ಲಷ್ಕರ್ ಭಯೋತ್ಪಾದಕರು ಇರುವ ಅನುಮಾನ, ಶ್ರೀಲಂಕಾದಲ್ಲಿ ಚೆನ್ನೈ-ಕೊಲಂಬೊ ವಿಮಾನದಲ್ಲಿ ಶೋಧ!

Published : May 03, 2025, 07:54 PM ISTUpdated : May 03, 2025, 07:56 PM IST
ಲಷ್ಕರ್ ಭಯೋತ್ಪಾದಕರು ಇರುವ ಅನುಮಾನ, ಶ್ರೀಲಂಕಾದಲ್ಲಿ ಚೆನ್ನೈ-ಕೊಲಂಬೊ ವಿಮಾನದಲ್ಲಿ ಶೋಧ!

ಸಾರಾಂಶ

ಚೆನ್ನೈನಿಂದ ಶ್ರೀಲಂಕಾಕ್ಕೆ ಹೊರಟ ವಿಮಾನದಲ್ಲಿ ಐವರು ಲಷ್ಕರ್ ಉಗ್ರರಿದ್ದಾರೆಂಬ ವದಂತಿಯಿಂದಾಗಿ ಕೊಲಂಬೊ ವಿಮಾನ ನಿಲ್ದಾಣದಲ್ಲಿ ತೀವ್ರ ತಪಾಸಣೆ ನಡೆಯಿತು. ಚೆನ್ನೈಗೆ ಬಂದ ಬೆದರಿಕೆ ಇಮೇಲ್ ಆಧರಿಸಿ ಈ ಕ್ರಮ ಕೈಗೊಳ್ಳಲಾಯಿತು. ಆದರೆ, ಶೋಧ ಕಾರ್ಯಾಚರಣೆಯಲ್ಲಿ ಯಾವುದೇ ಅನುಮಾನಾಸ್ಪದ ವ್ಯಕ್ತಿಗಳು ಪತ್ತೆಯಾಗಲಿಲ್ಲ. ನಂತರ ಇದು ವದಂತಿ ಎಂದು ಖಚಿತವಾಯಿತು.

ನವದೆಹಲಿ (ಮೇ.3): ಚೆನ್ನೈನಿಂದ ಬಂದ ಶ್ರೀಲಂಕಾ ಏರ್‌ಲೈನ್ಸ್ ವಿಮಾನದಲ್ಲಿ ಐದು ಶಂಕಿತ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕರು ಇದ್ದಾರೆ ಎನ್ನುವ ಮಾಹಿತಿ ಬಂದ ನಂತರ ಕೊಲಂಬೊದ ಬಂಡಾರನಾಯಕೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಮಗ್ರ ಭದ್ರತಾ ತಪಾಸಣೆ ನಡೆಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಏಪ್ರಿಲ್ 22 ರ ಪಹಲ್ಗಾಮ್ ದಾಳಿಯ ನಂತರ ದೇಶದಲ್ಲಿ ಹೆಚ್ಚಿನ ಜಾಗರೂಕತೆಯ ನಡುವೆಯೂ, ಶ್ರೀಲಂಕಾ ಏರ್ಲೈನ್ಸ್ ವಿಮಾನದಲ್ಲಿ ಐದು ಲಷ್ಕರ್ ಕಾರ್ಯಕರ್ತರು ಇದ್ದಾರೆ ಎಂದು ಮಾಹಿತಿ ಇರುವ ಬೆದರಿಕೆ ಇಮೇಲ್ ಚೆನ್ನೈ ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಬಂದ ನಂತರ ಭದ್ರತಾ ಕ್ರಮಗಳನ್ನು ಪ್ರಾರಂಭಿಸಲಾಯಿತು.

'ನಿರ್ದಿಷ್ಟವಲ್ಲದ' ಎಂದು ವರ್ಗೀಕರಿಸಲಾದ ಬೆದರಿಕೆ ಮೇಲ್ ಅನ್ನು ಮುಖ್ಯ ಭದ್ರತಾ ಅಧಿಕಾರಿಗೆ ಬೆಳಿಗ್ಗೆ 11.05 ಕ್ಕೆ ಸ್ವೀಕರಿಸಲಾಯಿತು, ಅದರಲ್ಲಿ "UL 122 (ಬೆಳಿಗ್ಗೆ 9.55) ನಲ್ಲಿರುವ ಐದು ದಕ್ಷಿಣ ಭಾರತೀಯ ಪುರುಷರು ಲಷ್ಕರೆ ಕಾರ್ಯಕರ್ತರು. ಕ್ಲೀನ್‌ ಪ್ರೊಫೈಲ್, ಉತ್ತಮ ತರಬೇತಿ ಪಡೆದವರು, ಯಾವುದೇ ಅನುಮಾನವಿಲ್ಲ" ಎಂದು ಉಲ್ಲೇಖಿಸಲಾಗಿದೆ.

ಇಮೇಲ್ ಸ್ವೀಕರಿಸುವ ಹೊತ್ತಿಗೆ, ವಿಮಾನವು ಅದಾಗಲೇ ಹೊರಟಿತ್ತು, ಮತ್ತು ಮಾಹಿತಿಯನ್ನು ಕೊಲಂಬೊ ವಿಮಾನ ನಿಲ್ದಾಣಕ್ಕೆ ರವಾನಿಸಲಾಯಿತು, ಅಲ್ಲಿ ಸಂಪೂರ್ಣ ಭದ್ರತಾ ತಪಾಸಣೆ ನಡೆಸಿ, ಪ್ರಯಾಣಿಕರನ್ನು ಕೆಳಗಿಳಿಸಲಾಯಿತು. ಆದರೆ, ಯಾವುದೇ ಅನುಮಾನಾಸ್ಪದ ವ್ಯಕ್ತಿಗಳು ಅಥವಾ ಚಟುವಟಿಕೆಗಳು ಕಂಡುಬಂದಿಲ್ಲ. ಬಳಿಕ ಇದು ವಚನೆಯ ಈಮಲ್‌ ಎಂದು ತಿಳಿದುಬಂದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಶ್ರೀಲಂಕಾ ಏರ್‌ಲೈನ್ಸ್‌ನ ಹೇಳಿಕೆಯ ಪ್ರಕಾರ, ಅದರ ವಿಮಾನವನ್ನು ಕೂಲಂಕಷವಾಗಿ ಪರಿಶೀಲಿಸಲಾಯಿತು ಮತ್ತು ನಂತರ ಮುಂದಿನ ಕಾರ್ಯಾಚರಣೆಗಳಿಗೆ ಅನುಮತಿ ನೀಡಲಾಯಿತು. "ಭಾರತಕ್ಕೆ ಬೇಕಾಗಿರುವ ಶಂಕಿತನೊಬ್ಬ ವಿಮಾನದಲ್ಲಿ ಇದ್ದಾನೆ ಎಂದು ನಂಬಲಾದ ಬಗ್ಗೆ ಚೆನ್ನೈ ಪ್ರದೇಶ ನಿಯಂತ್ರಣ ಕೇಂದ್ರದಿಂದ ಬಂದ ಎಚ್ಚರಿಕೆಯ ನಂತರ ಸ್ಥಳೀಯ ಅಧಿಕಾರಿಗಳ ಸಮನ್ವಯದೊಂದಿಗೆ ಶೋಧ ನಡೆಸಲಾಯಿತು" ಎಂದು ಹೇಳಿಕೆ ತಿಳಿಸಿದೆ.

ಏಪ್ರಿಲ್ 22 ರಂದು, ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಬೈಸರಣ್‌ ಕಣಿವೆಯಲ್ಲಿ ಭಯೋತ್ಪಾದಕರು 26 ಜನರನ್ನು ಕೊಂದರು, ಹೆಚ್ಚಾಗಿ ಪ್ರವಾಸಿಗರು. ದಾಳಿಕೋರರಿಗಾಗಿ ಬೃಹತ್ ಶೋಧ ಮತ್ತು ಮ್ಯಾನ್‌ ಹಂಟ್‌ ನಡೆಯುತ್ತಿದೆ, ಅವರ ಸುಳಿವು ಇನ್ನೂ ಸಿಕ್ಕಿಲ್ಲ.ತನ್ನ ದಂಡನಾತ್ಮಕ ಕ್ರಮಗಳ ಭಾಗವಾಗಿ, ಭಾರತವು ಪಾಕಿಸ್ತಾನಿ ವಿಮಾನಯಾನ ಸಂಸ್ಥೆಗಳಿಗೆ ತನ್ನ ವಾಯುಪ್ರದೇಶವನ್ನು ನಿಷೇಧಿಸಿದೆ, ವೀಸಾಗಳನ್ನು ರದ್ದುಗೊಳಿಸಿದೆ, ರಾಜತಾಂತ್ರಿಕ ಸಂಬಂಧಗಳನ್ನು ಕೆಳಮಟ್ಟಕ್ಕಿಳಿಸಿದೆ, ಭೂ ಗಡಿಗಳನ್ನು ಮುಚ್ಚಿದೆ, ವ್ಯಾಪಾರವನ್ನು ಸ್ಥಗಿತಗೊಳಿಸಿದೆ ಮತ್ತು ಹಲವಾರು ಇತರ ಕ್ರಮಗಳನ್ನು ತೆಗೆದುಕೊಂಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಿಪೇರಿಗೆ 5 ಗಂಟೆ ಬೇಕೆಂದ ರೈಲ್ವೆ ಅಧಿಕಾರಿಗಳು; ಸುತ್ತಿಗೆಯಿಂದ 10 ನಿಮಿಷದಲ್ಲಿ ಸರಿ ಮಾಡಿದ ಅಂಕಲ್
India Latest News Live: ರಿಪೇರಿಗೆ 5 ಗಂಟೆ ಬೇಕೆಂದ ರೈಲ್ವೆ ಅಧಿಕಾರಿಗಳು; ಸುತ್ತಿಗೆಯಿಂದ 10 ನಿಮಿಷದಲ್ಲಿ ಸರಿ ಮಾಡಿದ ಅಂಕಲ್