ಪ್ರಧಾನಿ ಮೋದಿ ಟೀಕಿಸಿದ ಪೊಸ್ಟರ್ ಪ್ರಕರಣದ ಹಿಂದೆ ಆಮ್ ಆದ್ಮಿ; 25 ಮಂದಿ ಅರೆಸ್ಟ್!

Published : May 16, 2021, 10:46 PM IST
ಪ್ರಧಾನಿ ಮೋದಿ ಟೀಕಿಸಿದ ಪೊಸ್ಟರ್ ಪ್ರಕರಣದ ಹಿಂದೆ ಆಮ್ ಆದ್ಮಿ; 25 ಮಂದಿ ಅರೆಸ್ಟ್!

ಸಾರಾಂಶ

ಮೋದಿ ಟೀಕಿಸೆ ರಾಷ್ಟ್ರ ರಾಜಧಾನಿ ಹಲವೆಡೆ ಪೋಸ್ಟರ್ ಪೋಸ್ಟರ್ ಪ್ರಕರಣದ ಹಿಂದೆ ಆಮ್ ಆದ್ಮಿ ಪಕ್ಷದ ಕೈವಾಡ ನಾಯಕ ಅರವಿಂದ್ ಗೌತಮ್ ಎಸ್ಕೇಪ್

ದೆಹಲಿ(ಮೇ.16):  ದೇಶದಲ್ಲಿನ ಕೊರೋನಾ ಪರಿಸ್ಥಿತಿ ಹಾಗೂ ದೆಹಲಿಯಲ್ಲಿ ಆಕ್ಸಿಜನ್ ಕೊರತೆ , ಕೊರೋನಾ ಪ್ರಕರಣ ಏರಿಕೆಗೆ ಪ್ರಧಾನಿ ನರೇಂದ್ರ ಮೋದಿ ಕಾರಣ ಎಂದು ಟೀಕಿಸಿ ದೆಹಲಿಯ ಪ್ರಮುಖ ಕಡೆಗಳಲ್ಲಿ ಪೋಸ್ಟರ್ ಹಾಕಲಾಗಿತ್ತು. ಈ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ಕಾರಣ ಈ ಪ್ರಕರಣದ ಹಿಂದೆ ಆಮ್ ಆದ್ಮಿ ಪಕ್ಷದ ನೇರ ಕೈವಾಡವಿರುದು ತನಿಖೆಯಲ್ಲಿ ಬಯಲಾಗಿದೆ.

ಸಭೆಗೆ ಬಾರದೆ 2ನೇ ಅಲೆಗೆ ಕೇಂದ್ರವೇ ಕಾರಣ ಅನ್ನುವರಿಗೆ ಬಿಜೆಪಿ ದಾಖಲೆ ಉತ್ತರ

ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಗೌತಮ್ , ಮೋದಿ ಟೀಕಿಸಿ ಪೋಸ್ಟರ್ ಹಾಕಲು 9,000 ರೂಪಾಯಿ ನೀಡಿರುವುದು ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ದೆಹಲಿ ಪೊಲೀಸರು ಒಬ್ಬೊಬ್ಬರನ್ನೇ ಅರೆಸ್ಟ್ ಮಾಡುತ್ತಿದ್ದಂತೆ, ಅರವಿಂದ್ ಗೌತಮ್ ಎಸ್ಕೇಪ್ ಆಗಿದ್ದಾನೆ.

 

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 25 ಮಂದಿಯನ್ನು ದೆಹಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ ಮೂಲಕ ಆಮ್ ಆದ್ಮಿ ಪ್ರಧಾನಿ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ವ್ಯವಸ್ಥಿತಿ ಪಿತೂರಿ ಮಾಡುತ್ತಿದ್ದಾರೆ ಎಂಬ ಆರೋಪಕ್ಕೆ ಪುಷ್ಠಿ ಸಿಕ್ಕಿದೆ. 

ಪೊಲೀಸರು ಪ್ರಕರಣ ಹಿಂದಿನ ರೂವಾರಿಗಳನ್ನು ಬಂಧಿಸುತ್ತಿದ್ದಂತೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಪ್ರಮುಖರು ಮೋದಿ ಟೀಕಿಸುವ ಪಕ್ಷದಲ್ಲಿ ನಾನು ಇದ್ದೇನೆ. ನನ್ನನ್ನೂ ಅರೆಸ್ಟ್ ಮಾಡಿ ಎಂದು ಟ್ವೀಟ್ ಮಾಡಿದ್ದರು. ವಿರೋಧ ಪಕ್ಷದ ಪ್ರಮುಖ ನಾಯಕರು ಬಂಧನ ವಿರುದ್ಧ ಕಿಡಿ ಕಾರಿದ್ದರು. 

 

ಅಸಲಿಯತ್ತು ಬಹಿರಂಗವಾಗುತ್ತಿದ್ದಂತೆ ಕಾಂಗ್ರೆಸ್ ಪೇಚಿಗೆ ಸಿಲುಕಿದೆ. ಇದೀಗ ಈ ಪ್ರಕರಣದಲ್ಲಿ ಕಾಂಗ್ರೆಸ್ ರೋಷಾವೇಶ ನೋಡಿದರೆ ಕಾಂಗ್ರೆಸ್ ನಾಯಕರೂ ಇದರ ಹಿಂದೆ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ ಎಂಬ ಮಾತುಗಳು ಕೇಳಿಬರುತ್ತಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!