ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ 5 ಎಕರೆ ಭೂಮಿ ಹಸ್ತಾಂತರ!

Published : Aug 04, 2020, 01:02 PM IST
ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ 5 ಎಕರೆ ಭೂಮಿ ಹಸ್ತಾಂತರ!

ಸಾರಾಂಶ

ರಾಮ ಮಂದಿರ ಶಂಕು ಸ್ಥಾಪನೆಗೆ ಎರಡು ದಿನ ಬಾಕಿ| ಸುಪ್ರೀಂ ಕೋರ್ಟ್‌ ಆದೇಶದ ಅನುಸಾರ ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ 5 ಎಕರೆ ಭೂಮಿ ಹಸ್ತಾಂತರ!| ಭೂಮಿಯ ದಾಖಲೆಗಳನ್ನು ಹಸ್ತಾಂತರಿಸಿದ ಅಯೋಧ್ಯೆ ಜಿಲ್ಲಾಧಿಕಾರಿ

ಅಯೋಧ್ಯೆ(ಆ.04): ರಾಮ ಮಂದಿರ ಶಂಕು ಸ್ಥಾಪನೆಗೆ ಎರಡು ದಿನ ಬಾಕಿ ಇರುವಾಗಲೇ, ಸುಪ್ರೀಂ ಕೋರ್ಟ್‌ ಆದೇಶದ ಅನುಸಾರ ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ಮುಸ್ಲಿಂ ಪಕ್ಷಕ್ಕೆ ಐದು ಎಕರೆ ಭೂಮಿ ಹಸ್ತಾಂತರಿಸಲಾಗಿದೆ. ಅಯೋಧ್ಯೆ ಜಿಲ್ಲಾಧಿಕಾರಿ ಅನುಜ್‌ ಕುಮಾರ್‌ ಝಾ ಅವರು ಸೋಮವಾರ ಭೂಮಿಯ ದಾಖಲೆಗಳನ್ನು ಸುನ್ನೀ ವಖ್‌್ಫ ಬೋರ್ಡ್‌ಗೆ ಹಸ್ತಾಂತರಿಸಿದರು.

ವಖ್‌್ಫ ಬೋರ್ಡ್‌ ಅಧ್ಯಕ್ಷ ಝುಫರ್‌ ಫಾರೂಖಿ ಹಾಗೂ ಸಿಒಒ ಸಯ್ಯದ್‌ ಮೊಹಮ್ಮದ್‌ ಶುಐಬ್‌ ನೇತೃತ್ವದಲ್ಲಿ, ಮಸೀದಿ ನಿರ್ಮಾಣಕ್ಕೆ ರಚಿಸಲಾಗಿರುವ ಇಂಡೋ-ಇಸ್ಲಾಮಿಕ್‌ ಕಲ್ಚರಲ್‌ ಫೌಂಡೇಶನ್‌ನ ನಿಯೋಗ ಜಿಲ್ಲಾಧಿಕಾರಿಗಳಿಂದ ಭೂ ದಾಖಲೆಗಳನ್ನು ಪಡೆದುಕೊಂಡಿದೆ. ರಾಮ ಮಂದಿರದಿಂದ 25 ಕಿ.ಮಿ ದೂರದ ಫೈಜಾಬಾದ್‌ನ ಧನ್ನೀಪುರ ಎಂಬಲ್ಲಿ ಸ್ಥಳ ನೀಡಲಾಗಿದೆ.

2019 ನ.9 ತೀರ್ಪಿನ ವೇಳೆ ಸುನ್ನೀ ವಖ್‌್ಫ ಮಂಡಳಿಗೆ ಮಸೀದಿ ನಿರ್ಮಾಣಕ್ಕೆ 5 ಎಕರೆ ಭೂಮಿ ನೀಡಬೇಕು ಎಂದು ಸವೋಚ್ಛ ನ್ಯಾಯಾಲಯ ತೀರ್ಪು ನೀಡಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

India Latest News Live: ಕೆಎಸ್‌ಸಿಎ ಚುನಾವಣೆ - ಅಸ್ತಿತ್ವದಲ್ಲೇ ಇಲ್ಲದ ಕ್ಲಬ್‌ಗಳ ಹೆಸರು ಮತದಾನ ಪಟ್ಟಿಯಲ್ಲಿ ಪತ್ತೆ!
ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಡಿಕೆಗೆ ದಿಲ್ಲಿ ಪೊಲೀಸ್‌ ನೋಟಿಸ್‌