ಬಿಹಾರ ಬೆನ್ನಲ್ಲೇ ಬಂಗಾಳ ಗೆಲ್ಲಲು ಬಿಜೆಪಿ ರಣತಂತ್ರ!

Published : Nov 12, 2020, 08:28 AM ISTUpdated : Nov 12, 2020, 08:45 AM IST
ಬಿಹಾರ ಬೆನ್ನಲ್ಲೇ ಬಂಗಾಳ ಗೆಲ್ಲಲು ಬಿಜೆಪಿ ರಣತಂತ್ರ!

ಸಾರಾಂಶ

ಬಿಹಾರ ಬೆನ್ನಲ್ಲೇ ಬಂಗಾಳ ಗೆಲ್ಲಲು ಬಿಜೆಪಿ ರಣತಂತ್ರ| ಬಿಹಾರದಿಂದ ಕಲಿತ ಪಾಠವೇ ಈಗ ಅಸ್ತ್ರ

ಕೋಲ್ಕತಾ(ನ.12): ಬಿಹಾರ ಚುನಾವಣೆಯ ಗೆಲುವಿನ ಬೆನ್ನಲ್ಲೇ, ಬಿಜೆಪಿ ತನ್ನ ಮುಂದಿನ ಗುರಿಯನ್ನು ನೆರೆಯ ಪಶ್ಚಿಮ ಬಂಗಾಳದತ್ತ ತಿರುಗಿಸಿದೆ. 2021ರ ಏಪ್ರಿಲ್‌- ಮೇನಲ್ಲಿ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ತನ್ನ ಚುನಾವಣಾ ರಣತಂತ್ರಕ್ಕೆ ಅಂತಿಮ ಸ್ಪರ್ಶ ನೀಡುವ ಕೆಲಸದಲ್ಲಿ ಬಿಜೆಪಿ ತೊಡಗಿಸಿಕೊಂಡಿದೆ.

ದಶಕಗಳಿಂದಲೂ ಬಿಜೆಪಿಗೆ ಬಂಗಾಳ ಗಗನ ಕುಸುಮವಾಗಿಯೇ ಉಳಿದಿತ್ತು. ಆದರೆ ಅಮಿತ್‌ ಶಾ ನೇತೃತ್ವದಲ್ಲಿ ಕಳೆದ ಲೋಕಸಭಾ ಚುನಾವಣೆ ವೇಳೆ ರಾಜ್ಯದ 42 ಸ್ಥಾನಗಳ ಪೈಕಿ 18ರಲ್ಲಿ ಗೆಲ್ಲುವ ಮೂಲಕ ಬಿಜೆಪಿ ಐತಿಹಾಸಿಕ ಸಾಧನೆ ಮಾಡಿತ್ತು. ಜೊತೆಗೆ ಈ ವೇಳೆ ಚಲಾವಣೆಯಾದ ಮತಗಳ ಅನ್ವಯ ಸುಮಾರು 125 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಹೊಂದಿತ್ತು. ಹೀಗಾಗಿಯೇ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 294 ಸ್ಥಾನಗಳ ಪೈಕಿ 200 ಸ್ಥಾನ ಗೆಲ್ಲುವ ಗುರಿಯನ್ನು ಪಕ್ಷ ಹಾಕಿಕೊಂಡಿದೆ.

ಚುನಾವಣೆ ಗೆಲ್ಲುವ ಸಂಬಂಧ ಕಳೆದೊಂದು ವರ್ಷದಿಂದ ತಂತ್ರಗಾರಿಕೆ ರೂಪಿಸಿದ್ದ ಬಿಜೆಪಿ, ಅದಕ್ಕೀಗ ಬಿಹಾರದಲ್ಲಿ ಕಲಿತ ಪಾಠವನ್ನು ಸೇರಿಸಿಕೊಳ್ಳಲು ಮುಂದಾಗಿದೆ. ಕಾರಣ, ಇದುವರೆಗೂ ಬಿಜೆಪಿ ಮಮತಾ ಸರ್ಕಾರದ ವಿರುದ್ಧ ಭ್ರಷ್ಟಾಚಾರ, ದುರಾಡಳಿತ, ಹಿಂಸಾಚಾರ, ಕೋವಿಡ್‌ ನಿಯಂತ್ರಣದಲ್ಲಿನ ವೈಫಲ್ಯ, ಕಾನೂನು ಸುವ್ಯವಸ್ಥೆಯನ್ನೇ ದಾಳಿಯ ಅಸ್ತ್ರವಾಗಿ ಬಳಸಿಕೊಂಡು ಬಂದಿದೆ. ಜೊತೆಗೆ ಅದನ್ನೇ ಮುಂದುವರೆಸುವ ಇರಾದೆಯನ್ನು ಹೊಂದಿತ್ತು. ಆದರೆ ಬಿಹಾರ ಚುನಾವಣೆಯಲ್ಲಿ ಪ್ರಮುಖವಾಗಿ ಗಮನ ಸೆಳೆದ ನಿರುದ್ಯೋಗ, ವಲಸಿಗ ಕಾರ್ಮಿಕರ ಸಮಸ್ಯೆ ಕೂಡ ಅತ್ಯಂತ ಮಹತ್ವದ್ದು ಎಂಬುದು ನಮಗೆ ಅರಿವಾಗಿದೆ. ಹೀಗಾಗಿ ಅದನ್ನೂ ನಾವು ಪ್ರಮುಖ ಅಸ್ತ್ರವಾಗಿ ಬಳಸಿಕೊಳ್ಳಲಿದ್ದೇವೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ಹೀಗಾಗಿಯೇ ಮುಂಬರುವ ದಿನಗಳಲ್ಲಿ ಮಮತಾ ಸರ್ಕಾರದ ವಿರುದ್ಧ ಮುಗಿಬೀಳಲು ಬಿಜೆಪಿ ಸಿದ್ಧತೆ ಆರಂಭಿಸಿದೆ. ಜೊತೆಗೆ ಜನರಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಜಿಲ್ಲಾ ಮಟ್ಟದಲ್ಲಿ ದೊಡ್ಡ ಮಟ್ಟದ ಹೋರಾಟ ರೂಪಿಸುವಂತೆಯೂ ರಾಜ್ಯ ನಾಯಕರಿಗೆ ದೆಹಲಿಯಿಂದ ಸೂಚನೆ ಹೋಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

UIDAI Rules: ಯಾವುದೇ ಹೋಟೆಲ್‌ನಲ್ಲಿ ಆಧಾರ್ ಕಾರ್ಡ್ ಫೋಟೋಕಾಪಿ ನೀಡೋ ಅಗತ್ಯವಿಲ್ಲ: ಈ ಹೊಸ ನಿಯಮ ತಿಳ್ಕೊಳ್ಳಿ
ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು