ಸ್ನೇಹಿತರ ಬಗ್ಗೆಯೇ ಪ್ರಧಾನಿ ಮೋದಿ ಟೀಕೆ ಏಕೆ?: ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯ

Published : May 09, 2024, 08:52 AM IST
ಸ್ನೇಹಿತರ ಬಗ್ಗೆಯೇ ಪ್ರಧಾನಿ ಮೋದಿ ಟೀಕೆ ಏಕೆ?: ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯ

ಸಾರಾಂಶ

ಲೋಕಸಭೆಗೆ ಮೂರು ಹಂತದ ಚುನಾವಣೆ ಮುಗಿಯುತ್ತಲೇ ಪ್ರಧಾನಿ ನರೇಂದ್ರ ಮೋದಿ ಅವರ ಕುರ್ಚಿ ಅಲುಗಾಡತೊಡಗಿದೆ. ಹೀಗಾಗಿ ಅವರೀಗ ತಮ್ಮ ಸ್ನೇಹಿತರ (ಅಂಬಾನಿ-ಅದಾನಿ) ವಿರುದ್ಧ ದಾಳಿ ಆರಂಭಿಸಿದ್ದಾರೆ. 

ನವದೆಹಲಿ (ಮೇ.09): ಲೋಕಸಭೆಗೆ ಮೂರು ಹಂತದ ಚುನಾವಣೆ ಮುಗಿಯುತ್ತಲೇ ಪ್ರಧಾನಿ ನರೇಂದ್ರ ಮೋದಿ ಅವರ ಕುರ್ಚಿ ಅಲುಗಾಡತೊಡಗಿದೆ. ಹೀಗಾಗಿ ಅವರೀಗ ತಮ್ಮ ಸ್ನೇಹಿತರ (ಅಂಬಾನಿ-ಅದಾನಿ) ವಿರುದ್ಧ ದಾಳಿ ಆರಂಭಿಸಿದ್ದಾರೆ. ಇದು ಲೋಕಸಭಾ ಚುನಾವಣೆಯ ಫಲಿತಾಂಶದ ನಿಜವಾದ ಟ್ರೆಂಡ್‌ ತೋರಿಸುತ್ತಿದೆ ಎಂದು ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯವಾಡಿದ್ದಾರೆ.

‘ಚುನಾವಣೆ ಆರಂಭವಾದ ಬಳಿಕ ಶೆಹಜಾದಾ, ಅಂಬಾನಿ-ಅದಾನಿ ನಿಂದನೆ ನಿಲ್ಲಿಸಿದ್ದಾರೆ’ ಎಂಬ ಪ್ರಧಾನಿ ಮೋದಿ ಆರೋಪಕ್ಕೆ ಎಕ್ಸ್‌’ನಲ್ಲಿ ಪ್ರತಿಕ್ರಿಯೆ ನೀಡಿರುವ ಖರ್ಗೆ, ‘ಕಾಲ ಬದಲಾಗುತ್ತಿದೆ. ಸ್ನೇಹಿತರು ಇದೀಗ ಸ್ನೇಹಿತರಾಗಿ ಉಳಿದಿಲ್ಲ. ಮೂರು ಹಂತದ ಚುನಾವಣೆ ಮುಗಿಯುತ್ತಲೇ ಪ್ರಧಾನಿ ಮೋದಿ ತಮ್ಮ ಸ್ನೇಹಿತರ ವಿರುದ್ಧವೇ ವಾಗ್ದಾಳಿ ಆರಂಭಿಸಿದ್ದಾರೆ. ಇದು ಮೋದಿ ಕುರ್ಚಿ ಅಲುಗಾಡುತ್ತಿದೆ ಎಂಬುದನ್ನು ಖಚಿತಪಡಿಸಿದೆ’ ಎಂದಿದ್ದಾರೆ.

ವರ್ಣದ್ವೇಷ ಎಂದಿಗೂ ಸಹಿಸಲ್ಲ: ಪಿತ್ರೋಡಾ ಹೇಳಿಕೆಗೆ ಪ್ರಧಾನಿ ಮೋದಿ ಕಿಡಿ

ಇನ್ನೊಂದೆಡೆ ರಾಯ್‌ಬರೇಲಿಯಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಪ್ರಿಯಾಂಕಾ ವಾದ್ರಾ, ‘ಅಂಬಾನಿ- ಅದಾನಿ ಬ್ಗೆ ರಾಹುಲ್‌ ಏಕೆ ಮಾತನಾಡುತ್ತಿಲ್ಲ ಎಂದು ಅವರು (ಮೋದಿ) ಪ್ರಶ್ನಿಸುತ್ತಿದ್ದಾರೆ. ಆದರೆ ರಾಹುಲ್‌ ಪ್ರತಿದಿನವೂ ಸತ್ಯವನ್ನು ನಿಮ್ಮ ಮುಂದೆ ಇಡುವ ಪ್ರಯತ್ನ ಮಾಡುತ್ತಲೇ ಇದ್ದಾರೆ. ಬಿಜೆಪಿಗೆ ಉದ್ಯಮಿಗಳ ಜೊತೆ ನಂಟಿದೆ ಎಂದು ನಾವು ಪ್ರತಿ ದಿನವೂ ಹೇಳುತ್ತಿದ್ದೇವೆ. ಪ್ರಧಾನಿ ಮೋದಿ ದೊಡ್ಡ ಉದ್ಯಮಿಗಳ 16 ಲಕ್ಷ ಕೋಟಿ ರು. ಸಾಲ ಮನ್ನಾ ಮಾಡಿದ್ದಾರೆ ಎಂಬುದನ್ನು ನೀವು ಅರ್ಥ ಮಾಡಿಕೊಳ್ಳಬೇಕು. ಅದೆಲ್ಲಾ ಯಾರ ದುಡ್ಡು? ಅದು ಮೋದಿಯ ದುಡ್ಡಲ್ಲ, ಅದು ದೇಶದ ಹಣ’ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಟ್ರಂಪ್‌ಗೆ ಮುಯ್ಯಿಗೆ ಮುಯ್ಯಿ, ಪುಟಿನ್‌ ಜೊತೆ ಭಾಯಿ ಭಾಯಿ!
ಇನ್ನೂ 10 ದಿನಗಳ ಕಾಲ ಇಂಡಿಗೋಳು