ಪೌರತ್ವ ಕಾಯ್ದೆ ತಂದ ಬಿಜೆಪಿಗೆ ಬಿಗ್ ಶಾಕ್: 90 ನಾಯಕರ ರಾಜೀನಾಮೆ!

Published : Jan 24, 2020, 03:06 PM ISTUpdated : Jan 24, 2020, 06:03 PM IST
ಪೌರತ್ವ ಕಾಯ್ದೆ ತಂದ ಬಿಜೆಪಿಗೆ ಬಿಗ್ ಶಾಕ್: 90 ನಾಯಕರ ರಾಜೀನಾಮೆ!

ಸಾರಾಂಶ

ಬಿಜೆಪಿಗೆ ಗುಡ್‌ಬೈ ಎಂದ 90 ನಾಯಕರು| ಜೆ. ಪಿ ನಡ್ಡಾಗೆ ರಾಜೀನಾಮೆ ಸಲ್ಲಿಸುವುದಾಗಿ ಘೋಷಣೆ| ಪೌರತ್ವ ಕಾಯ್ದೆ ತಂದ ಬಿಜೆಪಿಗೆ ಸಂಕಷ್ಟ

ಇಂದೋರ್[ಜ.24]: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪೌರತ್ವ ಕಾಯ್ದೆಯನ್ನು ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯ ತೀವ್ರವಾಗಿ ವಿರೋಧಿಸುತ್ತಿದೆ. ಹೀಗಿರುವಾಗ ಬಿಜೆಪಿಯ ಅಲ್ಪಸಂಖ್ಯಾತ ಮೋರ್ಚಾದ ಕಾರ್ಯಕರ್ತರು ಈ ವಿಚಾರವಾಗಿ, ಪಕ್ಷವನ್ನು ಬೆಂಬಲಿಸಬೇಕೋ ಅಥವಾ ತಮ್ಮ ಸಮುದಾಯದ ಬೆಂಬಲಕ್ಕೆ ನಿಲ್ಲಬೇಕೋ ಎಂಬ ಗೊಂದಲ್ಲಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆಯೇ ಬಿಜೆಪಿಗೆ ಬಹುದೊಡ್ಡ ಆಘಾತವೊಂದು ಬಂದೆರಗಿದೆ.

ನಿರುದ್ಯೋಗಿಗಳ ಪರ ಕಾಂಗ್ರೆಸ್‌ ಮಿಸ್ಡ್‌ ಕಾಲ್‌ ಅಭಿಯಾನ!

ಹೌದು ಇಂದೋರ್ ನ ಬಿಜೆಪಿ ಮಂಡಲ್ ಹಾಗೂ ಮೋರ್ಚಾದ ವಿಭಿನ್ನ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸುಮಾರು 90 ಮುಸ್ಲಿಂ ಕಾರ್ಯಕರ್ತರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. 

ಸಿಎಎ ಮೂಲಕ ದೇಶವನ್ನು ಧಾರ್ಮಿಕವಾಗಿ ವಿಂಗಡಿಸುವ ಕೆಲಸ ನಡೆಯುತ್ತಿದೆ. ಇದು ಸಂವಿಧಾನದ ಮೂಲ ಆಶಯದ ವಿರುದ್ಧವಾಗಿದೆ. ಹೀಗಾಗಿ ತಾವು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾಗೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.

ಪ್ರಜಾಪ್ರಭುತ್ವ ಪಟ್ಟಿಯಲ್ಲಿ 10 ಸ್ಥಾನ ಕೆಳಗಿಳಿದ ಭಾರತ: ವರದಿ!

ಈ ಸಂಬಂಧ ಪ್ರತಿಕ್ರಿಯಿಸಿರುವ ಮುಸ್ಲಿಂ ಅಲ್ಪಸಂಖ್ಯಾತ ನಾಯಕ ರಾಜಿಕ್ ಫರ್ಶೀವಾಲಾ 'ಕೇಂದ್ರ ಸರ್ಕಾರ ಈ ಕಾನೂನು ಜಾರಿಗೊಳಿಸಿ ಅಸಂವಿಧಾನಿಕ ಹೆಜ್ಜೆ ಇರಿಸಿದೆ. ಹೀಗಾಗಿ ಎಲ್ಲಾ ಕಾರ್ಯಕರ್ತರು ರಾಷ್ಟ್ರೀಯ ಅಧ್ಯಕ್ಷರಿಗೆ ರಾಜೀನಾಮೆ ಸಲ್ಲಿಸುತ್ತಿದ್ದೇವೆ' ಎಂದಿದ್ದಾರೆ.

ಜನವರಿ 24ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಾರ್‌ನಲ್ಲಿ ಜೋಡಿ 'ಸರಸ' ಸೆರೆಹಿಡಿದ ಟೋಲ್‌ ಮ್ಯಾನೇಜರ್‌, ಸಿಸಿಟಿವಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್‌!
ವಿಶ್ವದ ಟಾಪ್ 10 ಬೊಟಾನಿಕಲ್ ಗಾರ್ಡನ್ ಲಿಸ್ಟ್‌ನಲ್ಲಿ ನಂ.1 ನಮ್ಮ ಲಾಲ್‌ಬಾಗ್