ಆಪ್‌ನಿಂದ ಟಿಕೆಟ್‌ ನಿರಾಕರಣೆ: ಶಾಸ್ತ್ರಿ ಮೊಮ್ಮಗ ಕಾಂಗ್ರೆಸ್‌ಗೆ!

Published : Jan 19, 2020, 12:59 PM ISTUpdated : Feb 06, 2020, 06:02 PM IST
ಆಪ್‌ನಿಂದ ಟಿಕೆಟ್‌ ನಿರಾಕರಣೆ: ಶಾಸ್ತ್ರಿ ಮೊಮ್ಮಗ ಕಾಂಗ್ರೆಸ್‌ಗೆ!

ಸಾರಾಂಶ

ಆಪ್‌ನಿಂದ ಟಿಕೆಟ್‌ ನಿರಾಕರಣೆ: ಶಾಸ್ತ್ರಿ ಮೊಮ್ಮಗ ಕಾಂಗ್ರೆಸ್‌ಗೆ| ದ್ವಾರಕಾ ವಿಧಾನಸಭೆ ಕ್ಷೇತ್ರದಿಂದ ಟಿಕೆಟ್‌ ನಿರಾಕರಿಸಿದ ಹಿನ್ನೆಲೆ

ನವದೆಹಲಿ[ಜ.19]; ದೇಶದ ಮಾಜಿ ಪ್ರಧಾನಿ ಲಾಲ್‌ ಬಹದ್ದೂರ್‌ ಶಾಸ್ತ್ರಿಯವರ ಮೊಮ್ಮಗ ಹಾಗೂ ಆಮ್‌ ಆದ್ಮಿ ಪಕ್ಷ (ಆಪ್‌)ದ ಶಾಸಕ ಆದರ್ಶ ಶಾಸ್ತ್ರಿ ಅವರು ಶನಿವಾರ ಕಾಂಗ್ರೆಸ್‌ಗೆ ಸೇರ್ಪಡೆಯಾದರು.

20 ದಿನದಲ್ಲಿ 5000 ರ‍್ಯಾಲಿಗೆ ಬಿಜೆಪಿ ಮೆಗಾ ಪ್ಲಾನ್!

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ನೇತೃತ್ವದ ಆಪ್‌, ದ್ವಾರಕಾ ವಿಧಾನಸಭೆ ಕ್ಷೇತ್ರದಿಂದ ಟಿಕೆಟ್‌ ನಿರಾಕರಿಸಿದ ಹಿನ್ನೆಲೆಯಲ್ಲಿ ಆದರ್ಶ ಅವರು ಬೇಸರಗೊಂಡಿದ್ದರು. ಹೀಗಾಗಿ, ಕಾಂಗ್ರೆಸ್‌ ರಾಜ್ಯಾಧ್ಯಕ್ಷ ಸುಭಾಷ್‌ ಛೋಪ್ರಾ ಹಾಗೂ ಎಐಸಿಸಿ ಉಸ್ತುವಾರಿ ಪಿ.ಸಿ ಚಾಕೋ ಅವರ ನೇತೃತ್ವದಲ್ಲಿ ಆದರ್ಶ ಕಾಂಗ್ರೆಸ್‌ ಸೇರಿದ್ದಾರೆ.

ಫೆ.8ಕ್ಕೆ ನಿಗದಿಯಾಗಿರುವ ದಿಲ್ಲಿ ವಿಧಾನಸಭೆ ಚುನಾವಣೆಗೆ ದ್ವಾರಕಾ ಕ್ಷೇತ್ರದಿಂದಲೇ ಆದರ್ಶ ಕಾಂಗ್ರೆಸ್‌ನಿಂದ ಅಖಾಡಕ್ಕಿಳಿಯುವ ಸಾಧ್ಯತೆಯಿದೆ.

ಕೇಜ್ರಿವಾಲ್‌ ವಿರುದ್ಧ ಸ್ಪರ್ಧೆ ಇಲ್ಲ: ನಿರ್ಭಯಾ ತಾಯಿ

ಇನ್ನು ಇತ್ತ ಬಿಜೆಪಿಯು ದೆಹಲಿ ಚುನಾವಣೆಯಲ್ಲಿ ಕಣಕ್ಕಿಳಿಯಲಿರುವ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
ಸಿಎಂ ಕುರ್ಚಿಗೆ 500 ಕೋಟಿ, ಸ್ಫೋಟಕ ಹೇಳಿಕೆ ಬೆನ್ನಲ್ಲೇ ಸಿಧು ಪತ್ನಿ ಕಾಂಗ್ರೆಸ್‌ನಿಂದ ಅಮಾನತು