
ನವದೆಹಲಿ (ಮಾ.29): ತೆರಿಗೆ ಮರುಮೌಲ್ಯಮಾಪನ ಪ್ರಕ್ರಿಯೆಗಳ ವಿರುದ್ಧ ಪಕ್ಷದ ಮನವಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದ ಕೆಲವೇ ಗಂಟೆಗಳಲ್ಲಿ ಆದಾಯ ತೆರಿಗೆ ಇಲಾಖೆಯು ಕಾಂಗ್ರೆಸ್ಗೆ 1,700 ಕೋಟಿ ರೂಪಾಯಿಗಳ ನೋಟೀಸ್ ಅನ್ನು ಜಾರಿ ಮಾಡಿದೆ. ಈ ಬೆಳವಣಿಗೆಯನ್ನು ಕಾಂಗ್ರೆಸ್ ನಾಯಕ ವಿವೇಕ್ ತಂಖಾ ಖಚಿತಪಡಿಸಿದ್ದಾರೆ. 2017-18 ಮತ್ತು 2020-21 ರ ಮೌಲ್ಯಮಾಪನ ವರ್ಷಗಳಿಗೆ ನೋಟಿಸ್ ನೀಡಲಾಗಿದೆ ಮತ್ತು ದಂಡ ಮತ್ತು ಬಡ್ಡಿಯನ್ನು ಕೂಡ ಇದು ಒಳಗೊಂಡಿದೆ. ಗುರುವಾರ, ತೆರಿಗೆ ಅಧಿಕಾರಿಗಳು ನಾಲ್ಕು ವರ್ಷಗಳ ಅವಧಿಗೆ ತೆರಿಗೆ ಮರುಮೌಲ್ಯಮಾಪನ ಪ್ರಕ್ರಿಯೆಗಳನ್ನು ಪ್ರಾರಂಭಿಸುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಸಲ್ಲಿಸಿದ ಅರ್ಜಿಗಳನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿತ್ತು.
ಕಾಂಗ್ರೆಸ್ ಪಕ್ಷ 100 ಕೋಟಿ ತೆರಿಗೆ ಬಾಕಿ ಕಟ್ಟಬೇಕು: ಐಟಿಎಟಿ ಆದೇಶ ಎತ್ತಿ ಹಿಡಿದ ದೆಹಲಿ ಹೈಕೋರ್ಟ್
ನ್ಯಾಯಮೂರ್ತಿಗಳಾದ ಯಶವಂತ್ ವರ್ಮಾ ಮತ್ತು ಪುರುಷೇಂದ್ರ ಕುಮಾರ್ ಕೌರವ್ ಅವರ ಪೀಠವು, ಮರುಮೌಲ್ಯಮಾಪನವನ್ನು ಇನ್ನೊಂದು ವರ್ಷದವರೆಗೆ ತೆರೆಯುವ ವಿಚಾರದಲ್ಲಿ ಮಧ್ಯಪ್ರವೇಶಿಸಲು ನಿರಾಕರಿತ್ತು. ಇದೇ ಆದೇಶದ ಆಧಾರದ ಮೇಲೆ ಅರ್ಜಿಗಳನ್ನು ವಜಾಗೊಳಿಸಲಾಗಿದೆ ಎಂದು ಹೇಳಿದೆ. ಪ್ರಸ್ತುತ ವಿಷಯವು 2017 ರಿಂದ 2021 ರ ಮೌಲ್ಯಮಾಪನ ವರ್ಷಗಳಿಗೆ ಸಂಬಂಧಿಸಿದೆ. ಕಳೆದ ವಾರ ವಜಾಗೊಂಡ ಹಿಂದಿನ ಅರ್ಜಿಯಲ್ಲಿ, ಕಾಂಗ್ರೆಸ್ ಪಕ್ಷವು 2014-15 ರಿಂದ 2016-17 ರ ಮೌಲ್ಯಮಾಪನ ವರ್ಷಗಳ ಮರು ಮೌಲ್ಯಮಾಪನ ಪ್ರಕ್ರಿಯೆಗಳನ್ನು ಪ್ರಾರಂಭಿಸುವುದನ್ನು ಪ್ರಶ್ನೆ ಮಾಡಿತ್ತು.
ತೆರಿಗೆ ಕೇಸ್ನಲ್ಲಿ ಕಾಂಗ್ರೆಸ್ಗೆ ಹಿನ್ನಡೆ, ಅಕೌಂಟ್ ಫ್ರೀಜ್ಗೆ ತಡೆ ನೀಡುವ ಮನವಿ ತಿರಸ್ಕಾರ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ