5 ವರ್ಷದ ಬಾಲಕನಿಗೆ ಕಾನ್ಸ್‌ಟೇಬಲ್ ಹುದ್ದೆ: ಅಪ್ಪನ ಸಾವಿನ ನಂತರ ಮಗನಿಗೆ ಕೆಲಸ

Published : Mar 24, 2023, 03:09 PM ISTUpdated : Mar 24, 2023, 03:10 PM IST
5 ವರ್ಷದ ಬಾಲಕನಿಗೆ ಕಾನ್ಸ್‌ಟೇಬಲ್ ಹುದ್ದೆ: ಅಪ್ಪನ ಸಾವಿನ ನಂತರ ಮಗನಿಗೆ ಕೆಲಸ

ಸಾರಾಂಶ

ಪೊಲೀಸ್‌ ಅಧಿಕಾರಿಯೊಬ್ಬರ ಹಠಾತ್‌ ನಿಧನದ ನಂತರ ಅವರ 5 ವರ್ಷದ ಪುತ್ರನನ್ನು ಮಕ್ಕಳ ಪೊಲೀಸ್ ಕಾನ್ಸ್‌ಟೇಬಲ್ ಆಗಿ ನೇಮಕ ಮಾಡಿದ ಅಪರೂಪದ ಘಟನೆ ಛತ್ತೀಸ್‌ಗಢದಲ್ಲಿ ನಡೆದಿದೆ.

ಸರ್ಗುಜಾ (ಛತ್ತೀಸ್‌ಗಢ): ಪೊಲೀಸ್‌ ಅಧಿಕಾರಿಯೊಬ್ಬರ ಹಠಾತ್‌ ನಿಧನದ ನಂತರ ಅವರ 5 ವರ್ಷದ ಪುತ್ರನನ್ನು ಮಕ್ಕಳ ಪೊಲೀಸ್ ಕಾನ್ಸ್‌ಟೇಬಲ್ ಆಗಿ ನೇಮಕ ಮಾಡಿದ ಅಪರೂಪದ ಘಟನೆ ಛತ್ತೀಸ್‌ಗಢದಲ್ಲಿ ನಡೆದಿದೆ. ಪೊಲೀಸ್ ಅಧಿಕಾರಿ ರಾಜ್ ಕುಮಾರ್ ರಾಜವಾಡೆ ಎಂಬುವವರು ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ 5 ವರ್ಷದ ಪುತ್ರನಿಗೆ ಪೊಲೀಸ್ ಇಲಾಖೆಯಲ್ಲಿ ಕಾನ್ಸ್‌ಟೇಬಲ್ ಕೆಲಸ ನೀಡಲಾಗಿದೆ.  ಈ ಹಿನ್ನೆಲೆ ಈಗ ಯುಕೆಜಿ ವಿದ್ಯಾರ್ಥಿಯಾಗಿರುವ 5 ವರ್ಷದ ಬಾಲಕ ನಮನ್ ರಾಜ್‌ವಾಡೆ (Naman Rajwade) ಪೊಲೀಸ್ ಪೇದೆಯಾಗಿ ಛತ್ತೀಸ್‌ಗಢ ಪೊಲೀಸ್ ಇಲಾಖೆ ಸೇರಿದ್ದಾರೆ. 

ಛತ್ತೀಸ್‌ಗಢದ ಸರ್ಗುಜಾದಲ್ಲಿ ಮಕ್ಕಳ ಕಾನ್‌ಸ್ಟೇಬಲ್ (Child Constable) ಆಗಿ ಅವರನ್ನು ನೇಮಿಸಲಾಗಿದೆ. ಮಹಿಳಾ ಠಾಣೆಯಲ್ಲಿ ನಮನ್ ತಂದೆ ರಾಜ್ ಕುಮಾರ್ ರಾಜವಾಡೆ ಪೊಲೀಸ್ ಅಧಿಕಾರಿಯಾಗಿ  ಕಾರ್ಯನಿರ್ವಹಿಸಿದ್ದರು, ಆದರೆ ಇತ್ತೀಚೆಗೆ ಅವರು ಅಪಘಾತದಲ್ಲಿ ನಿಧನರಾಗಿದ್ದರು. ಇದರ ಬೆನ್ನಲ್ಲೇ ಪೊಲೀಸ್ ಆಡಳಿತ ಮಂಡಳಿ ಅನುಕಂಪದ ಆಧಾರದ ಮೇಲೆ ಈ ನಿರ್ಧಾರ ಕೈಗೊಂಡಿದೆ. ಈ ಬಗ್ಗೆ ಸುದ್ದಿಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಪೊಲೀಸ್ ಅಧಿಕಾರಿ ಪತ್ನಿ ನಿತು ರಾಜ್‌ವಾಡೆ (Nitu Rajwade),ನನ್ನ ಪತಿ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಈಗ ನನ್ನ ಮಗನನ್ನು ಮಕ್ಕಳ ಕಾನ್‌ಸ್ಟೇಬಲ್ ಆಗಿ ನೇಮಿಸಲಾಗಿದೆ. ಗಂಡನನ್ನು ಕಳೆದುಕೊಂಡಿರುವ ಬಗ್ಗೆ ನೋವಿದೆ. ಆದರೆ ಮಗುವಿಗೆ ಪೊಲೀಸ್ ಹುದ್ದೆ ನೀಡಿರುವುದಕ್ಕೆ ಖುಷಿ ಆಗಿದೆ ಎಂದು ಹೇಳಿದ್ದಾರೆ. 

ನಕಲಿ ಸರ್ಕಾರಿ ಕಚೇರಿ ತೆರೆದು ಉದ್ಯೋಗಾಕಾಂಕ್ಷಿಗಳಿಂದ ಲಕ್ಷಾಂತರ ರೂ. ವಂಚನೆ..!

ಈ ಬಗ್ಗೆಎಎನ್‌ಐಗೆ ಪ್ರತಿಕ್ರಿಯಿಸಿದ ಪೊಲೀಸ್ ವರಿಷ್ಠಾಧಿಕಾರಿ ಭಾವನಾ ಗುಪ್ತಾ (Bhavna Gupta), ಆಡಳಿತ ಮತ್ತು ಪೊಲೀಸ್ ಪ್ರಧಾನ ಕಚೇರಿಯ ಮಾರ್ಗಸೂಚಿಗಳ ಪ್ರಕಾರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಪೊಲೀಸ್ ಕೇಂದ್ರ ಕಚೇರಿಯ ಮಾರ್ಗಸೂಚಿಗಳ ಪ್ರಕಾರ, ಹುದ್ದೆಯಲ್ಲಿರುವವರು ಅಕಾಲಿಕವಾಗಿ ಸಾವನ್ನಪ್ಪಿದ್ದರೆ ಅವರ ಕುಟುಂಬದಲ್ಲಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಇದ್ದರೆ, ಅವರನ್ನು ನೇಮಕ ಮಾಡಲಾಗುತ್ತದೆ. ಅದರಂತೆ  'ಮಕ್ಕಳ ಕಾನ್ಸ್‌ಟೇಬಲ್'. ಹುದ್ದೆಯ  ಅಡಿಯಲ್ಲಿ ನಮನ್ ರಾಜ್‌ವಾಡೆ ಅವರನ್ನು ಮಕ್ಕಳ ಕಾನ್‌ಸ್ಟೇಬಲ್ ಆಗಿ ನೇಮಿಸಲಾಗಿದೆ ಎಂದು ಅವರು ಹೇಳಿದರು.
 

'ನನ್‌ ಹೆಂಡ್ತಿಗೆ ಸೊಳ್ಳೆ ಕಚ್ತಿದೆ..' ಎಂದು ಟ್ವೀಟ್‌ ಮಾಡಿದ ವ್ಯಕ್ತಿಗೆ ಸೊಳ್ಳೆಬತ್ತಿ ತಂದುಕೊಟ್ಟ ಪೊಲೀಸ್‌!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Indigo Crisis: ಮಗಳಿಗೆ ರಕ್ತ ಸೋರ್ತಿದೆ, ಸ್ಯಾನಿಟರಿ ಪ್ಯಾಡ್​ ಕೊಡಿ: ಬೆಂಗಳೂರು ಏರ್​ಪೋರ್ಟ್​ನಲ್ಲಿ ತಂದೆಯ ಕಣ್ಣೀರು
ಬಿಹಾರದಲ್ಲಿ NDA ಗೆಲುವು ನಿಜ, ಆದ್ರೆ ಸೋತಿದ್ದು ಪ್ರಜಾಪ್ರಭುತ್ವ: ತೇಜಸ್ವಿ ಯಾದವ್