
ನವದೆಹಲಿ: ಸೇನಾಪಡೆಗಳಿಗೆ ಯೋಧರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳುವ ‘ಅಗ್ನಿವೀರ’ ಯೋಜನೆಯ ವಿಷಯದಲ್ಲಿ ಈ ಹಿಂದೆಯೂ ಹಲವು ಬಾರಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ರಾಹುಲ್ ಗಾಂಧಿ, ಇದೀಗ ಲೋಕಸಭೆಯ ಪ್ರತಿಪಕ್ಷ ನಾಯಕನಾದ ಬಳಿಕ ಮಾಡಿದ ಮೊದಲ ಭಾಷಣದಲ್ಲೂ ತೀಕ್ಷ್ಣವಾಗಿ ಕಿಡಿಕಾರಿದ್ದಾರೆ. ‘ಅಗ್ನಿವೀರರು ಯೂಸ್ ಅಂಡ್ ಥ್ರೋ ಕಾರ್ಮಿಕರಿದ್ದಂತೆ. ಸೇನಾಪಡೆಯಲ್ಲಿ ಒಬ್ಬ ಜವಾನನಿಗೆ ಪಿಂಚಣಿ ಸಿಗುತ್ತದೆ, ಇನ್ನೊಬ್ಬ ಜವಾನನಿಗೆ ಸಿಗುವುದಿಲ್ಲ. ನೀವು ಜವಾನರನ್ನೂ ವಿಭಜನೆ ಮಾಡಿದ್ದೀರಿ’ ಎಂದು ಪ್ರಧಾನಿ ಮೋದಿ ವಿರುದ್ಧ ಸೋಮವಾರ ವಾಗ್ದಾಳಿ ನಡೆಸಿದರು.
‘ಅಗ್ನಿವೀರ ಯೋಜನೆಯನ್ನು ಸರಿಯಾದ ಚರ್ಚೆಯಿಲ್ಲದೆ ಜಾರಿಗೊಳಿಸಲಾಗಿದೆ. ಕೇವಲ ಪ್ರಧಾನಿ ಕಚೇರಿಯ ಆದೇಶದಂತೆ ಅದನ್ನು ಜಾರಿಗೊಳಿಸಲಾಗಿದೆ’ ಎಂದೂ ಕಿಡಿಕಾರಿದರು. ರಾಹುಲ್ ಮಾತಿಗೆ ಆಕ್ಷೇಪ ವ್ಯಕ್ತಪಡಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ‘ರಾಹುಲ್ ಗಾಂಧಿ ತಪ್ಪು ಮಾಹಿತಿ ಹರಡುತ್ತಿದ್ದಾರೆ. ಅಗ್ನಿವೀರರು ಹುತಾತ್ಮರಾದರೆ ಕುಟುಂಬಕ್ಕೆ 1 ಕೋಟಿ ರು. ಪರಿಹಾರ ನೀಡಲಾಗುತ್ತದೆ’ ಎಂದು ಸಮರ್ಥಿಸಿಕೊಂಡರು.
ಹಿಂದೂಗಳು ಹಿಂಸಾವಾದಿಗಳು ಎಂದ ರಾಹುಲ್ ಗಾಂಧಿ, 'ಇದು ಗಂಭೀರ ಟೀಕೆ..' ಎಚ್ಚರಿಸಿದ ಪ್ರಧಾನಿ ಮೋದಿ!
ಅಟಲ್ ಅವಧಿಯಲ್ಲಿ ವೆಂಕಯ್ಯ ನಾಯ್ಡು ಅವರಿಗೆ ಯಾವ ಹುದ್ದೆ ಬೇಕಾದ್ರೂ ಸಿಗ್ತಿತ್ತು ಆದರೆ ಅವರು....
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ