ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!

ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!

Published : May 22, 2026, 12:48 PM IST

ತಮಿಳುನಾಡು ಮುಖ್ಯಮಂತ್ರಿ ದಳಪತಿ ವಿಜಯ್, ಎಲ್‌ಟಿಟಿಇ ಮುಖ್ಯಸ್ಥ ಪ್ರಭಾಕರನ್‌ನನ್ನು 'ತಾಯಿ ಹೃದಯ'ಕ್ಕೆ ಹೋಲಿಸಿ ವಿವಾದ ಸೃಷ್ಟಿಸಿದ್ದಾರೆ. ಅವರ  ರಾಜಕೀಯ ನಡೆ, ರಾಜೀವ್ ಗಾಂಧಿ ಹತ್ಯೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿದೆ.

ಬೆಂಗಳೂರು (ಮೇ.22): ತಮಿಳುನಾಡು ಮುಖ್ಯಮಂತ್ರಿ, ದಳಪತಿ ಜೋಸೆಫ್ ವಿಜಯ್ ಕೈಗೊಂಡಿರುವ ರಾಜಕೀಯ ನಡೆ ದ್ರಾವಿಡ ನೆಲದಲ್ಲಿ ಭಾರಿ ಸಂಚಲನ ಮೂಡಿಸಿದೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಗೆ ಕಾರಣವಾದ ಎಲ್‌ಟಿಟಿಇ (LTTE) ಸಂಘಟನೆಯ ಮುಖ್ಯಸ್ಥ ವೇಲುಪಿಳ್ಳೈ ಪ್ರಭಾಕರನ್‌ನನ್ನು ಸ್ಮರಿಸಿರುವ ವಿಜಯ್, ಆತನನ್ನು 'ತಾಯಿ ಹೃದಯಕ್ಕೆ' ಹೋಲಿಸಿದ್ದಾರೆ.

ಮುಲ್ಲಿವೈಕಲ್ ಹತ್ಯಾಕಾಂಡದ ಇತಿಹಾಸ ಕೆದಕಿ ವಿವಾದ ಮೈಮೇಲೆ ಎಳೆದುಕೊಂಡಿರುವ ಅವರು, 2008ರ ಶ್ರೀಲಂಕಾ ಯುದ್ಧದ ಸಮಯದಲ್ಲೇ ತಮಿಳರ ಬೆಂಬಲಕ್ಕೆ ಉಪವಾಸ ಕೂತು 'ನಾವು ಹುಲಿ ಮರಿಗಳು' ಎಂದು ಅಬ್ಬರಿಸಿದ್ದನ್ನು ನೆನಪಿಸಿದ್ದಾರೆ.

ತಮಿಳುನಾಡು ಸರ್ಕಾರದ ನೂತನ ಸಚಿವರ ಖಾತೆ ಹಂಚಿಕೆ ಮಾಡಿದ ಸಿಎಂ ವಿಜಯ್‌, ಬಲಿಷ್ಠ ಖಾತೆ ತನ್ನಲ್ಲೇ ಇರಿಸಿಕೊಂಡ ದಳಪತಿ!

'ದ್ರಾವಿಡ ಸಿದ್ಧಾಂತ ಮತ್ತು ತಮಿಳು ರಾಷ್ಟ್ರೀಯತೆ'ಯ ಈ ವಿಭಿನ್ನ ಕಾಕ್‌ಟೇಲ್ ದಾಳ ಉರುಳಿಸಿರುವ ವಿಜಯ್ ನಡೆ, ತಮಿಳುನಾಡು ಸರ್ಕಾರದಲ್ಲಿ ಪಾಲುದಾರನಾಗಿರುವ ಕಾಂಗ್ರೆಸ್ ಪಕ್ಷವನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿದೆ. ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್‌ಗೆ ಇದನ್ನು ವಿರೋಧಿಸಲೂ ಆಗದೆ, ಸಹಿಸಲೂ ಆಗದೆ ಅಡಗತ್ತರಿಯಲ್ಲಿ ಸಿಲುಕುವಂತಾಗಿದ್ದು, ವಿರೋಧ ಪಕ್ಷಗಳಿಗೆ ದೊಡ್ಡ ರಾಜಕೀಯ ಅಸ್ತ್ರ ಸಿಕ್ಕಂತಾಗಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more