ಚುನಾವಣೆ ಸೋಲಿನ ಬಳಿಕ ಸಿಪಿಎಂಗೆ ಅಯ್ಯಪ್ಪನ ಭಕ್ತಿ!

Kannadaprabha News   | Kannada Prabha
Published : Dec 19, 2025, 04:35 AM IST
cpm

ಸಾರಾಂಶ

ಶಬರಿಮಲೆ ಚಿನ್ನ ಕಳವು ಪ್ರಕರಣದಿಂದಾಗಿ ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ತನಗಾದ ಹಿನ್ನಡೆಯಿಂದ ಹತಾಶೆಗೊಂಡಿರುವ ಕೇರಳದ ಸಿಪಿಎಂ ನೇತೃತ್ವದ ಎಲ್‌ಡಿಎಫ್‌ ಸರ್ಕಾರ, ಚುನಾವಣೆ ವೇಳೆ ವೈರಲ್‌ ಆಗಿದ್ದ ಅಯ್ಯಪ್ಪನ ಭಕ್ತಿಗೀತೆ ಹೋಲುವ ವೈರಲ್‌ ಗೀತೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ತಿರುವನಂತಪುರ: ಶಬರಿಮಲೆ ಚಿನ್ನ ಕಳವು ಪ್ರಕರಣದಿಂದಾಗಿ ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ತನಗಾದ ಹಿನ್ನಡೆಯಿಂದ ಹತಾಶೆಗೊಂಡಿರುವ ಕೇರಳದ ಸಿಪಿಎಂ ನೇತೃತ್ವದ ಎಲ್‌ಡಿಎಫ್‌ ಸರ್ಕಾರ, ಚುನಾವಣೆ ವೇಳೆ ವೈರಲ್‌ ಆಗಿದ್ದ ಅಯ್ಯಪ್ಪನ ಭಕ್ತಿಗೀತೆ ಹೋಲುವ ವೈರಲ್‌ ಗೀತೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಧಾರ್ಮಿಕ ನಂಬಿಕೆಗೆ ವಿರುದ್ಧ

ಇದು ಧಾರ್ಮಿಕ ನಂಬಿಕೆಗೆ ವಿರುದ್ಧವಾಗಿದೆ ಎಂದು ಹೇಳಿ ಗೀತೆ ಸೃಷ್ಟಿಸಿದವರ ವಿರುದ್ಧ ಪ್ರಕರಣವನ್ನೂ ದಾಖಲಿಸಿದೆ.

ಭಕ್ತಿಗೀತೆಯನ್ನು ದುರುಪಯೋಗ

ಭಕ್ತಿಗೀತೆಯನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಸಿಪಿಎಂ ನಾಯಕ ಹಾಗೂ ಎಲ್‌ಡಿಎಫ್‌ ಸಮನ್ವಯಕಾರ ಟಿ.ಪಿ.ರಾಮಕೃಷ್ಣನ್‌ ಆರೋಪಿಸಿದ್ದಾರೆ.

ಚುನಾವಣೆ ವೇಳೆ ಭಾರೀ ಸಂಚಲನ ಮೂಡಿಸಿದ್ದ ಈ ‘ಕೇಟಿಯೇ’ ಹಾಡಿನ ವಿಡಿಯೋದಲ್ಲಿ ಚಿನ್ನಕದ್ದ ಆರೋಪ ಎದುರಿಸುತ್ತಿರುವ ಉನ್ನಿಕೃಷ್ಣನ್‌ ಪೊಟ್ಟಿ ಅವರು ಶಬರಿಮನೆಯಲ್ಲಿರುವ ಚಿನ್ನ ಕದ್ದು ತಾಮ್ರವನ್ನು ಇಡುತ್ತಿರುವ ರೀತಿಯಲ್ಲಿ ಸೃಷ್ಟಿಸಲಾಗಿದೆ. ಈ ಗೀತೆ ಎಷ್ಟು ವೈರಲ್‌ ಆಗಿತ್ತೆಂದರೆ ಸದನದಲ್ಲೂ ಈ ಗೀತೆ ವಿಚಾರ ಪ್ರಸ್ತಾಪವಾಗಿತ್ತು. ಹೀಗಾಗಿ ಇದೀಗ ಅಯ್ಯಪ್ಪನ ಬಗ್ಗೆ ಮಾತನಾಡುವ ಮೂಲಕ ಭಕ್ತರ ಓಲೈಕೆಗೆ ಸಿಪಿಎಂ ಮುಂದಾಗಿದೆ ಎಂಬ ಮಾತು ಕೇಳಿಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮನೆ ಬಾಡಿಗೆ ಕೇಳಿದ್ದಕ್ಕೆ ಮನೆ ಮಾಲಕಿಯ ಕೊಂದು ಸೂಟ್‌ಕೇಸ್‌ಗೆ ತುಂಬಿಸಿದ ಬಾಡಿಗೆದಾರ ದಂಪತಿ
ಹೊಸ ವರ್ಷಕ್ಕೆ ಹೊಸ ಫಾಸ್ಟಾಗ್ ನೀತಿ, ಟೋಲ್ ಪ್ಲಾಜಾದಲ್ಲಿ ಗೇಟ್ ಇರಲ್ಲ,ಸ್ಲೋ ಮಾಡಬೇಕಿಲ್ಲ