
ಲಕ್ನೋ(ಜ.28): ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ನಾಯಕ ಅಮಿತ್ ಶಾ ಅವರ ಆಹ್ವಾನವನ್ನು ರಾಷ್ಟ್ರೀಯ ಲೋಕದಳ (ಆರ್ಎಲ್ಡಿ) ಮುಖ್ಯಸ್ಥ ಜಯಂತ್ ಚೌಧರಿ ತಿರಸ್ಕರಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ನಂತರ ಭಾರತೀಯ ಜನತಾ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯನ್ನು ಅವರು ತಳ್ಳಿಹಾಕಿದ್ದಾರೆ. ವಾಸ್ತವವಾಗಿ, ನವದೆಹಲಿಯಲ್ಲಿ ಜಾಟ್ ನಾಯಕರೊಂದಿಗಿನ ಸಭೆಯ ಸಂದರ್ಭದಲ್ಲಿ ಅಮಿತ್ ಶಾ ಅವರು ಆರ್ಎಲ್ಡಿಗೆ ಬಿಜೆಪಿಯ ಬಾಗಿಲು ಯಾವಾಗಲೂ ತೆರೆದಿರುತ್ತದೆ ಎಂದು ಹೇಳಿದ್ದರು.
ಮಾಧ್ಯಮದವರೊಂದಿಗೆ ಮಾತನಾಡಿದ ಜಯಂತ್ ಚೌಧರಿ, ''ರೈತರಿಗೆ ಬಿಜೆಪಿ ಏನೂ ಮಾಡಿಲ್ಲ, ಎರಡು ದಿನಗಳ ಹಿಂದೆ ಬಿಹಾರ ಮತ್ತು ಉತ್ತರ ಪ್ರದೇಶದಲ್ಲಿ ವಿದ್ಯಾರ್ಥಿಗಳ ಮೇಲೆ ಪೊಲೀಸ್ ಬಲ ಪ್ರಯೋಗಿಸಲಾಗಿತ್ತು, ಇಂತಹ ವಾತಾವರಣದಲ್ಲಿ ಬಿಜೆಪಿಯವರು ಹೇಗೆ ಯೋಚಿಸುತ್ತಾರೆ? ಯಾರಾದರೂ ಕೈ ಕುಲುಕುತ್ತಾರೆಯೇ ಅವರು?" ಜಯಂತ್ ತಪ್ಪು ಮನೆಗೆ (ಘಟಬಂಧನ್) ಹೋಗಿದ್ದಾರೆ ಎಂಬ ಅಮಿತ್ ಶಾ ಹೇಳಿಕೆಗೆ, ನಾವು ನಮ್ಮ ಮನೆಯಲ್ಲಿಯೇ ಕುಳಿತಿದ್ದೇವೆ ಎಂದು ಹೇಳಿದರು. ನೀವು ಮೋಸ ಮಾಡಿದ್ದೀರಿ ದೇಶದ ಜನತೆಯ ಜೊತೆಗೆ ಉತ್ತರ ಪ್ರದೇಶದ ಜನತೆ ಭಾರತೀಯ ಜನತಾ ಪಕ್ಷಕ್ಕೆ ಮತ ಹಾಕಿ ಗೆಲ್ಲಿಸಿದ್ದರು ಅವರಿಗೂ ನ್ಯಾಯ ಕೊಡಿಸಲಿಲ್ಲ ಎಂದು ಕಿಡಿ ಕಾರಿದ್ದಾರೆ.
ಆಮಂತ್ರಣ ನನಗಲ್ಲ, ರೈತ ಕುಟುಂಬಗಳಿಗೆ ಕೊಡಿ
ಇದಕ್ಕೂ ಮುನ್ನ ಆರ್ಎಲ್ಡಿ ಮುಖ್ಯಸ್ಥ ಜಯಂತ್ ಚೌಧರಿ ಅವರು ಈ ಕುರಿತು ಟ್ವೀಟ್ ಮಾಡಿ ನನಗಲ್ಲ, ನೀವು ಮನೆಗಳನ್ನು ನಾಶಪಡಿಸಿದ 700 ಕ್ಕೂ ಹೆಚ್ಚು ರೈತ ಕುಟುಂಬಗಳಿಗೆ ಆಹ್ವಾನ ನೀಡಿ ಎಂದು ಹೇಳಿದ್ದರು! ಉತ್ತರ ಪ್ರದೇಶ ಚುನಾವಣೆಗೆ ಆರ್ಎಲ್ಡಿ-ಎಸ್ಪಿ ಮೈತ್ರಿಯನ್ನು ಉಲ್ಲೇಖಿಸಿದ ಬಿಜೆಪಿ ಸಂಸದ ಪರ್ವೇಶ್ ವರ್ಮಾ, ಜಯಂತ್ ಚೌಧರಿಗೆ ಅವರು (ಅಮಿತ್ ಶಾ) ಚುನಾವಣೆಯ ನಂತರ ಹಲವು ಸಾಧ್ಯತೆಗಳಿವೆ ಎಂದು ಹೇಳಿರುವುದಾಗಿ ತಿಳಿಸಿದ್ದಾರೆ. ಸದ್ಯಕ್ಕೆ ಅವರು ಒಂದು ಪಕ್ಷವನ್ನು ಆಯ್ಕೆ ಮಾಡಿದ್ದಾರೆ. ಜಾಟ್ ಸಮುದಾಯದ ಜನರು ಜಯಂತ್ ಅವರೊಂದಿಗೆ ಮಾತನಾಡಲಿದ್ದಾರೆ. ಅವರಿಗಾಗಿ ಬಿಜೆಪಿಯ ಬಾಗಿಲು ಸದಾ ತೆರೆದಿರುತ್ತದೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ