ರತ್ಲಾಂ: ಬಸ್ ನಿಲ್ದಾಣದ ಬಳಿ ನಿಂತಿರುವ ಜನರ ಮೇಲೆ ವೇಗವಾಗಿ ಬಂದ ಟ್ರಕ್ ಹಾಯ್ದು 6 ಜನರು ಮೃತಪಟ್ಟ ಭೀಕರ ಘಟನೆ ಭಾನುವಾರ ಮಧ್ಯಪ್ರದೇಶದ ರತ್ಲಾಂ ಜಿಲ್ಲೆಯಲ್ಲಿ ನಡೆದಿದೆ. ಈ ದುರ್ಘಟನೆಯಲ್ಲಿ ಸುಮಾರು 10 ಜನರಿಗೆ ಗಂಭೀರ ಗಾಯಗಳಾಗಿವೆ. ಇಲ್ಲಿನ ಸಾತ್ರುಂಡಾ ಗ್ರಾಮದಲ್ಲಿ ರತ್ಲಾಮ್-ಲೆಬಾಡ್ ರಸ್ತೆಯ ಮೇಲೆ ಈ ಅಪಘಾತ ನಡೆದಿದ್ದು, ವೇಗವಾಗಿ ಬಂದ ಟ್ರಕ್ 20ಕ್ಕೂ ಹೆಚ್ಚು ಜನರಿಗೆ ಡಿಕ್ಕಿ ಹೊಡೆದಿದೆ. ಈ ಪೈಕಿ 6 ಮಂದಿ ಮೃತಪಟ್ಟರೆ, 8 ಜನರ ಸ್ಥಿತಿ ಗಂಭೀರವಾಗಿದೆ. ಟ್ರಕ್ ಡ್ರೈವರ್ ಸ್ಥಳದಿಂದ ಪರಾರಿಯಾಗಿದ್ದಾನೆ ಆದರೆ ಟ್ರಕ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಈ ಟ್ರಕ್ ರತ್ಲಮ್ನಿಂದ ಬಡ್ನಾವರ್ಗೆ ತೆರಳುತ್ತಿತ್ತು. ಟ್ರಕ್ನ ಟೈರ್ ಬಸ್ಟ್ ಆಗಿ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಮೃತರು ಹಾಗೂ ಗಾಯಾಳುಗಳು ಬಸ್ ನಿಲ್ದಾಣದಲ್ಲಿ ಬಸ್ಗಾಗಿ ಕಾಯುತ್ತಿದ್ದಾಗ ಈ ಅವಘಡ ಸಂಭವಿಸಿದೆ.
Viral Video: ಪೊಲೀಸರು ಎಸೆದ ತರಕಾರಿ ಎತ್ತಿಕೊಳ್ಳಲು ಹೋಗಿ ರೈಲು ಅಪಘಾತದಲ್ಲಿ 2 ಕಾಲು ಕಳೆದುಕೊಂಡ ವ್ಯಾಪಾರಿ..!
ಉಡುಪಿ: ಅಪಘಾತದಲ್ಲಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ರೂ ಸಹಾಯಕ್ಕೆ ಬಾರದ ಜನ..!
ದಾವಣಗೆರೆ: ಕಾರು, ಮಿನಿ ಬಸ್, ಟಾಟಾ ಏಸ್ ಮಧ್ಯೆ ಸರಣಿ ಅಪಘಾತ, ಓರ್ವ ವ್ಯಕ್ತಿ ಸಾವು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ