
ಆಗ್ರಾ(ಮೇ.31): ಉತ್ತರ ಪ್ರದೇಶದ ಆಗ್ರಾದಲ್ಲಿ ರಾತ್ರಿ ಸುರಿದ ಗುಡುಗು ಸಹಿತ ಗಾಳಿ ಮಳೆಯಿಂದಾಗಿ ವಿಶ್ವಪ್ರಸಿದ್ಧ ಐತಿಹಾಸಿಕ ಕಟ್ಟಡ ತಾಜ್ ಮಹಲ್ಗೆ ಹಾನಿಯುಂಟಾಗಿದ್ದು, ಮೂವರು ಮೃತಪಟ್ಟಿದ್ದಾರೆ. ಮೃತರ ಕುಟುಂಬಕ್ಕೆ ಆಗ್ರಾ ಜಿಲ್ಲಾಡಳಿತ ತಲಾ 4 ಲಕ್ಷ ರೂ ಪರಿಹಾ ಘೋಷಿಸಿದೆ.
ಈ ಭೀಕರ ಗಾಳಿ ಮಳೆಯಿಂದ ಯಮುನಾ ನದಿಯ ಬದಿಗಿರುವ ತಾಜ್ ಮಹಲ್ನ ಹಿಂಭಾಗದಲ್ಲಿರುವ ಅಮೃತಶಿಲೆಯ ಅಡ್ಡಕಂಬಿಗಳ ಒಂದು ಭಾಗ ಬಿದ್ದು ಕೆಂಪು ಮರಳುಗಲ್ಲಿನ ಕಂಬಿಗಳ ಎರಡು ಫಲಕಗಳು ಸಹ ಹಾನಿಗೊಳಗಾಗಿವೆ. ಟಿಕೆಟ್ ನೀಡುವ ಪ್ರದೇಶದ ಪಶ್ಚಿಮ ಗೇಟ್ ಮತ್ತು ಫ್ರಿಸ್ಕಿಂಗ್ ಗೇಟ್ಗಳಿಗೆ ಹಾನಿಯಾಗಿದೆ. ಅಲ್ಲದೇ ಆಸು ಪಾಸಿನಲ್ಲಿದ್ದ ಹಲವಾರು ಮರಗಳು ನೆಲಕ್ಕುರುಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಂಬಂಧ ಸುದ್ದಿ ಸಂಸ್ಥೆ ಎಎನ್ಐಗೆ ಪ್ರತಿಕ್ರಿಯಿಸಿದ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಯೋಗೇಂದ್ರ ಕುಮಾರ್ ಬಿರುಗಾಳಿಯಿಂದಾಗಿ ಮೂವರು ಮೃತಪಟ್ಟಿದ್ದು, ಹಲವಾರು ಪ್ರಾಣಿಗಳೂ ಸಾವನ್ನಪ್ಪಿವೆ. ಕೆಲ ಮನೆಗಳಿಗೂ ಹಾನಿಯಾಗಿದೆ. ಈ ಸಂಬಂಧ ಸಮೀಕ್ಷೆ ನಡೆಸುತ್ತಿದ್ದೇವೆ. ಮೃತರ ರಕ್ತಸಂಬಂಧಿಗಳಿಗೆ ಜಿಲ್ಲಾಡಳಿತ ತಲಾ 4 ಲಕ್ಷ ಪರಿಹಾರವನ್ನು ನೀಡಲಿದೆ ತಿಳಿಸಿದ್ದಾರೆ.
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಕೂಡಾ ಮೃತರ ಕುಟುಂಬಕ್ಕೆ ಸಾಂತ್ವನ ಕೋರಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ