
ನವದೆಹಲಿ/ಚೆನ್ನೈ(ಜು.27): ಬೆಂಗಳೂರು ಸೇರಿ ಇನ್ನಿತರ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ ಮೇಕೆದಾಟು ಯೋಜನೆ ಆರಂಭಿಸುವ ಕರ್ನಾಟಕ ಸರ್ಕಾರಕ್ಕೆ ಸಹಕಾರ ನೀಡದಂತೆ ಎಐಎಡಿಎಂಕೆ ಪಕ್ಷ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.
ಈ ಸಂಬಂಧ ಎಐಎಡಿಎಂಕೆ ಹಿರಿಯ ನಾಯಕರಾದ ಒ. ಪನ್ನೀರ್ಸೆಲ್ವಂ ಮತ್ತು ಕೆ. ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆಯ ನಿಯೋಗವು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಈ ಮನವಿ ಸಲ್ಲಿಸಿತು.
ಈ ವೇಳೆ ಮಾತನಾಡಿದ ಪಳನಿಸ್ವಾಮಿ, ತಮಿಳುನಾಡಿನ ಕೃಷಿ ಮತ್ತು 16 ಜಿಲ್ಲೆಗಳು ಕುಡಿಯುವ ನೀರಿಗಾಗಿ ಕಾವೇರಿ ನದಿಯನ್ನೇ ಅವಲಂಬಿಸಿವೆ. ಹೀಗಾಗಿ ಮೇಕೆದಾಟು ಯೋಜನೆ ಆರಂಭಿಸಲು ಕರ್ನಾಟಕ ಸರ್ಕಾರಕ್ಕೆ ಅನುಮತಿ ನೀಡಬಾರದು ಎಂದು ಕೋರಲಾಗಿದೆ ಎಂದರು.
ಒಂದು ವೇಳೆ ಅನುಮತಿ ನೀಡಿದರೆ ಕಾವೇರಿ ಭಾಗದಲ್ಲಿರುವ ರಾಜ್ಯದ ಜಿಲ್ಲೆಗಳು ಮರುಭೂಮಿಯಾಗಲಿವೆ ಎಂದು ಆತಂಕ ವ್ಯಕ್ತಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ