ನೀಟ್‌ ವಿರುದ್ಧ 3ನೇ ರಾಜ್ಯದಿಂದ ನಿರ್ಣಯ ಅಂಗೀಕಾರ; ಕರ್ನಾಟಕ, ತಮಿಳುನಾಡಿಗೆ ಕೈಜೋಡಿಸಿದ್ಯಾರು?

Published : Jul 25, 2024, 10:28 AM IST
ನೀಟ್‌ ವಿರುದ್ಧ 3ನೇ ರಾಜ್ಯದಿಂದ ನಿರ್ಣಯ ಅಂಗೀಕಾರ; ಕರ್ನಾಟಕ, ತಮಿಳುನಾಡಿಗೆ ಕೈಜೋಡಿಸಿದ್ಯಾರು?

ಸಾರಾಂಶ

ಆಗ ನಾವೂ ನೀಟ್ ವಿರೋಧಿಸಿದ್ದೆವು. ಆದರೆ ನಂತರ ಮೋದಿ ಮನಸ್ಸು ಬದಲಿಸಿ ನೀಟ್‌ಗೆ ಕೈಜೋಡಿಸುವಂತೆ ನಮಗೆ ಮನವೊಲಿಸಿದ್ದರು’ ಎಂದು ಆರೋಪಿಸಿದರು

ಕೋಲ್ಕತಾ: ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್‌ ರದ್ದುಗೊಳಿಸಿ ರಾಜ್ಯಗಳಿಗೇ ಪ್ರವೇಶ ಪರೀಕ್ಷೆ ನಡೆಸುವ ಅವಕಾಶ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ಪಶ್ಚಿಮ ಬಂಗಾಳ ವಿಧಾನಸಭೆ ನಿರ್ಣಯ ಅಂಗೀಕರಿಸಿದೆ.ಇದರೊಂದಿಗೆ ತಮಿಳುನಾಡು ಹಾಗೂ ಕರ್ನಾಟಕದ ಬಳಿಕ ಇಂಥ ನಿರ್ಣಯ ಅಂಗೀಕರಿಸಿದ 3ನೇ ರಾಜ್ಯ ಎನ್ನಿಸಿಕೊಂಡಿದೆ. ಈ ಮೂಲಕ ನೀಟ್‌ ವಿಚಾರದಲ್ಲಿ ರಾಜ್ಯ-ಕೇಂದ್ರ ಸಂಘರ್ಷ ತಾರಕಕ್ಕೇರಿದೆ. ಬಂಗಾಳ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರದ ವೇಳೆ ಮಾತನಾಡಿದ ಬೃತ್ಯ ಬಸು, ‘ಗುಜರಾತ್‌ ಮುಖ್ಯಮಂತ್ರಿ ಆಗಿದ್ದಾಗ ಪ್ರಧಾನಿ ನರೇಂದ್ರ ಮೋದಿ ಅವರೇ ನೀಟ್‌ ಅನ್ನು ಕೇಂದ್ರ ಸರ್ಕಾರ ನಡೆಸಬಾರದು ಎಂದು ವಾದಿಸಿದ್ದರು. ಆಗ ನಾವೂ ನೀಟ್ ವಿರೋಧಿಸಿದ್ದೆವು. ಆದರೆ ನಂತರ ಮೋದಿ ಮನಸ್ಸು ಬದಲಿಸಿ ನೀಟ್‌ಗೆ ಕೈಜೋಡಿಸುವಂತೆ ನಮಗೆ ಮನವೊಲಿಸಿದ್ದರು’ ಎಂದು ಆರೋಪಿಸಿದರು.

4 ವಿಪಕ್ಷ ಸಿಎಂ ಬಹಿಷ್ಕಾರ:

ಈ ನಡುವೆ, ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಲತಾಯಿ ಧೋರಣೆ ತಾಳಿದೆ ಎಂದು ಆರೋಪಿಸಿ ಜು.27ರಂದು ನಡೆಯಲಿರುವ ನೀತಿ ಆಯೋಗದ ಸಭೆ ಬಹಿಷ್ಕರಿಸುವುದಾಗಿ ಆಂಧ್ರ ಪ್ರದೇಶ, ಕರ್ನಾಟಕ, ಹಿಮಾಚಲ ಪ್ರದೇಶ ಹಾಗೂ ತಮಿಳುನಾಡು ಮುಖ್ಯಮಂತ್ರಿಗಳು ಘೋಷಿಸಿದ್ದಾರೆ.

ಸೆಕ್ಯುರಿಟಿಯನ್ನು ಕರೆಯಿರಿ, ಇವ್ರನ್ನ ಹೊರಗೆ ಹಾಕಿ; ನೀಟ್‌ ವಿಚಾರಣೆ ವೇಳೆ ಹಿರಿಯ ವಕೀಲರಿಗೆ ಎಚ್ಚರಿಸಿದ ಸಿಜೆಐ

ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದರೆ 5 ವರ್ಷ ಜೈಲು

ನೀಟ್‌ ಪರೀಕ್ಷಾ ಅಕ್ರಮಗಳ ಕೇಂದ್ರಬಿಂದು ಆಗಿರುವ ಬಿಹಾರದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದರೆ ಹಾಗೂ ಇತರ ಅಕ್ರಮ ಎಸಗಿದರೆ ಕಠಿಣ ಶಿಕ್ಷೆ ವಿಧಿಸುವ ಮಸೂದೆಯನ್ನು ಅಂಗೀಕರಿಸಲಾಗಿದೆ. ಇಂತಹ ದುಷ್ಕೃತ್ಯಗಳಲ್ಲಿ ಭಾಗಿಯಾದವರಿಗೆ 3ರಿಂದ 5 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ₹ 10 ಲಕ್ಷ ದಂಡ ವಿಧಿಸಲಾಗುತ್ತದೆ. ಬಿಹಾರ ಸಾರ್ವಜನಿಕ ಪರೀಕ್ಷೆಗಳ (ಪಿಇ) (ಅನ್ಯಾಯ ವಿಧಾನಗಳ ತಡೆ) ಮಸೂದೆ, 2024 ಅನ್ನು ರಾಜ್ಯ ಸಂಸದೀಯ ವ್ಯವಹಾರಗಳ ಸಚಿವ ವಿಜಯ್ ಕುಮಾರ್ ಚೌಧರಿ ಅವರು ಮಂಡಿಸಿದರು ಮತ್ತು ಪ್ರತಿಪಕ್ಷಗಳ ಸಭಾತ್ಯಾಗದ ನಡುವೆ ಧ್ವನಿ ಮತದಿಂದ ಅಂಗೀಕರಿಸಲಾಯಿತು.

ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸಲಾಗುವ ನೀಟ್ ಪರೀಕ್ಷೆಯ ಎಲ್ಲಾ ಉತ್ತರ ಪತ್ರಿಕೆಗಳ ಅಂಕಗಳನ್ನು ಮರುರಣಿಕೆ ಮಾಡಲಾಗುವುದು. ಹೊಸ ಮೆರಿಟ್‌ ಪಟ್ಟಿಯನ್ನು ಎರಡು ದಿನಗಳಲ್ಲಿ ಪ್ರಕಟ ಮಾಡಲಾಗುವುದು ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಹೇಳಿದೆ.

ನೀಟ್‌ ರದ್ದು ಮಾಡಿ ತನ್ನದೇ ಪರೀಕ್ಷೆಗೆ ಮುಂದಾದ ಕರ್ನಾಟಕ, ಮರು ಪರೀಕ್ಷೆಗೆ ಸುಪ್ರೀಂ ನಿರಾಕರಣೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..