ರಾಜೀನಾಮೆ ಬಳಿಕ ಧನಕರ್‌ ಟೆನ್ನಿಸ್‌, ಯೋಗದಲ್ಲಿ ನಿರತ

Kannadaprabha News   | Kannada Prabha
Published : Aug 24, 2025, 06:51 AM IST
Jagdeep Dhankar

ಸಾರಾಂಶ

ಮುಂಗಾರು ಅಧಿವೇಶನದ ಮೊದಲ ದಿನ ಅಚಾನಕ್ಕಾಗಿ ಉಪರಾಷ್ಟ್ರಪತಿ ಹುದ್ದೆಗೆ ರಾಜೀನಾಮೆ ನೀಡಿದ್ದ ಜಗದೀಪ್‌ ಧನಕರ್‌ ಅವರು ಈಗ ಟೆನ್ನಿಸ್‌ ಆಡಿಕೊಂಡು, ಯೋಗ ಮಾಡಿಕೊಂಡು ಪರಿವಾರದೊಂದಿಗೆ ಸಮಯ ಕಳೆಯುತ್ತ ಹಾಯಾಗಿದ್ದಾರೆ ಎಂದು ವರದಿಯಾಗಿದೆ.

ನವದೆಹಲಿ: ಮುಂಗಾರು ಅಧಿವೇಶನದ ಮೊದಲ ದಿನ ಅಚಾನಕ್ಕಾಗಿ ಉಪರಾಷ್ಟ್ರಪತಿ ಹುದ್ದೆಗೆ ರಾಜೀನಾಮೆ ನೀಡಿದ್ದ ಜಗದೀಪ್‌ ಧನಕರ್‌ ಅವರು ಈಗ ಟೆನ್ನಿಸ್‌ ಆಡಿಕೊಂಡು, ಯೋಗ ಮಾಡಿಕೊಂಡು ಪರಿವಾರದೊಂದಿಗೆ ಸಮಯ ಕಳೆಯುತ್ತ ಹಾಯಾಗಿದ್ದಾರೆ ಎಂದು ವರದಿಯಾಗಿದೆ.

ಧನಕರ್‌ ಅವರ ದಿನಚರಿಯೊಂದಿಗೆ ಚಿರಪರಿಚಿರಾಗಿರುವವರು ಈ ಬಗ್ಗೆ ಮಾಹಿತಿ ನೀಡಿದ್ದು, ‘ಅವರು ದಿನನಿತ್ಯ ಯೋಗ, ತಮ್ಮ ಸ್ನೇಹಿತರು, ಉಪರಾಷ್ಟ್ರಪತಿ ನಿವಾಸದ ಸಿಬ್ಬಂದಿ ಜತೆ ಟೆನ್ನಿಸ್‌ ಆಟದಲ್ಲಿ ತೊಡಗಿರುತ್ತಾರೆ. ಮುಂಚೆಯೂ ಪ್ರವಾಸದಿಂದ ಮರಳಿದ ಬಳಿಕ ಟಿಟಿ ಆಡುತ್ತಿದ್ದರು’ ಎಂದು ತಿಳಿಸಿದ್ದಾರೆ.

ಅನಾರೋಗ್ಯದ ಕಾರಣ ನೀಡಿ ಧನಕರ್‌ ಅವರು ಜು.21ರಂದು ಉಪರಾಷ್ಟ್ರಪತಿ ಹುದ್ದೆಗೆ ದಿಢೀರ್‌ ರಾಜೀನಾಮೆ ನೀಡಿದ್ದರು. ಅವರ ಈ ನಡೆ ಹಲವಾರು ಸಂಶಯಗಳು, ಗೊಂದಲಗಳಿಗೆ ಎಡೆಮಾಡಿತ್ತು. ಬಿಜೆಪಿಗೆ ತಕ್ಕಂತೆ ವರ್ತಿಸುತ್ತಿರಲಿಲ್ಲವಾದ್ದರಿಂದ ಅವರನ್ನು ತೆಗೆದುಹಾಕಲಾಯಿತು ಎಂಬ ವಿಶ್ಲೇಷಣೆಗಳೂ ಕೇಳಿಬಂದಿದ್ದವು. ಇತ್ತೀಚೆಗೆ ಲೋಕಸಭೆ ವಿಪಕ್ಷ ರಾಹುಲ್‌ ಗಾಂಧಿ ಕೂಡ, ‘ರಾಜ್ಯಸಭೆಯಲ್ಲಿ ಸದಾ ಗದ್ದಲ ಎಬ್ಬಿಸುತ್ತಿದ್ದವರು ಇದ್ದಕ್ಕಿದ್ದಂತೆ ಶಾಂತವಾಗಿಬಿಟ್ಟಿದ್ದಾರೆ. ಅವರ ನಿರ್ಗಮನಕ್ಕೆ ಕಾರಣವೇನು ಮತ್ತು ಎಲ್ಲಿ ಅಡಗಿದ್ದಾರೆ?’ ಎಂದು ಪ್ರಶ್ನಿಸಿದ್ದರು. ಅದರ ಬೆನ್ನಲ್ಲೇ ಈ ಮಾಹಿತಿ ಹೊರಬಿದ್ದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಸಗುಲ್ಲಾ ಖಾಲಿ ಆಯ್ತು ಎಂದು ಮುರಿದು ಬಿತ್ತು ಮದ್ವೆ: ಮದುವೆ ಮನೆಯಾಯ್ತು ರಣಾಂಗಣ
ಮೋದಿ-ಪುಟಿನ್ ಆರ್ಮರ್ಡ್ ಬದಲು ಸಾಮಾನ್ಯ ಟೊಯೋಟಾ ಫಾರ್ಚೂನ್ ಕಾರಿನಲ್ಲಿ ಪ್ರಯಾಣಿಸಿದ್ದೇಕೆ?