ಘೋಷಣೆ ಮಾತ್ರವೇ ಮೀಸಲಲ್ಲ: ರಾಜ್ಯಗಳಿಗೆ ಸುಪ್ರೀಂ ಕಿವಿಮಾತು

Published : Mar 23, 2021, 02:55 PM IST
ಘೋಷಣೆ ಮಾತ್ರವೇ ಮೀಸಲಲ್ಲ: ರಾಜ್ಯಗಳಿಗೆ ಸುಪ್ರೀಂ ಕಿವಿಮಾತು

ಸಾರಾಂಶ

 ಕೇವಲ ಮೀಸಲು ಘೋಷಣೆ ಮಾಡುವುದರಿಂದ ಅದರ ಲಾಭ ಹಿಂದುಳಿದ ವರ್ಗಗಳಿಗೆ ಸಿಗುವುದಿಲ್ಲ| ಘೋಷಣೆ ಮಾತ್ರವೇ ಮೀಸಲಲ್ಲ: ರಾಜ್ಯಗಳಿಗೆ ಸುಪ್ರೀಂ ಕಿವಿಮಾತು

ನವದೆಹಲಿ(ಮಾ.23): ಕೇವಲ ಮೀಸಲು ಘೋಷಣೆ ಮಾಡುವುದರಿಂದ ಅದರ ಲಾಭ ಹಿಂದುಳಿದ ವರ್ಗಗಳಿಗೆ ಸಿಗುವುದಿಲ್ಲ. ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳನ್ನು ಅಭಿವೃದ್ಧಿ ಮಾಡಬೇಕಾದಲ್ಲಿ ರಾಜ್ಯ ಸರ್ಕಾರಗಳು ಘೋಷಣೆ ಮಾಡುವುದಕ್ಕೆ ಸೀಮಿತವಾಗದೆ ಇನ್ನಷ್ಟುಕ್ರಮಗಳನ್ನು ಕೈಗೊಳ್ಳಬೇಕು ಎಂದು ಕಿವಿಮಾತು ಹೇಳಿದೆ.

ಮರಾಠ ಮೀಸಲು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ವೇಳೆ ಸೋಮವಾರ ಮಧ್ಯಪ್ರವೇಶ ಮಾಡಿದ ನ್ಯಾ. ಅಶೋಕ್‌ ಭೂಷಣ್‌ ನೇತೃತ್ವದ ಪೀಠ, ‘ಸರ್ಕಾರಗಳೇಕೆ ಶಿಕ್ಷಣವನ್ನು ಪ್ರೋತ್ಸಾಹಿಸಬಾರದು? ಮತ್ತಷ್ಟುಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಬಾರದು? ಈ ಲೆಕ್ಕಾಚಾರವು ಮೀಸಲು ಹೊರತಾಗಿ ಮತ್ತಿನಿನ್ನೇದರೂ ಬದಲಾವಣೆಯಾಗಲೇಬೇಕು. ಕೇವಲ ಘೋಷಣೆ ಮಾಡುವುದಷ್ಟೇ ಮೀಸಲು ಅಲ್ಲ’ ಎಂದು ಕಿವಿ ಮಾತು ಹೇಳಿತು.

ಈ ವೇಳೆ ಜಾರ್ಖಂಡ್‌ ಸರ್ಕಾರದ ಪರವಾಗಿ ವಾದ ಮಂಡಿಸಿದ ಕಪಿಲ್‌ ಸಿಬಲ್‌, ‘ಕೋರ್ಟ್‌ ಪ್ರಸ್ತಾಪಿಸಿರುವ ವಿಷಯ ರಾಜ್ಯಗಳ ಆರ್ಥಿಕ ಸಂಪನ್ಮೂಲ, ಶಾಲೆಗಳು ಮತ್ತು ಶಿಕ್ಷಕರ ಸಂಖ್ಯೆಯನ್ನು ಅವಲಂಬಿಸಿದೆ. ಮೀಸಲು ಪ್ರಮಾಣ ಕೂಡಾ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ವಿಭಿನ್ನವಾಗಿದೆ. ಹೀಗಾಗಿ ಎಲ್ಲಾ ರಾಜ್ಯಗಳಿಗೂ ಏಕರೂಪ ಕಾನೂನು ಮಾಡಲಾಗದು ಎನ್ನುವ ಮೂಲಕ, ಮೀಸಲು ನಿಗದಿ ಮಿತಿಯನ್ನು ರಾಜ್ಯಗಳಿಗೆ ಬಿಡಬೇಕು ಎಂದು ಪರೋಕ್ಷವಾಗಿ ಹೇಳಿದರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Keralam Election Results: ಯಾರ ಪಾಲಿಗೆ ಕೇರಳಂ? ಎಡಕ್ಕೋ? ಬಲಕ್ಕೋ? ಅಥವಾ ಅತಂತ್ರವೋ?
5 State Assembly Election results 2026 Live: Keralam Election Results - ಯಾರ ಪಾಲಿಗೆ ಕೇರಳಂ? ಎಡಕ್ಕೋ? ಬಲಕ್ಕೋ? ಅಥವಾ ಅತಂತ್ರವೋ?