ಇಸ್ರೇಲ್ ಬಳಿಕ ತೈವಾನ್‌ನಿಂದಲೂ ಭಾರತದ ಕಾರ್ಮಿಕರಿಗೆ ಬೇಡಿಕೆ: 1 ಲಕ್ಷ ಕೆಲಸಗಾರರ ನೇಮಕಕ್ಕೆ ನಿರ್ಧಾರ

Published : Nov 11, 2023, 09:28 AM ISTUpdated : Nov 11, 2023, 09:30 AM IST
ಇಸ್ರೇಲ್ ಬಳಿಕ ತೈವಾನ್‌ನಿಂದಲೂ  ಭಾರತದ ಕಾರ್ಮಿಕರಿಗೆ ಬೇಡಿಕೆ:  1 ಲಕ್ಷ ಕೆಲಸಗಾರರ ನೇಮಕಕ್ಕೆ ನಿರ್ಧಾರ

ಸಾರಾಂಶ

ಹಮಾಸ್ ಜೊತೆಗಿನ ಸಂಘರ್ಷದ ಬೆನ್ನಲ್ಲೇ ಭಾರತದಿಂದ ವಿವಿಧ ಉದ್ಯೋಗ ವಲಯಕ್ಕೆ 1 ಲಕ್ಷ ಜನರನ್ನು ನೇಮಕ ಮಾಡಿಕೊಳ್ಳಲು ಇಸ್ರೇಲ್‌ನಲ್ಲಿ ಬೇಡಿಕೆ ವ್ಯಕ್ತವಾಗಿದೆ ಎಂಬ ಸುದ್ದಿಯ ನಡುವೆಯೇ ತೈವಾನ್ ಕೂಡಾ ಭಾರತದಿಂದ 1 ಲಕ್ಷ ಉದ್ಯೋಗಿಗಳ ನೇಮಕಕ್ಕೆ ಮುಂದಾಗಿದೆ.

ನವದೆಹಲಿ: ಹಮಾಸ್ ಜೊತೆಗಿನ ಸಂಘರ್ಷದ ಬೆನ್ನಲ್ಲೇ ಭಾರತದಿಂದ ವಿವಿಧ ಉದ್ಯೋಗ ವಲಯಕ್ಕೆ 1 ಲಕ್ಷ ಜನರನ್ನು ನೇಮಕ ಮಾಡಿಕೊಳ್ಳಲು ಇಸ್ರೇಲ್‌ನಲ್ಲಿ ಬೇಡಿಕೆ ವ್ಯಕ್ತವಾಗಿದೆ ಎಂಬ ಸುದ್ದಿಯ ನಡುವೆಯೇ ತೈವಾನ್ ಕೂಡಾ ಭಾರತದಿಂದ 1 ಲಕ್ಷ ಉದ್ಯೋಗಿಗಳ ನೇಮಕಕ್ಕೆ ಮುಂದಾಗಿದೆ. ಈ ಮಾಹಿತಿ ನೀಡಿರುವ ವಿದೇಶಾಂಗ ಇಲಾಖೆ (Ministry of External Affairs), ಕೇಂದ್ರ ಸರ್ಕಾರ (central government) ಅಭಿವೃದ್ಧಿ ಹೊಂದಿದ ದೇಶಗಳೊಂದಿಗೆ ಕಾರ್ಮಿಕ ವಿನಿಮಯ ಒಪ್ಪಂದ ಮಾಡಿಕೊಳ್ಳುತ್ತಿದೆ.

ಅದರ ಮೊದಲ ಭಾಗವಾಗಿ ಮುಂದಿನ ತಿಂಗಳು ತೈವಾನ್ (Taiwan)ದೇಶದ ಕಾರ್ಖಾನೆ, ಆಸ್ಪತ್ರೆ ಹಾಗೂ ಹೊಲಗಳಲ್ಲಿ ದುಡಿಯಲು ಕಾರ್ಮಿಕರನ್ನು ಕಳುಹಿಸಲಾಗುತ್ತಿದೆ. ಹಂತಹಂತವಾಗಿ ಈ ಪ್ರಮಾಣವನ್ನು 1 ಲಕ್ಷಕ್ಕೆ ಏರಿಸಲಾಗುವುದು. ಇದು 2025ರ ವೇಳೆಗೆ ತನ್ನ ಜನಸಂಖ್ಯೆಯ ಶೇ.20ರಷ್ಟು ವೃದ್ಧರನ್ನೇ ಹೊಂದಲಿರುವ ತೈವಾನ್‌ಗೆ ತನ್ನ ಆರ್ಥಿಕತೆಯನ್ನು ಸ್ಥಿರವಾಗಿ ಇಟ್ಟುಕೊಳ್ಳಲು ಸಹಾಯಕವಾಗಲಿದೆ' ಎಂದು ತಿಳಿಸಿದರು. ಆದರೆ ತೈವಾನ್ ತನ್ನದೇ ಪ್ರದೇಶವೆಂದು ವಾದಿಸುತ್ತಿರುವ ಚೀನಾ ಈ ಒಪ್ಪಂದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸುವ ಸಾಧ್ಯತೆ ಇದೆ.

ಖುಲಾಯಿಸಿದ ಅದೃಷ್ಟ: ರಾತ್ರೋರಾತ್ರಿ ಲಕ್ಷಾಧಿಪತಿಯಾದ ಪಾಕಿಸ್ತಾನದ ಮೀನುಗಾರ

ನಿರ್ಗತಿಕನ ಬದುಕು ಬದಲಿಸಿದ ಕುದುರೆ ರೇಸ್‌: 5 ಡಾಲರ್‌ ಬೆಟ್ ಕಟ್ಟಿದವನಿಗೆ ಒಲಿಯಿತು 1 ಲಕ್ಷ ಡಾಲರ್

ಗಾಜಾ ಶಿಬಿರ: 50 ಸಾವಿರ ನಿರಾಶ್ರಿತರಿಗೆ ಬರೀ 4 ಟಾಯ್ಲೆಟ್‌, 4 ತಾಸಷ್ಟೇ ನೀರು!

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!