
ನವದೆಹಲಿ (ಅ.23): ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ವಹಣೆ ಈ ತಿಂಗಳಾಂತ್ಯದೊಳಗೆ ಪ್ರಸಿದ್ಧ ಉದ್ಯಮ ಸಮೂಹವಾಗಿರುವ ಅದಾನಿ ಗ್ರೂಪ್ಗೆ ವರ್ಗಾವಣೆಯಾಗಲಿದೆ. ಅಕ್ಟೋಬರ್ 31ರೊಳಗೆ ಮಂಗಳೂರು ವಿಮಾನ ನಿಲ್ದಾಣವನ್ನು ಅದಾನಿ ಸಮೂಹಕ್ಕೆ ಹಸ್ತಾಂತರಿಸುವ ಒಪ್ಪಂದಕ್ಕೆ ವಿಮಾನಯಾನ ಸಚಿವಾಲಯ ಹಾಗೂ ಅದಾನಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ ಕಂಪನಿಗಳು ಬುಧವಾರ ಸಹಿ ಹಾಕಿವೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್, ವಲಸೆ ಹಾಗೂ ಭದ್ರತಾ ವ್ಯವಸ್ಥೆಗೆ ಸಂಬಂಧಿಸಿದ ವ್ಯವಹಾರಗಳನ್ನು ಅದಾನಿ ಸಮೂಹಕ್ಕೆ ಹಸ್ತಾಂತರಿಸುವ ಒಪ್ಪಂದಕ್ಕೆ ಈಗ ಸಹಿ ಹಾಕಿದ್ದು, ಇದರ ಜೊತೆಗೇ ಸಿಎನ್ಎಸ್-ಎಟಿಎಂ, ಅಂದರೆ ಸಂಪರ್ಕ ಮತ್ತು ವಿಚಕ್ಷಣ ವ್ಯವಸ್ಥೆ ಹಾಗೂ ಏರ್ ಟ್ರಾಫಿಕ್ ಮ್ಯಾನೇಜ್ಮೆಂಟ್ಗೆ ಸಂಬಂಧಿಸಿದ ಸೇವೆಗಳನ್ನೂ ಹಸ್ತಾಂತರಿಸುವುದಕ್ಕೆ ಸಹಿ ಹಾಕಲಾಗಿದೆ.
ಕೊರೋನೊತ್ತರ ಭಾರತದಲ್ಲಿ ಅಂಬಾನಿ-ಅದಾನಿ ಏಕಸ್ವಾಮ್ಯ? ..
ಮಂಗಳೂರು ವಿಮಾನ ನಿಲ್ದಾಣದ ನಂತರ ನವೆಂಬರ್ 2ಕ್ಕೆ ಲಖನೌ ಅಂತಾರಾಷ್ಟ್ರೀಯ ವಿಮಾನನಿಲ್ದಾಣ ಹಾಗೂ ನ.11ಕ್ಕೆ ಅಹಮದಾಬಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕೂಡ ಅದಾನಿ ಸಮೂಹದ ತೆಕ್ಕೆಗೆ ಹೋಗಲಿದೆ. ಕಳೆದ ವರ್ಷದ ಫೆಬ್ರವರಿಯಲ್ಲೇ ಲಖನೌ, ಅಹಮದಾಬಾದ್, ಜೈಪುರ, ಮಂಗಳೂರು, ತಿರುವನಂತಪುರಂ ಹಾಗೂ ಗುವಾಹಟಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಖಾಸಗೀಕರಣಗೊಳಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಂಡಿತ್ತು. ನಂತರ ಬಿಡ್ನಲ್ಲಿ ಭಾಗವಹಿಸಿದ್ದ ಅದಾನಿ ಸಮೂಹ ಎಲ್ಲಾ ವಿಮಾನ ನಿಲ್ದಾಣಗಳ ನಿರ್ವಹಣೆಯನ್ನೂ ಗೆದ್ದುಕೊಂಡಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ