ತಂದೆ ಪುಣ್ಯ ತಿಥಿಗೆ 9 ಕೈದಿ ಬಿಡುಗಡೆ ಮಾಡಿಸಿದ!

Published : Jan 04, 2020, 04:07 PM ISTUpdated : Jan 04, 2020, 04:49 PM IST
ತಂದೆ ಪುಣ್ಯ ತಿಥಿಗೆ  9 ಕೈದಿ ಬಿಡುಗಡೆ ಮಾಡಿಸಿದ!

ಸಾರಾಂಶ

ತಂದೆಯ ಪುಣ್ಯ ತಿಥಿ ನಿಮಿತ್ತ 9 ಕೈದಿಗಳನ್ನು ಬಿಡುಗಡೆ ಮಾಡಿದ| ದಂಡ ಪಾವತಿಸಲಾಗದೇ ಜೈಲು ಸೇರಿದ್ದ ಕೈದಿಗಳು

ಆಗ್ರಾ[ಜ.04]: ಆಗ್ರಾ ಜೈಲಿನಲ್ಲಿ 9 ಮಂದಿ ಕೈದಿಗಳು ಜೈಲು ಶಿಕ್ಷೆ ಪೂರ್ಣಗೊಳಿಸಿದರೂ ದಂಡದ ಹಣವನ್ನು ಕಟ್ಟಲು ಸಾಧ್ಯವಾಗದ ಕಾರಣ 9 ಕೈದಿಗಳು ಇನ್ನೂ ಜೈಲಿನಲ್ಲೇ ಕಂಬಿ ಎಣಿಸುತ್ತಿದ್ದರು. ಆದರೆ, ಅವರಿಗೆ ಗುರುತು ಪರಿಚಯವೇ ಇಲ್ಲದ ವ್ಯಕ್ತಿಯೊಬ್ಬ ಆಪದ್ಬಾಂಧವನಂತೆ ಬಂದು ಅವರನ್ನು ಬಿಡುಗಡೆ ಮಾಡಿದ್ದಾನೆ.

ಸಾಮಾಜಿಕ ಕಾರ್ಯಕರ್ತ ಪ್ರವೇಂದ್ರ ಕುಮಾರ್‌ ಯಾದವ್‌ ಎನ್ನುವವರು ತಮ್ಮ ತಂದೆಯ ಪುಣ್ಯ ತಿಥಿಯ ನಿಮಿತ್ತ ಕೈದಿಗಳ ಮೇಲೆ ಉದಾರತೆ ತೋರಿದ್ದು, ಅವರು ಬಾಕಿ ಉಳಿಸಿಕೊಂಡಿದ್ದ 61,333 ರು. ದಂಡದ ಮೊತ್ತ ಪಾವತಿಸಿದ್ದಾರೆ.

ಹೀಗಾಗಿ ಕೈದಿಗಳಿಗೆ ಬಿಡುಗಡೆ ಭಾಗ್ಯ ಲಭ್ಯವಾಗಿದೆ. ಆದರೆ, ಬಿಡುಗಡೆ ಆದ ಕೈದಿಗಳಿಗೆ ಪ್ರವೇಂದ್ರ ಕುಮಾರ್‌ ಯಾರು ಎಂದೇ ಗೊತ್ತಿಲ್ಲ. ಅವರನ್ನು ಒಮ್ಮೆಯೂ ಭೇಟಿ ಆಗಿಲ್ಲವಂತೆ.

ಕೆಲ ಮೂಲಗಳಿಂದ ಕೈದಿಗಳನ್ನು ಬಿಡುಗಡೆ ಮಾಡಿದ್ದ ಪ್ರವೇಂದ್ರ ಕುಮಾರ್ ಓರ್ವ ಸಾಮಾಜಿಕ ಕಾರ್ಯಕರ್ತ ಎಂದು ತಿಳಿದು ಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಕ್ಷಿಸಲು ಹೋದವನನ್ನೇ ಕೆಳಗೆ ತಳ್ಳಿದ ಮಾನಸಿಕ ಅಸ್ವಸ್ಥ: ಜೀವ ಉಳಿಸಲು ಹೋಗಿ ಕೈಕಾಲು ಮುರಿದುಕೊಂಡ ಯುವಕ
ಉದ್ಯಮಿಗೆ ಲವ್‌ ಟ್ರ್ಯಾಪ್‌, ವೈರಲ್‌ ಆದ ಡಿಎಸ್‌ಪಿ ಕಲ್ಪನಾ ವರ್ಮಾ ಚಾಟ್‌..!