
ನವದೆಹಲಿ: ‘160ಕ್ಕೂ ಹೆಚ್ಚು ಜನರನ್ನು ಬಲಿಪಡೆದ 2008ರ ಮುಂಬೈ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲೇಬೇಕು ಎಂದು ನನಗೆ ಬಲವಾಗಿ ಅನ್ನಿಸಿತ್ತು. ಈ ಬಗ್ಗೆ ಪ್ರಧಾನಿ ಹಾಗೂ ಸಂಬಂಧಿಸಿದವರ ಬಳಿ ಚರ್ಚಿಸಿದ್ದೆ. ಆದರೆ ಸರ್ಕಾರದ ಹಿರಿಯರು ಆ ಪ್ರಸ್ತಾಪಪ ಒಪ್ಪಿರಲಿಲ್ಲ’ ಎಂದು ದಾಳಿ ನಡೆದ 3 ದಿನಗಳ ಬಳಿಕ ಗೃಹ ಸಚಿವರಾಗಿದ್ದ ಪಿ.ಚಿದಂಬರಂ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಸಂದರ್ಶನವೊಂದರಲ್ಲಿ ಈ ಬಗ್ಗೆ ಮಾತನಾಡಿದ ಅವರು, ‘ಹಣಕಾಸು ಸಚಿವನಾಗಿದ್ದ ನನ್ನನ್ನು ಗೃಹ ಸಚಿವನನ್ನಾಗಿ ಮಾಡಲಾಯಿತು. ಆ ವೇಳೆ, ಪಾಕಿಸ್ತಾನದ ಮೇಲೆ ಪ್ರತೀಕಾರ ತೀರಿಸಿಕೊಳ್ಳಬೇಕು ಎಂದು ನನಗೆ ವೈಯಕ್ತಿಕವಾಗಿ ಅನ್ನಿಸಿತ್ತು. ಹಾಗೆಂದು ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ವಿದೇಶಾಂಗ ಸಚಿವರಾಗಿದ್ದ ಪ್ರಣವ್ ಮುಖರ್ಜಿಯವರಲ್ಲೂ ಹೇಳಿದ್ದೆ. ಆದರೆ ಅವರು ರಾಜತಾಂತ್ರಿಕ ಮಾರ್ಗದಲ್ಲಿ ವ್ಯವಹರಿಸಲು ನಿರ್ಧರಿಸಿದರು.’ ಎಂದರು.
ಅಂತೆಯೇ, ‘ಆ ಉಗ್ರದಾಳಿಗೆ ಪ್ರತಿಯಾಗಿ ಯುದ್ಧ ಶುರು ಮಾಡಬೇಡಿ ಎಂದು ವಿಶ್ವವೇ ನಮಗೆ ಹೇಳುತ್ತಿತ್ತು. ಅಮೆರಿಕದ ವಿದೇಶಾಂಗ ಸಚಿವೆಯಾಗಿದ್ದ ಕಾಂಡೋಲೀಜಾ ರೈಸ್ ನನ್ನನ್ನು ಭೇಟಿಯಾಗಿ, ದಯವಿಟ್ಟು ಸಮರ ಸಾರುವ ಮೂಲಕ ಪ್ರತಿಕ್ರಿಯಿಸಬೇಡಿ ಎಂದು ಕೇಳಿಕೊಂಡಿದ್ದರು. ಕೊನೆಗೆ ನಾನು ನಿರ್ಧಾರವನ್ನು ಸರ್ಕಾರಕ್ಕೆ ಬಿಟ್ಟೆ’ ಎಂದರು. ಜತೆಗೆ, ‘ಹಾಗೆಂದಮಾತ್ರಕ್ಕೆ ಅಂದಿನ ಸರ್ಕಾರ ಉಗ್ರರ ಪ್ರತಿ ಮೃದು ಧೋರಣೆ ತೋರಿಸಿತು ಎಂದಲ್ಲ. 2025ರ ಆಪರೇಷನ್ ಸಿಂದೂರದ ಮೂಲಕ ಪ್ರತೀಕಾರ ಮತ್ತು 2008ಅನ್ನು ಹೋಲಿಸಿ ನೋಡಲಾಗದು. ಕಾರಣ, ಅಂದು ನಮ್ಮ ಸೇನೆಯ ಯುದ್ಧಸನ್ನದ್ಧತೆ, ಗುಪ್ತಚರ ಸೇವೆ ಭಿನ್ನವಾಗಿತ್ತು.’ ಎಂಬುದನ್ನೂ ಅವರು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ