ಲವ್ ‌ಜಿಹಾದ್‌ ನಿಷೇಧ ಬಳಿಕ ಅಂತರ್‌ ಧರ್ಮೀಯ ವಿವಾಹ ಪ್ರೋತ್ಸಾಹ ಧನ ರದ್ದು!

Published : Dec 03, 2020, 03:01 PM ISTUpdated : Dec 03, 2020, 03:19 PM IST
ಲವ್ ‌ಜಿಹಾದ್‌ ನಿಷೇಧ ಬಳಿಕ  ಅಂತರ್‌ ಧರ್ಮೀಯ ವಿವಾಹ ಪ್ರೋತ್ಸಾಹ ಧನ ರದ್ದು!

ಸಾರಾಂಶ

ಲವ್‌ಜಿಹಾದ್‌ ನಿಷೇಧ ಬಳಿಕ ಅಂತರ್‌ ಧರ್ಮೀಯ ವಿವಾಹ ಪ್ರೋತ್ಸಾಹ ಧನ ರದ್ದು| 1976ರಲ್ಲಿ ಜಾರಿ ಆಗಿದ್ದ ವಿವಾಹ ಭತ್ಯೆ ಯೋಜನೆ

ಲಖನೌ(ಡಿ.03): ‘ಲವ್‌ ಜಿಹಾದ್‌’ ತಡೆಯಲು ಸುಗ್ರೀವಾಜ್ಞೆ ಹೊರಡಿಸಿರುವ ಉತ್ತರ ಪ್ರದೇಶ ಸರ್ಕಾರ ಇದೀಗ, ಅಂತರ್‌ ಧರ್ಮೀಯ ವಿವಾಹಗಳಿಗೆ ಕಳೆದ 44 ವರ್ಷಗಳಿಂದ ನೀಡುತ್ತಿರುವ ಪ್ರೋತ್ಸಾಹ ಧನವನ್ನು ಸ್ಥಗಿತಗೊಳಿಸಲು ಮುಂದಾಗಿದೆ.

ಅಂತರ್‌ ಜಾತಿ ಮತ್ತು ಅಂತರ್‌ ಧರ್ಮೀಯ ವಿವಾಹಕ್ಕೆ ಭತ್ಯೆ ನೀಡುವ ಯೋಜನೆಯನ್ನು ಉತ್ತರ ಪ್ರದೇಶದಲ್ಲಿ 1976ರಲ್ಲಿ ಜಾರಿ ಮಾಡಲಾಗಿತ್ತು. ಉತ್ತರ ಪ್ರದೇಶದಿಂದ ಪ್ರತ್ಯೇಕಗೊಂಡಿರುವ ಉತ್ತರಾಖಂಡದಲ್ಲಿಯೂ ಈ ಯೋಜನೆಯನ್ನು ಮುಂದುವರಿಸಿಸಲಾಗಿದೆ. ಉತ್ತರ ಪ್ರದೇಶದ ರೀತಿ ಉತ್ತರಾಖಂಡ ಸರ್ಕಾರ ಕೂಡ ಈ ಯೋಜನೆಯನ್ನು ರದ್ದುಗೊಳಿಸುವ ಬಗ್ಗೆ ಚಿಂತಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ವಿವಾಹ ಭತ್ಯೆ ಯೋಜನೆಯ ಅಡಿಯಲ್ಲಿ ಅಂತರ್‌ ಧರ್ಮಿಯ ವಿವಾಹಕ್ಕೆ ಸರ್ಕಾರದ ವತಿಯಿಂದ 50 ಸಾವಿರ ರು. ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಮದುವೆ ಆದ ಎರಡು ವರ್ಷದ ಒಳಗಾಗಿ ಜಿಲ್ಲಾ ಮ್ಯಾಜಿಸ್ಪ್ರೇಟ್‌ಗೆ ಅರ್ಜಿ ಸಲ್ಲಿಸಿ ದಂಪತಿ ಯೋಜನೆಯ ಫಲಾನುಭವ ಪಡೆಯಬಹುದಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ನರಕಕ್ಕೆ ಬನ್ನಿ ಅಂತ ಕರೆಯುತ್ತೆ ಈ ವೀಡಿಯೋ: ಅನೇಕರ ತಲೆ ಕೆಡಿಸಿದ 140 ವರ್ಷಗಳ ಅವಧಿಯ ವಿಚಿತ್ರ ಯುಟ್ಯೂಬ್ ವೀಡಿಯೋ
ತನ್ನ ಮಾತನ್ನೇ ಮುರಿದ ಸಾಯಿ ಪಲ್ಲವಿ.. ಬಾಲಿವುಡ್‌ನಲ್ಲಿ ಇನ್ನೂ ಮಾಡದೇ ಇರುವುದನ್ನು ಮಾಡಿಬಿಟ್ರು!