ರೈಲಲ್ಲಿ ಜೈ ಶ್ರೀರಾಮ್‌ ಘೋಷಣೆ ಪ್ರಶ್ನಿಸಿದ ನಟಿ ಪೂಜಾ ಭಟ್‌ಗೆ ನೆಟ್ಟಿಗರ ಕ್ಲಾಸ್

Published : Oct 15, 2024, 01:11 PM ISTUpdated : Oct 15, 2024, 01:18 PM IST
ರೈಲಲ್ಲಿ ಜೈ ಶ್ರೀರಾಮ್‌ ಘೋಷಣೆ ಪ್ರಶ್ನಿಸಿದ ನಟಿ ಪೂಜಾ ಭಟ್‌ಗೆ  ನೆಟ್ಟಿಗರ ಕ್ಲಾಸ್

ಸಾರಾಂಶ

ನವರಾತ್ರಿಯ ಆಚರಣೆಯ ಭಾಗವಾಗಿ ಮುಂಬೈನ ಮೆಟ್ರೋದಲ್ಲಿ ಜೈಶ್ರೀರಾಮ್ ಘೋಷಣೆ ಮತ್ತು ಗರ್ಬಾ ಹಾಡುಗಳನ್ನು ಹಾಡಿದವರ ವಿರುದ್ಧ ನಟಿ ಪೂಜಾ ಭಟ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮುಂಬೈ: ನವರಾತ್ರಿಯ ಆಚರಣೆಯ ಭಾಗವಾಗಿ ಮುಂಬೈನ ಮೆಟ್ರೋದಲ್ಲಿ ಜೈಶ್ರೀರಾಮ್ ಘೋಷಣೆ ಮತ್ತು ಗರ್ಬಾ ಹಾಡುಗಳನ್ನು ಹಾಡಿದವರ ವಿರುದ್ಧ ನಟಿ ಪೂಜಾ ಭಟ್ ಆಕ್ಷೇಪ ವ್ಯಕ್ತಪಡಿಸಿದ್ದು, ಸಾರ್ವಜನಿಕ ಸ್ಥಳದಲ್ಲಿ ಇದನ್ನು ಹೇಗೆ ಅನುಮತಿಸಲಾಗಿದೆ ಎಂದು ಪ್ರಶ್ನಿಸಿದ್ದಾರೆ. ಮೆಟ್ರೋ ನಿಲ್ದಾಣದಲ್ಲಿ ಗುಂಪೊಂದು ಜೈಶ್ರೀರಾಮ್‌ ಪಠಿಸುತ್ತಾ, ಗರ್ಬಾ ಹಾಡುಗಳನ್ನು ಹಾಡುತ್ತಿರುವ ದೃಶ್ಯವನ್ನು ನಟಿ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು. ‘ಸಾರ್ವಜನಿಕ ಸ್ಥಳದಲ್ಲಿ ಇದನ್ನು ಹೇಗೆ ಅನುಮತಿಸಲಾಗಿದೆ. ಇದು ಸಾರ್ವಜನಿಕ ಸ್ಥಳದ ದುರುಪಯೋಗ’ ಎಂದು ಬರೆದಿದ್ದಾರೆ. ಇದಕ್ಕೆ ನೆಟ್ಟಿಗರು ಮುಸ್ಲಿಮರು ರಸ್ತೆಯಲ್ಲಿ ನಮಾಜ್ ಮಾಡುವಾಗ ಎಲ್ಲಿ ಹೋಗಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

ಮಹಾ ಎಲೆಕ್ಷನ್‌ಗೂ ಮುನ್ನ ಶಿಂಧೆ ಗಿಫ್ಟ್‌: ಲಘು ವಾಹನಕ್ಕೆ ಮುಂಬೈ ಪ್ರವೇಶಕ್ಕಿಲ್ಲ ಟೋಲ್‌

ಮುಂಬೈ: ಮುಂಬೈಗೆ ಪ್ರವೇಶಿಸುವ 5 ಟೋಲ್‌ಗಳಲ್ಲಿ ಲಘುವಾಹನಗಳಿಗೆ ಟೋಲ್ ಪಾವತಿ ಮನ್ನಾ ಮಾಡಿ ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿದೆ, ಚುನಾವಣೆಗೂ ಮುನ್ನ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ರಾಜ್ಯದ ಜನತೆಗೆ ಈ ಬಂಪರ್‌ ಗಿಫ್ಟ್‌ ನೀಡಿದ್ದಾರೆ. ಹೊರ ರಾಜ್ಯಗಳಿಂದ ಮುಂಬೈ ಪ್ರವೇಶಿಸುವ 5 ಟೋಲ್‌ಗಳಲ್ಲಿ ವಿನಾಯಿತಿ ನೀಡಲಾಗಿದೆ. ಈ ಕುರಿತು ಶಿಂಧೆ ಪ್ರತಿಕ್ರಿಯಿಸಿದ್ದು, ಟೋಲ್‌ಗಳಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗುವ ಕಾರಣಕ್ಕೆ ವಾಹನ ಸವಾರರು ಈ ರೀತಿ ಬೇಡಿಕೆಯನ್ನಿಟ್ಟಿದ್ದರು. ಅದರಂತೆ ಟೋಲ್ ಶುಲ್ಕ ಮನ್ನಾ ಮಾಡಲಾಗಿದೆ’ ಎಂದರು. ಇದರಿಂದ ನಿತ್ಯ ಮುಂಬೈ ಪ್ರವೇಶಿಸುವ 2.8 ಲಕ್ಷ ವಾಹನ ಸವಾರರಿಗೆ ಲಾಭವಾಗಲಿದೆ. ಮಹಾರಾಷ್ಟ್ರದಲ್ಲಿ ಇದೇ ವರ್ಷ ಚುನಾವಣೆ ನಡೆಯಲಿದ್ದು, ದಿನಾಂಕ ಘೋಷಣೆಗೆ ದಿನ ಬಾಕಿಯಿರುವಾಗ ಶಿಂಧೆ ಸರ್ಕಾರ ಈ ಆದೇಶ ಹೊರಡಿಸಿದೆ.

ಆತ್ಮತೃಪ್ತಿಗಾಗಿ ಪುತ್ರಿ ಪೂಜಾ ದೇಹವನ್ನೇ ಬಳಸಿಕೊಂಡ್ರಾ ಮಹೇಶ್​ ಭಟ್​? ನಟಿ ಹೇಳಿದ್ದೇನು?

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮುಸ್ಲಿಂ ಲೀಗ್‌, ಜಿನ್ನಾಗೆ ಮಣಿದ ನೆಹರು, ವಂದೇ ಮಾತರಂ ಅನ್ನು ಹರಿದು ಹಾಕಿದ್ದು ಕಾಂಗ್ರೆಸ್‌: ಮೋದಿ ವಾಗ್ದಾಳಿ
ಮದುವೆಯಾದ್ರೆ ಸಿಗುತ್ತೆ 2.5 ಲಕ್ಷ ರೂಪಾಯಿ; ಶೇ.99 ಜನರಿಗೆ ಈ ವಿಷಯವೇ ಗೊತ್ತಿಲ್ಲ