ಕೇರಳದಲ್ಲಿ ಶುರುವಾಯ್ತು ಮತ್ತೊಂದು ಆತಂಕ, H1N1 ಭೀತಿಗೆ ಮಾಸ್ಕ್‌ ಕಡ್ಡಾಯ ಮಾಡಿದ ಆರೋಗ್ಯ ಇಲಾಖೆ

Published : Aug 01, 2024, 05:35 PM IST
ಕೇರಳದಲ್ಲಿ ಶುರುವಾಯ್ತು ಮತ್ತೊಂದು ಆತಂಕ, H1N1 ಭೀತಿಗೆ ಮಾಸ್ಕ್‌ ಕಡ್ಡಾಯ ಮಾಡಿದ ಆರೋಗ್ಯ ಇಲಾಖೆ

ಸಾರಾಂಶ

ವಯನಾಡ್‌ನಲ್ಲಿ ಭೀಕರ ಭೂಕುಸಿತ ಹಾಗೂ ಇಡೀ ರಾಜ್ಯದಲ್ಲಿ ಭಾರೀ ಮಳೆಯ ನಡುವೆ ಕೇರಳ ರಾಜ್ಯಕ್ಕೆ ಇನ್ನೊಂದು ದೊಡ್ಡ ಆತಂಕ ಆವರಿಸಿದೆ.

ತಿರುವನಂತಪುರ (ಆ.1): ವಯನಾಡ್‌ ಜಿಲ್ಲೆಯಲ್ಲಿ ಭೀಕರ ಭೂಕುಸಿತದಿಂದ ತತ್ತರಿಸಿರುವ ಕೇರಳ ರಾಜ್ಯಕ್ಕೆ ಮತ್ತೊಂದು ಆತಂಕ ಎದುರಾಗಿದೆ. ಇಡೀ ರಾಜ್ಯವೀಗ ಭೂಕುಸಿತದಲ್ಲಿ ಮಡಿದವರಿಗಾಗಿ ಶೋಕ ವ್ಯಕ್ತಪಡಿಸಿದೆ. ಅದರೊಂದಿಗೆ ಭಾರಿ ಮಳೆ ಇಡೀ ರಾಜ್ಯದ ಮೇಲೆ ತಾಂಡವವಾಡುತ್ತಿದೆ. ಹೀಗಿರುವಾಗ ಕೇರಳದಲ್ಲಿ H1N1 ಸಾಂಕ್ರಾಮಿಕದ ಭೀತಿ ಎದುರಾಗಿದೆ. ಅದೂ ಕೂಡ ವಯನಾಡ್‌ನಲ್ಲಿಯೇ ಎಚ್‌1ಎನ್‌1 ಸಾಂಕ್ರಾಮಿಕದ ಆತಂಕ ಎದುರಾಗಿದೆ. ಈ ಸೂಚನೆ ಸಿಕ್ಕ ಬೆನ್ನಲ್ಲಿಯೇ ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್‌ ಕಡ್ಡಾಯ ಮಾಡಿ ಕೇರಳ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.

ಸದ್ಯ ಆಸ್ಪತ್ರೆ ಮತ್ತು ಕಾಳಜಿ ಕೇಂದ್ರದಲ್ಲಿ ಮಾಸ್ಕ್ ಕಡ್ಡಾಯ ಮಾಡಿ ಕೇರಳ ಸರ್ಕಾರ ಆದೇಶ ಮಾಡಿದೆ. ಪ್ರತಿಯೊಬ್ಬರು ಮಾಸ್ಕ್ ಧರಿಸುವಂತೆ ಕಟ್ಟುನಿಟ್ಟಿನ ಸೂಚನೆಯನ್ನು ಕೇರಳ ಸರ್ಕಾರ ನೀಡಿದೆ. ಆರೋಗ್ಯ ಇಲಾಖೆ ಅಧಿಕಾರಿ ಹಾಗೂ ಸ್ವಯಂ ಸೇವಕರುಗಳಿಂದ ಸೂಚನೆಯನ್ನು ಹೊರಡಿಸಲಾಗಿದೆ. ಕೊರೋನಾ ಮಹಾಮಾರಿ ಈ ಹೊತ್ತಿನಲ್ಲಿ ಕೇರಳಕ್ಕೆ ಮತ್ತೆ ನೆನಪಾಗುತ್ತಿದೆ. H1N1 ತೀವ್ರತೆ ಅರಿತು ಕೇರಳದಲ್ಲಿ ಈ ಸೂಚನೆ ನೀಡಲಾಗಿದೆ.

ಇನ್ನೊಂದೆಡೆ, ಕೋಝಿಕ್ಕೋಡ್, ವಯನಾಡು, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇಂದು ಪತ್ತನಂತಿಟ್ಟ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಸಾರ್ವಜನಿಕರಿಗೆ ವಿಶೇಷ ಸೂಚನೆಗಳನ್ನು ಕೇರಳ ಸರ್ಕಾರ ನೀಡಿದೆ. ಭೂಕುಸಿತ, ಪ್ರವಾಹಕ್ಕೆ ಒಳಗಾಗುವ ಪ್ರದೇಶಗಳಲ್ಲಿರುವವರು ಭಾರೀ ಮಳೆಯಾಗುವ ಪರ್ವತ ಪ್ರದೇಶಗಳಲ್ಲಿ ಸುರಕ್ಷಿತ ಸ್ಥಳಕ್ಕೆ ತೆರಳಬೇಕು. ಜನರು ಹಗಲಿನಲ್ಲಿ ಸಂಚರಿಸಲು ಸಿದ್ಧರಾಗಿರಬೇಕು. ನಿತ್ಯ ಜಲಾವೃತವಾಗಿರುವ ತಗ್ಗು ಪ್ರದೇಶಗಳಲ್ಲಿ ವಾಸಿಸುವ ನಿವಾಸಿಗಳು ಪರಿಸ್ಥಿತಿಯನ್ನು ನಿರ್ಣಯಿಸಿದ ನಂತರ ಸಿದ್ಧಪಡಿಸಿದ ಶಿಬಿರಗಳಿಗೆ ತೆರಳಬೇಕು ಎಂದು ತಿಳಿಸಲಾಗಿದೆ.

ಜೋರಾಗಿ ಗಾಳಿ ಬೀಸುವ ಸಾಧ್ಯತೆಯಿರುವುದರಿಂದ ಮುಚ್ಚಿದ ಮನೆಗಳಲ್ಲಿ ವಾಸಿಸುವವರು ಮತ್ತು ದುರ್ಬಲ ಛಾವಣಿಯಿರುವ ಮನೆಗಳಲ್ಲಿ ವಾಸಿಸುವವರು ವಿಶೇಷವಾಗಿ ಜಾಗರೂಕರಾಗಿರಬೇಕು. ಅಪಾಯವನ್ನು ಕಂಡವರು ಅಧಿಕಾರಿಗಳನ್ನು ಸಂಪರ್ಕಿಸಿ ಸುರಕ್ಷತಾ ಮುನ್ನೆಚ್ಚರಿಕೆಯಾಗಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು.

ವಯನಾಡು ಭೂಕುಸಿತ ದುರಂತ: ಮೃತ ಕುಟುಂಬಕ್ಕೆ ಸಾಂತ್ವನ ಹೇಳಿದ ನಿಖಿಲ್; ₹70,000 ಧನ ಸಹಾಯ

ಖಾಸಗಿ ಮತ್ತು ಸಾರ್ವಜನಿಕ ಪ್ರದೇಶಗಳಲ್ಲಿ ಅಪಾಯದಲ್ಲಿರುವ ಮರಗಳು/ಕಂಬಗಳು/ಬೋರ್ಡ್‌ಗಳು, ಗೋಡೆಗಳು ಇತ್ಯಾದಿಗಳನ್ನು ಭದ್ರಪಡಿಸಬೇಕು ಮತ್ತು ಮರಗಳನ್ನು ಕತ್ತರಿಸಬೇಕು. ಅಪಾಯಕಾರಿ ಸ್ಥಿತಿಗಳ ಬಗ್ಗೆ ಅಧಿಕಾರಿಗಳ ಗಮನಕ್ಕೆ ತರಬೇಕು.  ವಿವಿಧ ಕರಾವಳಿಗಳಲ್ಲಿ ಸಮುದ್ರದ ಚಂಡಮಾರುತಗಳು ತೀವ್ರಗೊಳ್ಳುವ ಸಾಧ್ಯತೆಯಿರುವುದರಿಂದ ಅಪಾಯದ ವಲಯಗಳ ನಿವಾಸಿಗಳು ಜಾಗರೂಕರಾಗಿರಬೇಕು.

ವಯನಾಡು ಮರಣ ಮೃದಂಗ: ಜವರಾಯನ ವಾಹನದಂತೆ ಕಂಡ ಸಾಲು ಸಾಲು ಆಂಬುಲೆನ್ಸ್‌ಗಳು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಉಗ್ರವಾದದ ವಿರುದ್ಧ ಜಂಟಿ ಹೋರಾಟ : ಮೋದಿ ಘೋಷಣೆ
Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!