ಲಿ ಭರ್ಜರಿ ಹೂಡಿಕೆಯ ಘೋಷಣೆ ಮಾಡಿದ ದೈತ್ಯ ಕಂಪನಿಗಳು
ಗುಜರಾತ್‌ನಲ್ಲೊಂದು ನಿರ್ಭಯಾ ಪ್ರಕರಣ