ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಗಳಲ್ಲಿ ಒಂದಾದ ಉಡಾನ್ ಯೋಜನೆಯಲ್ಲಿ ಶೇ.93ರಷ್ಟು ಮಾರ್ಗಗಳು ವಿಫಲವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆರೋಪಿಸಿದ್ದಾರೆ. ಈ ಕುರಿತು ಮಹಾಲೇಖಪಾಲಕರ (ಸಿಎಜಿ) ವರದಿಯನ್ನು ಉಲ್ಲೇಖಿಸಿದ ಅವರು, ಉಡಾನ್ ಯೋಜನೆಯಲ್ಲಿ ಜಾರಿಯಾದ 371 ಮಾರ್ಗಗಳಲ್ಲಿ ಶೇ.30 (112 ಮಾರ್ಗಗಳು) ಮಾತ್ರ ಮೂರು ವರ್ಷದ ಪೂರ್ಣ ಅವಧಿಯನ್ನು ಪೂರ್ಣಗೊಳಿಸಿದೆ. ಈ 112 ಮಾರ್ಗಗಳ ಪೈಕಿ ಕೇವಲ 54 ಮಾರ್ಗಗಳು 17 ಸ್ಥಳೀಯ ವಿಮಾನ ನಿಲ್ದಾಣಗಳನ್ನು ಅವಧಿಯ ನಂತರವೂ ಸಂಪರ್ಕಿಸುತ್ತಿದೆ. ಉಡಾನ್ ಯೋಜನೆಯ 116 ವಿಮಾನ ನಿಲ್ದಾಣ/ ಹೆಲಿಪ್ಯಾಡ್ಗಳಲ್ಲಿ ಕೇವಲ 71 ಮಾತ್ರ ಕಾರ್ಯನಿರ್ವಹಿಸುತ್ತಿದೆ. ಇದು ಕೇಂದ್ರ ಸರ್ಕಾರದ ವೈಫಲ್ಯ ಎಂದು ಆರೋಪಿಸಿದರು.
ಶಿವಮೊಗ್ಗದಿಂದ ಉಡಾನ್ ಯೋಜನೆಯಡಿ ತಿರುಪತಿ, ಗೋವಾ, ಹೈದರಾಬಾದ್ಗೂ ವಿಮಾನ; ಸಚಿವ ಎಂ.ಬಿ.ಪಾಟೀಲ
ಕಲಬುರ್ಗಿ- ಮಂಗಳೂರು ವಿಮಾನ ಸಂಚಾರ ನಿತ್ಯ ಪ್ರಾರಂಭಿಸಲು ಒತ್ತಾಯ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ