
ನವದೆಹಲಿ(ಫೆ.11): ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕ್ರಿಯೆ ಆರಂಭಗೊಂಡಿದ್ದು, ಮತದಾನ ಎಣಿಕೆ ಕಾರ್ಯ ಆರಂಭವಾಗಿದೆ.
ಈಗಾಗಲೇ ಆಡಳಿತಾರೂಢ ಆಪ್ 57 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಬಿಜೆಪಿ 13 ಹಾಗೂ ಕಾಂಗ್ರೆಸ್ ಶೂನ್ಯ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಇನ್ನು ಮತ ಎಣಿಕೆ ಕಾರ್ಯ ಆರಂಭಕ್ಕೂ ಮೊದಲು ಸಿಎಂ ಅರವಿಂದ್ ಕೇಜ್ರಿವಾಲ್ ಮನೆಗೆ ಪುಟ್ಟ ಮಕ್ಕಳ ಗುಂಪೊಂದು ಭೇಟಿ ನೀಡಿದ್ದು, ಪುಟ್ಟ ಕಂದನೋರ್ವ ಅರವಿಂದ್ ಕೇಜ್ರಿವಾಲ್ ವೇಷ ತೊಟ್ಟು ಗಮನ ಸೆಳೆದಿದ್ದಾನೆ.
ಬಿಜೆಪಿ 55 ಸೀಟು ಗೆದ್ರೆ ಅಚ್ಚರಿಪಡಬೇಡಿ: ಮನೋಜ್ ತಿವಾರಿ!
ಕೇಜ್ರಿವಾಲ್ ಮನೆಗೆ ಬಂದ ಮಕ್ಕಳಲ್ಲಿ ತಮ್ಮಂತೆ ವೇಷ ತೊಟ್ಟ ಮಗುವನ್ನು ಕಂಡು ಹರ್ಷಗೊಂಡ ಅರವಿಂದ್ ಕೇಜ್ರವಾಲ್, ಮಗುವನ್ನು ಎತ್ತಿ ಮುದ್ದಾಡಿದರು.
ವಿಧಾನಸಭೆ ಚುನಾವಣೆಯಲ್ಲಿ ಆಪ್ ಮುನ್ನಡೆ ಸಾಧಿಸುತ್ತಿರುವುದನ್ನು ಸಂಭ್ರಮಿಸಿದ ಈ ಮಕ್ಕಳು, ಅರವಿಂದ್ ಕೇಜ್ರಿವಾಲ್ ಅವರಿಗೆ ಧನ್ಯವಾದ ಹೇಳಿ ಮನೆಯತ್ತ ಹೆಜ್ಜೆ ಹಾಕಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ