
ಅಲಿಗಢ(ಸೆ.15): ಮನೆಗಳನ್ನು ಭದ್ರಪಡಿಸುವ ಬೀಗಗಳ ತಯಾರಿಕೆಗೆ ಪ್ರಸಿದ್ಧಿಪಡೆದಿರುವ ಅಲಿಗಢ 21ನೇ ಶತಮಾನದಲ್ಲಿ ದೇಶದ ಗಡಿಯನ್ನು ಭದ್ರಪಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ.
ಮಂಗಳವಾರ ಡಿಫೆನ್ಸ್ ಕಾರಿಡಾರ್ನ ಅಲಿಗಢ ವಿಭಾಗಕ್ಕೆ ಭೇಟಿ ನೀಡಿದ ಮೋದಿ ವಸ್ತುಪ್ರದರ್ಶನದಲ್ಲಿ ಭಾಗಿಯಾಗಿದ್ದರು. ಈ ವೇಳೆ ಆಯೋಜಿಸಿದ್ದ ಕಾರ್ಯಕ್ರಮದ ವೇಳೆ ಮಾತನಾಡಿದ ಮೋದಿ, ಪ್ರಮುಖ ರಕ್ಷಣಾ ಆಮದುದಾರ ದೇಶವೆನಿಸಿದ್ದ ಭಾರತವೀಗ ರಕ್ಷಣಾ ಸಾಮಗ್ರಿಗಳನ್ನು ರಫ್ತು ಮಾಡುವ ದೇಶವಾಗಿ ರೂಪುಗೊಂಡಿದೆ. ಉತ್ತರ ಪ್ರದೇಶ ರಕ್ಷಣಾ ಉತ್ಪಾದನೆಯ ಕೇಂದ್ರ ಎನಿಸಿಕೊಳ್ಳಲಿದೆ.
ಸಣ್ಣ ಶಸ್ತ್ರಾಸ್ತ್ರಗಳ ಕೈಗಾರಿಕಾ ಘಟಕಗಳು, ಏರೋಸ್ಪೇಸ್, ಡ್ರೋನ್ಗಳ ತಯಾರಿಕೆ, ಡ್ರೋನ್ ನಿರೋಧಕ ವ್ಯವಸ್ಥೆ, ರಕ್ಷಣಾ ಸಾಮಗ್ರಿಗಳ ಬಿಡಿಭಾಗಗಳ ಉತ್ಪಾದನೆ, ರಕ್ಷಣಾ ಪ್ಯಾಕೇಜಿಂಗ್ ಉತ್ಪನ್ನಗಳು ರಕ್ಷಣಾ ಕಾರಿಡಾರ್ನಲ್ಲಿ ತಲೆ ಎತ್ತಲಿವೆ. ಉತ್ತರ ಪ್ರದೇಶದ ಅಲಿಗಢದಲ್ಲಿ ನಿರ್ಮಾಣ ಆಗುತ್ತಿರುವ ರಕ್ಷಣಾ ಕಾರಿಡಾರ್ ರಾಜ್ಯ ಮತ್ತು ಜಿಲ್ಲೆಯ ಆರ್ಥಿಕ ಪ್ರಗತಿಯ ದೃಷ್ಟಿಯಿಂದಲೂ ಮಹತ್ವದ್ದಾಗಿದೆ ಎಂದು ಹೇಳಿದ್ದಾರೆ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ